ಬ್ರೇಕಿಂಗ್ ನ್ಯೂಸ್
09-09-21 10:48 am Filmbeat: Manjunatha C ಸಿನಿಮಾ
ಬಾಲಿವುಡ್ ಸಿನಿಮಾದಲ್ಲೂ ನಟಿಸಿರುವ ಪಾಕಿಸ್ತಾನದ ನಟಿ ಸಬಾ ಖಮರ್ ಹಾಗೂ ಗಾಯಕ ಬಿಲಾಲ್ ಸೈಯದ್ ವಿರುದ್ಧ ಪಾಕಿಸ್ತಾನದ ಸ್ಥಳೀಯ ನ್ಯಾಯಾಲಯವೊಂದು ಬಂಧನದ ವಾರೆಂಟ್ ಹೊರಡಿಸಿದೆ.
ಬಾಲಿವುಡ್ನ 'ಹಿಂದಿ ಮೀಡಿಯಮ್' ಸಿನಿಮಾದಲ್ಲಿ ನಟಿಸಿರುವ ಸಬಾ ಖಮರ್ ಪಾಕಿಸ್ತಾನದ ಐತಿಹಾಸಿಕ ಮಸೀದಿಯೊಂದರ ಮುಂದೆ ಡ್ಯಾನ್ಸ್ ಮಾಡಿ ಅದರ ವಿಡಿಯೋ ಚಿತ್ರೀಕರಣ ಮಾಡಿದ್ದರು. ಹಾಗಾಗಿ ಅವರ ವಿರುದ್ದ ದೂರು ದಾಖಲಾಗಿತ್ತು.
ಲಾಹೋರ್ನ ಐತಿಹಾಸಿಕ ಮಸೀದಿಯ ಡ್ಯಾನ್ಸ್ ಮಾಡುವ ಮೂಲಕ ಮಸೀದಿಯನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿ ಸಬಾ ಖಮರ್ ಹಾಗೂ ಬಿಬಾಲ್ ವಿರುದ್ಧ ದೂರು ದಾಖಲಿಸಲಾಗಿತ್ತು. ಪಾಕಿಸ್ತಾನ ಪಿನಲ್ ಕೋಡ್ 256 ರ ಅಡಿ ಇಬ್ಬರು ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ನ್ಯಾಯಾಲಯದಲ್ಲಿ ಹಲವು ದಿನದಿಂದ ಈ ಕುರಿತು ವಿಚಾರಣೆ ಚಾಲ್ತಿಯಲ್ಲಿತ್ತು ಆದರೆ ಹಲವು ಸಮನ್ಸ್ ನೀಡಿದ್ದರೂ ಸದಾ ಖಮರ್ ಹಾಗೂ ಬಿಲಾಲ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲವಾದ್ದರಿಂದ ಇಬ್ಬರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲಾಗಿದೆ. ಡ್ಯಾನ್ಸ್ ವಿಡಿಯೋಕ್ಕೆ ಅನುಮತಿ ನೀಡಿದ ಇಬ್ಬರು ಅಧಿಕಾರಿಗಳನ್ನು ಸಹ ಅಮಾನತು ಮಾಡಲಾಗಿದೆ.
ಸಬಾ ಖಮರ್ರ ಡ್ಯಾನ್ಸ್ ವಿಡಿಯೋ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದ್ದು, ಸಬಾ ಖಮರ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ನಿಂದನೆ, ಕೊಲೆ ಬೆದರಿಕೆಗಳು ಬಂದಿವೆ. ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಇಬ್ಬರೂ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣ ಮೂಲಕ ಕ್ಷಮೆ ಕೇಳಿದ್ದಾರೆ. ''ಮ್ಯೂಸಿಕ್ ವಿಡಿಯೋನಲ್ಲಿ ಮದುವೆಯ ದೃಶ್ಯ ಇತ್ತು. ಅದನ್ನು ಮಸೀದಿಯ ಮುಂದೆ ಚಿತ್ರೀಕರಣ ಮಾಡಿದ್ದೇವೆ. ಅದಕ್ಕೆ ಯಾವುದೇ ಹಿನ್ನೆಲೆ ಸಂಗೀತವನ್ನು ಸಹ ನಾವು ನೀಡಿಲ್ಲ. ನಮ್ಮ ವಿಡಿಯೋದಿಂದ ಯಾರದ್ದಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಇರಲಿ'' ಎಂದಿದ್ದಾರೆ.
ಬಾಲಿವುಡ್ನ 'ಹಿಂದಿ ಮೀಡಿಯಮ್' ಸಿನಿಮಾದಲ್ಲಿ ಸಬಾ ಖಮರ್ ನಟಿಸಿದ್ದರು. ಈ ಸಿನಿಮಾದಲ್ಲಿ ಇರ್ಫಾನ್ ಖಾನ್ ನಾಯಕನಾಗಿ ನಟಿಸಿದ್ದರು. ಪಾಕಿಸ್ತಾನದ ಸಾಮಾಜಿಕ ಜಾಲತಾಣ ಸೆಲೆಬ್ರಿಟಿ ಖಂದಿಲ್ ಬಲೂಚ್ ಜೀವನ ಆಧರಿತ ಸಿನಿಮಾದಲ್ಲಿಯೂ ಸಬಾ ನಟಿಸಿದ್ದರು. ಸಾಮಾಜಿಕ ಜಾಲತಾಣ ಸ್ಟಾರ್ ಆಗಿದ್ದ ಖಂದಿಲ್ ಬಲೂಚ್ ಕುಟುಂಬ ಗೌರವನ್ನು ಮಣ್ಣುಪಾಲು ಮಾಡುತ್ತಿದ್ದಾಳೆ ಎಂದು ಆರೋಪಿಸಿ ಆಕೆಯ ಅಣ್ಣನೇ ಆಕೆಯನ್ನು ಕೊಲೆ ಮಾಡಿದ್ದ. ಈ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಸಬಾ ಖಮರ್ರ ಡ್ಯಾನ್ಸ್ ವಿಡಿಯೋ ಬಿಡುಗಡೆ ಆದ ಬಳಿಕ ಜಮಾತ್-ಇ-ಇಸ್ಲಾಂ ಸೇರಿದಂತೆ ಹಲವು ಮುಸ್ಲಿಂ ಸಂಘಟನೆಗಳು ನಟಿಯ ವಿರುದ್ಧ ಪ್ರತಿಭಟನೆ ಮಾಡಿದ್ದು, ಆಕೆಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ ಮಾಡಿವೆ. ಸಬಾ ಖಮರ್, ಬ್ಲಾಗರ್ ಅಜೀಮ್ ಖಾನ್ ಜೊತೆ ಮದುವೆ ನಿಶ್ಚಯವಾಗಿತ್ತು, ಆದರೆ ಅಂತಿಮ ಸಮಯದಲ್ಲಿ ಮದುವೆಯನ್ನು ಮುರಿದುಕೊಂಡ ಸಬಾ, ಅಜೀಮ್ ಖಾನ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm