ಬ್ರೇಕಿಂಗ್ ನ್ಯೂಸ್
08-09-21 03:35 pm Filmbeat Kannada ಸಿನಿಮಾ
ಸ್ಯಾಂಡಲ್ವುಡ್ನ ಖ್ಯಾತ ಕಾಮಿಡಿ ಸ್ಟಾರ್ ದಿವಂಗತ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಘಟನೆ ಬೆಂಗಳೂರಿನ ಹೆಬ್ಬಾಳ ಬಳಿ ನಡೆದಿದೆ. ನಿನ್ನೆ ರಾತ್ರಿ (ಸೆಪ್ಟಂಬರ್ 7) ಈ ಘಟನೆ ನಡೆದಿದ್ದು, ಕೆಲವು ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಬಂದಿದೆ. ರಾತ್ರಿ 9 ಗಂಟೆಗೆ ಜಿಮ್ ಮುಗಿಸಿ ರಕ್ಷಕ್ ಮನೆಗೆ ವಾಪಸಾಗುತ್ತಿದ್ದಾಗ, ಅವರ ಬ್ಯಾಗ್ ಅನ್ನು ಮಂಗಳಮುಖಿಯರು ಎಳೆದಿದ್ದಾರೆ. ಆಗ ಬೈಕ್ನಿಂದ ಕೆಳಗೆ ಬಿದ್ದ ರಕ್ಷಕ್ಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನುವ ಮಾಹಿತಿ ತಿಳಿದುಬಂದಿದೆ.
ತಕ್ಷಣ ಬೈಕ್ ಸ್ಥಳದಲ್ಲಿಯೇ ಬಿಟ್ಟು ರಕ್ಷಕ್ ಓಡಿಹೋಗಿದ್ದಾರೆ. ಬಳಿಕ ಪೊಲೀಸರ ಸಹಾಯದಿಂದ ಬೈಕ್ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಹೆಬ್ಬಾಳ ಫ್ಲೈ ಓವರ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್ನಿಂದ ಕೆಳಗೆ ಬಿದ್ದ ರಕ್ಷಕ್ ಕಾಲಿಗೆ ತರಚಿದ ಗಾಯಗಳಿದ್ದು, ಗಾಡಿಯೂ ಡ್ಯಾಮೇಜ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಂಗಳ ಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ಫ್ಲೈ ಓವರ್ ಮೇಲೆ ಗಾಡಿ ಬಿಟ್ಟು ರಕ್ಷಕ್ ಓಡಿಹೋಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾತ್ರಿ ಪ್ರಯಾಣಿಕರು ಭಯಪಡುವಂತಾಗಿದೆ. ಇನ್ನು ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಚಿತ್ರರಂಗಕ್ಕೆ ಎಂಟ್ರಿ ಕೊಡುವ ತಯಾರಿಯಲ್ಲಿದ್ದಾರೆ. ತಂದೆಯ ನಿಧನದ ಬಳಿಕ ರಕ್ಷಕ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಈಗಾಗಲೇ ರಕ್ಷಕ್ ನಟನೆಯ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು, ಬಹುತೇಕ ಚಿತ್ರೀಕರಣ ಸಹ ಮುಗಿಸಿದ್ದಾರೆ. ಗುರುಶಿಷ್ಯರು ಎನ್ನುವ ಟೈಟಲ್ನಲ್ಲಿ ನಟ ಶರಣ್ ಮತ್ತು ತಂಡದವರು ಹೊಸ ಸಿನಿಮಾ ಮಾಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಜಡೇಶ್ ಗುರುಶಿಷ್ಯರು ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಶರಣ್ ಶಿಷ್ಯನ ಪಾತ್ರದಲ್ಲಿ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ವಿಶೇಷ ಎಂದರೆ ನೆನಪಿರಲಿ ಪ್ರೇಮ್ ಪುತ್ರ ಏಕಾಂತ್ ಕೂಡ ಗುರುಶಿಷ್ಯರು ಸಿನಿಮಾಗಾಗಿ ಬಣ್ಣ ಹಚ್ಚಿದ್ದಾರೆ. ಇದಲ್ಲದೆ ಬಹಳಷ್ಟು ಕಲಾವಿದರು ಮಕ್ಕಳು ಗುರುಶಿಷ್ಯರು ಸಿನಿಮಾದಲ್ಲಿ ನಟಿಸಿದ್ದಾರೆ ಅನ್ನೊ ಮಾಹಿತಿ ಇದೆ.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm