ಬ್ರೇಕಿಂಗ್ ನ್ಯೂಸ್
16-09-21 03:27 pm Filmbeat: Bharath Kumar K ಸಿನಿಮಾ
ಬಾಡಿ ಬಿಲ್ಡರ್ ಹಾಗೂ ಮಾಜಿ ಮಿಸ್ಟರ್ ಇಂಡಿಯಾ ವಿಜೇತ ಮನೋಜ್ ಪಾಟೀಲ್ ಮುಂಬೈನ ಓಶಿವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವರದಿಯಾಗಿದೆ.
ಈ ಕುರಿತು ಮುಂಬೈ ಪೊಲೀಸರುವ ಪಿಟಿಐಗೆ ಪ್ರತಿಕ್ರಿಯಿಸಿದ್ದು, ''ಮನೋಜ್ ಪಾಟೀಲ್ ಓಶಿವಾರದಲ್ಲಿರುವ ತಮ್ಮ ಮನೆಯಲ್ಲಿ ಗುರುವಾರ ಮಲಗುವ ಮುನ್ನ ನಿದ್ರೆ ಮಾತ್ರೆಗಳನ್ನು ಸೇವಿಸಿದ್ದರು'' ಎಂದು ಮಾಹಿತಿ ನೀಡಿದ್ದಾರೆ.

ಮನೋಜ್ ಪಾಟೀಲ್ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದ ಮೇಲೆ ಕುಟುಂಬಸ್ಥರು ಮುಂಬೈನ ಕೂಪರ್ ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದರು ಎಂದು ಮನೋಜ್ ಮ್ಯಾನೇಜರ್ ಪಾರಿ ನಾಜ್ ತಿಳಿಸಿದ್ದಾರೆ. ಇತ್ತೀಚಿನ ಅಪ್ಡೇಟ್ ಪ್ರಕಾರ, ಬಾಡಿ ಬಿಲ್ಡರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮನೋಜ್ ಪಾಟೀಲ್ ಆತ್ಮಹತ್ಯೆಗೆ ಯತ್ನಿಸಲು ಕಾರಣ ಏನು ಎಂದು ಹುಡುಕಿ ಹೊರಟಾಗ, ಬಾಲಿವುಡ್ ನಟ ಶಾಹೀಲ್ ಖಾನ್ ಹೆಸರು ಕೇಳಿ ಬಂದಿದೆ. ತನ್ನ ಆತ್ಮಹತ್ಯೆಗೆ ನಟ ಶಾಹೀಲ್ ಖಾನ್ ಕಾರಣ ಎಂದು ಡೆತ್ನೋಟ್ ಬರೆದಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆ ಪತ್ರ ಪೊಲೀಸರ ಕೈ ಸೇರಿದೆಯಂತೆ. ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ 'ಶಾಹೀಲ್ ಖಾನ್ ಮಾನಸಿಕವಾಗಿ ಹಿಂಸಿಸುತ್ತಿದ್ದರು. ಹಾಗಾಗಿ, ಮನನೊಂದು ಸಾಯಲು ನಿರ್ಧರಿಸುವೆ' ಎಂದು ಮನೋಜ್ ಪಾಟೀಲ್ ಬರೆದಿದ್ದಾರೆ ಎಂದು ಮ್ಯಾನೇಜರ್ ಪಾರಿ ನಾಜ್ ಹೇಳಿದ್ದಾರೆ. ನಟ ಶಾಹೀಲ್ ಖಾನ್, ಬಾಡಿ ಬಿಲ್ಡರ್ ಮನೋಜ್ ಪಾಟೀಲ್ ಅವರ ವೈಯಕ್ತಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ತೇಜೋವಧೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮನೋಜ್ ಪಾಟೀಲ್ ವೃತ್ತಿಜೀವನವನ್ನು ಅಂತ್ಯಗೊಳಿಸುವುದಾಗಿ ನಟ ಶಾಹೀಲ್ ಖಾನ್ ಬೆದರಿಕೆ ಹಾಕಿದ್ದರಂತೆ. ಹಾಗೂ ಮನೋಜ್ ಅವರ ಪ್ರೋಟಿನ್ ಶಾಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ಮಾನಹಾನಿ ಸಹ ಮಾಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಇ-ಟೈಮ್ಸ್ಗೆ ಶಾಹೀಲ್ ಖಾನ್ ಪ್ರತಿಕ್ರಿಯಿಸಿದ್ದು, ''ಇದೆಲ್ಲ ಕೇವಲ ಪ್ರಚಾರಕ್ಕಷ್ಟೆ. ಮನೋಜ್ ಜೊತೆ ನನಗೆ ಯಾವುದೇ ಸಂಬಂಧವಿಲ್ಲ'' ಎಂದು ತಿಳಿಸಿದ್ದಾರೆ.
ಮನೋಜ್ ಪಾಟೀಲ್ ಫಿಟ್ನೆಸ್ ಮಾಡೆಲ್ ಆಗಿದ್ದು, 2016 ರಲ್ಲಿ ಮಿಸ್ಟರ್ ಇಂಡಿಯಾ ಚಾಂಪಿಯನ್ಶಿಪ್ ಗೆದ್ದಿದ್ದರು.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm