ಬ್ರೇಕಿಂಗ್ ನ್ಯೂಸ್
16-09-21 03:27 pm Filmbeat: Bharath Kumar K ಸಿನಿಮಾ
ಬಾಡಿ ಬಿಲ್ಡರ್ ಹಾಗೂ ಮಾಜಿ ಮಿಸ್ಟರ್ ಇಂಡಿಯಾ ವಿಜೇತ ಮನೋಜ್ ಪಾಟೀಲ್ ಮುಂಬೈನ ಓಶಿವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವರದಿಯಾಗಿದೆ.
ಈ ಕುರಿತು ಮುಂಬೈ ಪೊಲೀಸರುವ ಪಿಟಿಐಗೆ ಪ್ರತಿಕ್ರಿಯಿಸಿದ್ದು, ''ಮನೋಜ್ ಪಾಟೀಲ್ ಓಶಿವಾರದಲ್ಲಿರುವ ತಮ್ಮ ಮನೆಯಲ್ಲಿ ಗುರುವಾರ ಮಲಗುವ ಮುನ್ನ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದರು'' ಎಂದು ಮಾಹಿತಿ ನೀಡಿದ್ದಾರೆ.

ಮನೋಜ್ ಪಾಟೀಲ್ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಮೇಲೆ ಕುಟುಂಬಸ್ಥರು ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದರು ಎಂದು ಮನೋಜ್ ಮ್ಯಾನೇಜರ್ ಪಾರಿ ನಾಜ್ ತಿಳಿಸಿದ್ದಾರೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ಬಾಡಿ ಬಿಲ್ಡರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಲು ಕಾರಣ ಏನು ಎಂದು ಹುಡುಕಿ ಹೊರಟಾಗ, ಬಾಲಿವುಡ್ ನಟ ಶಾಹೀಲ್ ಖಾನ್ ಹೆಸರು ಕೇಳಿ ಬಂದಿದೆ. ತನ್ನ ಆತ್ಮಹತ್ಯೆಗೆ ನಟ ಶಾಹೀಲ್ ಖಾನ್ ಕಾರಣ ಎಂದು ಡೆತ್ನೋಟ್ ಬರೆದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆ ಪತ್ರ ಪೊಲೀಸರ ಕೈ ಸೇರಿದೆಯಂತೆ. ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ 'ಶಾಹೀಲ್ ಖಾನ್ ಮಾನಸಿಕವಾಗಿ ಹಿಂಸಿಸುತ್ತಿದ್ದರು. ಹಾಗಾಗಿ, ಮನನೊಂದು ಸಾಯಲು ನಿರ್ಧರಿಸುವೆ' ಎಂದು ಮನೋಜ್ ಪಾಟೀಲ್ ಬರೆದಿದ್ದಾರೆ ಎಂದು ಮ್ಯಾನೇಜರ್ ಪಾರಿ ನಾಜ್ ಹೇಳಿದ್ದಾರೆ. ನಟ ಶಾಹೀಲ್ ಖಾನ್, ಬಾಡಿ ಬಿಲ್ಡರ್ ಮನೋಜ್ ಪಾಟೀಲ್ ಅವರ ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ತೇಜೋವಧೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮನೋಜ್ ಪಾಟೀಲ್ ವೃತ್ತಿಜೀವನವನ್ನು ಅಂತ್ಯಗೊಳಿಸುವುದಾಗಿ ನಟ ಶಾಹೀಲ್ ಖಾನ್ ಬೆದರಿಕೆ ಹಾಕಿದ್ದರಂತೆ. ಹಾಗೂ ಮನೋಜ್ ಅವರ ಪ್ರೋಟಿನ್ ಶಾಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಮಾನಹಾನಿ ಸಹ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಇ-ಟೈಮ್ಸ್ಗೆ ಶಾಹೀಲ್ ಖಾನ್ ಪ್ರತಿಕ್ರಿಯಿಸಿದ್ದು, ''ಇದೆಲ್ಲ ಕೇವಲ ಪ್ರಚಾರಕ್ಕಷ್ಟೆ. ಮನೋಜ್ ಜೊತೆ ನನಗೆ ಯಾವುದೇ ಸಂಬಂಧವಿಲ್ಲ'' ಎಂದು ತಿಳಿಸಿದ್ದಾರೆ.
ಮನೋಜ್ ಪಾಟೀಲ್ ಫಿಟ್ನೆಸ್ ಮಾಡೆಲ್ ಆಗಿದ್ದು, 2016 ರಲ್ಲಿ ಮಿಸ್ಟರ್ ಇಂಡಿಯಾ ಚಾಂಪಿಯನ್ಶಿಪ್ ಗೆದ್ದಿದ್ದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm