ಬ್ರೇಕಿಂಗ್ ನ್ಯೂಸ್
01-09-21 03:24 pm Filmbeat Kannada ಸಿನಿಮಾ
ಬಾಲಿವುಡ್ ಖ್ಯಾತ ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಬಾನು ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮುಂಬೈನ ಹಿಂದುಜಾ ಆಸ್ಪತ್ರೆಗೆ ಸೈರಾ ಬಾನು ಅವರನ್ನು ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸೈರಾ ಬಾನು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಕಳೆದ 3 ದಿನಗಳ ಹಿಂದೆಯೇ ಸೈರಾ ಬಾನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು (ಸೆಪ್ಟಂಬರ್ 1) ಐ ಸಿ ಯುಗೆ ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇತ್ತೀಚಿಗಷ್ಟೆ ಸೈರಾ ಬಾನು ಪ್ರೀತಿಯ ಪತಿ ದಿಲೀಪ್ ಕುಮಾರ್ ಅವರನ್ನು ಕಳೆದುಕೊಂಡಿದ್ದರು. ಪತಿಯ ಅಗಲಿಕೆಯ ನೋವಿನಲ್ಲಿದ್ದ ಸೈರಾ ಈಗ ದಿಢೀರ್ ಆಸ್ಪತ್ರೆಗೆ ದಾಖಲಾಗಿರುವುದು ಸ್ನೇಹಿತರಲ್ಲಿ ಆತಂಕ ಮನೆ ಮಾಡಿದೆ. ಸೈರಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಅವರ ಕುಟುಂಬದವರಾಗಲಿ ಅಥವಾ ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

ನಟ ದಿಲೀಪ್ ಕುಮಾರ್ ವಯೋಸಹಜ ಕಾಯಿಲೆಯಿಂದ ಜುಲೈ 7ರಂದು ನಿಧನ ಹೊಂದಿದರು. 98 ವರ್ಷದ ನಟ ದಿಲೀಪ್ ಅನಾರೋಗ್ಯದ ಕಾರಣ ಆಗಾಗ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 7ರಂದು ಕೊನೆಯುಸಿರೆಳೆದರು. ಸೈರಾ ಬಾನು ಮತ್ತು ದಿಲೀಪ್ ಇಬ್ಬರದ್ದು ಪ್ರೇಮ ವಿವಾಹ. ಇಬ್ಬರೂ ಮದುವೆಯಾಗಿ 54 ವರ್ಷಗಳು ಕಳೆದಿವೆ. ಇಬ್ಬರ ಪ್ರೇಮ ಕಥೆ ಬಾಲಿವುಡ್ ನಲ್ಲಿ ಮರೆಯಲಾಗದ ಪ್ರೇಮಕಥೆಯಾಗಿದೆ.
ಕೊನೆಯದಾಗಿ ಸೈರಾ ಬಾನು ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಪತಿ ಆರೋಗ್ಯದ ಬಗ್ಗೆ ಮಾತನಾಡಿದ್ದರು. ದಿಲೀಪ್ ಕುಮಾರ್ ಆರೋಗ್ಯ ತೀರ ಹದಗೆಟ್ಟಿದೆ ಎಂದು ಹೇಳಿದ್ದರು. "ಅವರ ಆರೋಗ್ಯ ತುಂಬಾ ಹದಗೆಟ್ಟಿದೆ. ತುಂಬಾ ದುರ್ಬಲ ಆಗಿದ್ದಾರೆ. ಮನೆಯೊಳಗೆ ಮಾತ್ರ ಓಡಾಡುತ್ತಾರೆ. ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ" ಎಂದು ಹೇಳಿದ್ದರು. ಜೊತೆಗೆ ಪತಿಯನ್ನು ಹಾಡಿ ಹೊಗಳಿದ್ದರು. ಇದೀಗ ಸ್ವತಃ ಸೈರಾ ಅವರೇ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈರಾ ಬೇಗ ಗುಣಮುಖರಾಗಲಿ ಎಂದು ಸ್ನೇಹಿತರು, ಚಿತ್ರರಂಗದ ಗಣ್ಯರು ಹಾರೈಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am