ಬ್ರೇಕಿಂಗ್ ನ್ಯೂಸ್
08-09-21 12:50 pm Filmbeat: Manjunatha C ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಟ್ವೀಟ್ರ್ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅಕ್ಷಯ್ ಕುಮಾರ್, ''ಆಕೆ ನನ್ನ ಬೇರಾಗಿದ್ದಳು. ನಾನು ಇಂದು ತಡೆದುಕೊಳ್ಳಲಾಗದಷ್ಟು ದುಃಖದಲ್ಲಿದ್ದೇನೆ. ನನ್ನ ತಾಯಿ ಶ್ರೀಮತಿ ಅರುಭಾ ಭಾಟಿಯಾ ಇಂದು ಮುಂಜಾನೆ ಶಾಂತವಾಗಿ ಈ ಲೋಕವನ್ನು ಬಿಟ್ಟು ಹೋಗಿದ್ದಾಳೆ. ಆಕೆ ಬೇರೆ ಲೋಕದಲ್ಲಿ ನನ್ನ ತಂದೆಯನ್ನು ಸೇರಿಕೊಂಡಿದ್ದಾಳೆ. ಕಠಿಣ ಸಮಯದಲ್ಲಿ ನನ್ನ ಕುಟುಂಬದ ಪರವಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ, ಓಂ ಶಾಂತಿ'' ಎಂದಿದ್ದಾರೆ.

ಮಂಗಳವಾರ ಟ್ವೀಟ್ ಮಾಡಿದ್ದ ಅಕ್ಷಯ್ ಕುಮಾರ್, ''ನನ್ನ ತಾಯಿಯ ಆರೋಗ್ಯದ ಬಗ್ಗೆ ನಿಮ್ಮ ಕಾಳಜಿ ನೋಡಿ ಮನಸ್ಸು ತುಂಬಿ ಬಂದಿದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಇದು ಬಹಳ ಕಠಿಣ ಸಮಯ. ನಿಮ್ಮ ಪ್ರತಿಯೊಬ್ಬರ ಪ್ರಾರ್ಥನೆ ನಮಗೆ ಸಹಕಾರಿ ಆಗಲಿದೆ'' ಎಂದಿದ್ದರು. ಆದರೆ ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ, ಅಕ್ಷಯ್ ತಾಯಿ ಇಂದು ಬೆಳಿಗ್ಗೆ ಅಸುನೀಗಿದ್ದಾರೆ.
ಸೆಪ್ಟೆಂಬರ್ 5 ರಂದೇ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮುಂಬೈನ ಹೀರಾನಂದಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿಯ ಆರೋಗ್ಯ ಕ್ಷೀಣಿಸಿದ ವಿಷಯ ತಿಳಿದ ಕೂಡಲೇ ಬ್ರಿಟನ್ನಲ್ಲಿನ ಚಿತ್ರೀಕರಣ ಅರ್ಧಕ್ಕೆ ಕೈಬಿಟ್ಟು ಸೆಪ್ಟೆಂಬರ್ 6ರಂದು ಭಾರತಕ್ಕೆ ವಾಪಸ್ಸಾಗಿದ್ದರು ಅಕ್ಷಯ್. ಬ್ರಿಟನ್ನಲ್ಲಿ 'ಸಿಂಡ್ರೆಲಾ' ಸಿನಿಮಾದ ಶೂಟಿಂಗ್ನಲ್ಲಿ ಅಕ್ಷಯ್ ಕುಮಾರ್ ತೊಡಿಗಿಸಿಕೊಂಡಿದ್ದರು. ಅಕ್ಷಯ್ ಕುಮಾರ್ ತಂದೆ ಹರಿ ಓಮ್ ಭಾಟಿಯಾ ಸೈನ್ಯಾಧಿಕಾರಿ ಆಗಿದ್ದರು, ತಾಯಿ ಅರುಣಾ ಭಾಟಿಯಾ ಗೃಹಿಣಿ ಆಗಿದ್ದರು. ನಂತರ ನಿರ್ಮಾಪಕಿಯಾಗಿಯೂ ಬದಲಾದರು. ಹರಿ ಓಂ ಪ್ರೊಡಕ್ಷನ್ ಹೌಸ್ನ ಪಾಲುದಾರೆ ಆಗಿದ್ದ ಅವರು, ಪ್ರೊಡಕ್ಷನ್ ಹೌಸ್ ಮೂಲಕ 'ಸಿಂಗ್ ಈಸ್ ಕಿಂಗ್', 'ಓಹ್ ಮೈ ಗಾಡ್', 'ಹಾಲಿಡೇ', 'ಏರ್ಲಿಫ್ಟ್', 'ರುಸ್ತುಂ', 'ನಾಮ್ ಶಬಾನಾ', 'ಟಾಯ್ಲೆಟ್', 'ಚುಂಬಕ್' ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
She was my core. And today I feel an unbearable pain at the very core of my existence. My maa Smt Aruna Bhatia peacefully left this world today morning and got reunited with my dad in the other world. I respect your prayers as I and my family go through this period. Om Shanti 🙏🏻
— Akshay Kumar (@akshaykumar) September 8, 2021
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm