ಬ್ರೇಕಿಂಗ್ ನ್ಯೂಸ್
11-09-21 10:50 am Filmbeat: Bharath Kumar K ಸಿನಿಮಾ
ತೆಲುಗು ಸಿನಿಮಾ ನಟ ಹಾಗೂ ಮೆಗಾಸ್ಟಾರ್ ಚಿರಂಜೀವಿ ಅವರ ಸೋದರಳಿಯ ಸಾಯಿ ಧರಮ್ ತೇಜ ಬೈಕ್ ಅಪಘಾತಕ್ಕೆ ಒಳಗಾಗಿದ್ದಾರೆ. ಕಳೆದ ರಾತ್ರಿ (ಶುಕ್ರವಾರ) ಹೈದರಾಬಾದ್ನ ಮಾಧಪುರ್ ರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಸಾಯಿ ಧರಮ್ ತೇಜ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯಾನಕವಾಗಿದೆ. ಪೊಲೀಸರ ಪ್ರಾಥಮಿಕ ವರದಿಯ ಪ್ರಕಾರ, ಸಾಯಿ ಧರಮ್ ತೇಜ ಸ್ಪೋರ್ಟ್ಸ್ ಬೈಕ್ನಲ್ಲಿ ಅತಿಯಾದ ವೇಗವಾಗಿ ಚಾಲನೆ ಮಾಡುತ್ತಿದ್ದರು. ಹಾಗಾಗಿ, ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿದೆ ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತ ಕೂಡಲೇ ಅವರನ್ನು ಮೆಡಿಕವರ್ ಆಸ್ಪತ್ರೆಗೆ ಸೇರಿಸಲಾಯಿತು. ಬಳಿಕ ಗಾಯಗಳ ಗಂಭೀರತೆಯ ಪರಿಣಾಮ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಪಘಾತದ ಕುರಿತು ಮಾಧಪುರ್ ಡಿಜಿಪಿ ಎಂ ವೆಂಕಟೇಶ್ವರಲು ಮಾಹಿತಿ ನೀಡಿದ್ದು, ''ಈ ಅಪಘಾತ ಶುಕ್ರವಾರ ರಾತ್ರಿ ಸುಮಾರು 8.30ರ ಸಮಯಕ್ಕೆ ಸಂಭವಿಸಿದೆ. ಐಟಿ ಕಾರಿಡಾರ್ನಲ್ಲಿ ನಾಲೆಡ್ಜ್ ಸಿಟಿ ಹತ್ತಿರ ನಟ ತನ್ನ ಟ್ರಯಂಫ್ ಬೈಕ್ ನಲ್ಲಿ ಜುಬಿಲಿ ಹಿಲ್ಸ್ ನಿಂದ ಗಚಿಬೌಲಿ ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ರಸ್ತೆಯಲ್ಲಿ ಸ್ಕಿಡ್ ಆಗಿದೆ'' ಎಂದಿದ್ದಾರೆ.
ಶುಕ್ರವಾರ ಗಣೇಶ ಚತುರ್ಥಿ ಹಬ್ಬವಿದ್ದ ಕಾರಣ ಸಾಮಾನ್ಯವಾಗಿ ರಸ್ತೆಯಲ್ಲಿ ಟ್ರಾಫಿಕ್ ಸಹ ಇರಲಿಲ್ಲ. ಜನಸಂದಣಿಯೂ ಇರಲಿಲ್ಲ. ಈ ಅಪಘಾತದಲ್ಲಿ ಸಾಯಿ ಧರಮ್ ತೇಜ ಅವರ ತಲೆಗೆ, ಎದೆ ಭಾಗಕ್ಕೆ ಹಾಗೂ ದೇಹದ ಇತರೆ ಅಂಗಗಳಿಗೂ ಪೆಟ್ಟು ಬಿದ್ದಿದೆ ಎಂಬ ಮಾಹಿತಿ ಇದೆ. ಇನ್ನು ನಟ ಸಾಯಿ ಧರಮ್ ತೇಜ ಅವರು ಒಬ್ಬರೇ ಬೈಕ್ನಲ್ಲಿ ಹೋಗುತ್ತಿದ್ದರಾ ಅಥವಾ ಸ್ನೇಹಿತರ ತಂಡವೂ ಇತ್ತಾ ಎನ್ನುವುದರ ಬಗ್ಗೆ ಸಿಸಿಟಿವಿ ದೃಶ್ಯಗಳಲ್ಲಿ ಪರೀಕ್ಷಿಸಲಾಗುತ್ತಿದೆ ಎಂದು ಡಿಜಿಪಿ ಎಂ ವೆಂಕಟೇಶ್ವರಲು ಮಾಹಿತಿ ನೀಡಿದ್ದಾರೆ.

ಇನ್ನು ಆಸ್ಪತ್ರೆಯಿಂದ ತಡರಾತ್ರಿಯೇ ಸಾಯಿ ಧರಮ್ ತೇಜ ಅವರ ಆರೋಗ್ಯದ ಬಗ್ಗೆ ಅಧಿಕೃತ ಅಪ್ಡೇಟ್ ಬಿಡುಗಡೆ ಮಾಡಲಾಗಿದೆ. ''ನಟ ಸಾಯಿ ಧರಮ್ ತೇಜ ಆರೋಗ್ಯವಾಗಿದ್ದಾರೆ. ಯಾವುದೇ ಅಪಾಯವಿಲ್ಲ. ಮುನ್ನೆಚ್ಚರಿಕೆ ಉದ್ದೇಶದಿಂದ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ'' ಎಂದು ತಿಳಿಸಿದ್ದಾರೆ. ಮೆಗಾ ನಟನ ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದವರು, ಕಲಾವಿದರು ಆಸ್ಪತ್ರೆಗೆ ಧಾವಿಸಿ ಯೋಗಕ್ಷೇಮ ವಿಚಾರಿಸಿದರು. ಮೆಗಾಸ್ಟಾರ್ ಚಿರಂಜೀವಿ, ಅವರ ಸಹೋದರ ಮತ್ತು ನಟ-ರಾಜಕಾರಣಿ ಪವನ್ ಕಲ್ಯಾಣ್, ನಿರ್ಮಾಪಕ ಅಲ್ಲು ಅರವಿಂದ್, ನಟನ ಕಿರಿಯ ಸಹೋದರ ವೈಷ್ಣವ್ ತೇಜ್ ಮತ್ತು ಇತರ ಕುಟುಂಬ ಸದಸ್ಯರು ಮೆಡಿಕೊವರ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಮಾಧಪುರ ಪೊಲೀಸರು ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

2014ರಲ್ಲಿ ಚಿತ್ರರಂಗ ಪ್ರವೇಶಿಸಿದ ಸಾಯಿ ಧರಮ್ ತೇಜ 'ಪಿಲ್ಲಾ ನುವ್ವು ಲೇನಿ ಜೀವಿತಂ' ಚಿತ್ರದಲ್ಲಿ ಮೊದಲ ಬಾರಿಗೆ ನಟಿಸಿದರು. ಆ ನಂತರ ರೇ, ಸುಬ್ರಮಣ್ಯಂ ಫಾರ್ ಸೇಲ್, ಸುಪ್ರೀಂ, ತಿಕ್ಕ, ವಿನ್ನರ್, ಜವಾನ್, ಇಂಟಿಲಿಜೆಂಟ್, ತೇಜ್ ಐ ಲವ್ ಯೂ, ಚಿತ್ರಲಹರಿ, ಪ್ರತಿ ರೋಜು ಪಂಡಗೆ, ಸೋಲೋ ಬ್ರಾಥುಕೆ ಸೋ ಬೆಟರ್ ಅಂತಹ ಚಿತ್ರಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ 'ರಿಪಬ್ಲಿಕ್' ಎನ್ನುವ ಚಿತ್ರದಲ್ಲಿ ಸಾಯಿ ಧರಮ್ ತೇಜ ನಟಿಸುತ್ತಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm