ಬ್ರೇಕಿಂಗ್ ನ್ಯೂಸ್
20-09-21 04:36 pm Headline Karnataka News Network ಸಿನಿಮಾ
ಚಿತ್ರರಂಗ ಅಲ್ಲದೆ ಸಾಮಾಜಿಕ ಕಾರ್ಯಕ್ರಮಗಳ ಮೂಲಕವೂ ಗುರುತಿಸಿಕೊಂಡಿರುವ ನಟಿ ಪ್ರಣೀತಾ ಕೊವೀಡ್ ಎರಡನೆ ಅಲೆಯ ವೇಳೆಯಲ್ಲೂ ಜನರಿಗೆ ನೆರವಾಗಿದ್ದಾರೆ. ತಮ್ಮ ಫೌಂಡೇಶನ್ ವತಿಯಿಂದ ಲಸಿಕೆ ಅಭಿಯಾನ ನಡೆಸಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಹಲವರು ಈ ಅಭಿಯಾನದಲ್ಲಿ ಲಸಿಕೆ ಪಡೆದುಕೊಂಡಿದ್ದು, ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜನರು ಪ್ರಣೀತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಭಿಮಾನಿಗಳು ಪೋಟೋ ಶೇರ್ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

ರಾಷ್ಟ್ರೋತ್ಥಾನ ಪರಿಷತ್ ಜೊತೆ ಕೈಜೋಡಿಸಿದ ನಟಿ ಪ್ರಣಿತಾ, ತಮ್ಮ ಫೌಂಡೇಶನ್ ಸಹಯೋಗದೊಂದಿಗೆ ಜನರಿಗೆ ಉಚಿತವಾಗಿ ಲಸಿಕೆ ವಿತರಿಸಿದ್ದಾರೆ. ಜಯನಗರದಲ್ಲಿ ಪ್ರಣೀತಾ ಪೌಂಡೇಶನ್ ಹಾಗೂ ರಾಷ್ಟ್ರೋತ್ಥಾನ ಪರಿಷತ್ ಉಚಿತವಾಗಿ ಲಸಿಕೆ ವಿತರಣೆ ಹಮ್ಮಿಕೊಂಡಿದೆ.
ಈ ಹಿಂದೆ ವಿಷ್ಣುವರ್ಧನ್ ಓದಿದ ಶಾಲೆ ಶಾಶ್ವತವಾಗಿ ಮುಚ್ಚಿಹೋಗುವ ಸಂಗತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ ಪ್ರಣೀತಾ ಶಾಲೆ ಉಳಿಸಲು ನೆರವಾಗಿದ್ದರು. ಇದು ಮಾತ್ರವೇ ಅಲ್ಲದೆ ಹಲವು ಜನಪರ ಕಾರ್ಯಕ್ರಮಗಳಲ್ಲಿ ಪ್ರಣಿತಾ ತಮ್ಮನ್ನು ತಾವು ತೊಡಿಗಿಸಿಕೊಂಡಿದ್ದಾರೆ.
ಈ ಹಿಂದೆ ಜೂನ್ ತಿಂಗಳಲ್ಲಿ ತಮ್ಮ ಫೌಂಡೇಶನ್ನಿಂದ ಸ್ವತಂತ್ರ್ಯವಾಗಿ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ಪ್ರಣಿತಾ ಹಮ್ಮಿಕೊಂಡಿದ್ದರು.
ಪ್ರಸ್ತುತ ಸಾಮಾಜಿಕ ಬೆಳವಣಿಗೆಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ನಿರ್ಭಿಡೆಯಿಂದ ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ ಪ್ರಣಿತಾ ಸುಭಾಷ್, ಕೆಲವು ದಿನಗಳ ಹಿಂದಷ್ಟೆ 'ಹಿಂದೂ ಭಯೋತ್ಪಾದನೆ' ಎಂದವರ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದ ನಟಿ ಪ್ರಣಿತಾ, ''ಅಫ್ಘಾನಿಸ್ತಾನದಲ್ಲಿ ಆಗುತ್ತಿರುವ ಹಿಂಸಾಚಾರವನ್ನು ಉದಾಹರಣೆಯಾಗಿ ನೀಡುತ್ತಾ 'ಹಿಂದೂ ಭಯೋತ್ಪಾದನೆ' ವಾದವನ್ನು ಕೆಲವರು ಮುಂದಿಡುತ್ತಿದ್ದಾರೆ. 'ಹಿಂದು ಭಯೋತ್ಪಾದನೆ' ಎಂಬ ತಮ್ಮ ಕಲ್ಪನೆಯನ್ನು ಸಾರ್ವಜನಿಕಗೊಳಿಸುವ ಯತ್ನ ಮಾಡುತ್ತಿದ್ದಾರೆ. ಭಾರತ ದೇಶವು ಎಚ್ಚರಿಕೆಯಿಂದರಬೇಕು, ವೈರಿಗಳು ದೇಶದ ಗಡಿಗಳ ಹೊರಗೆ ಮಾತ್ರವೇ ಇಲ್ಲ ದೇಶದ ಒಳಗೂ ಇದ್ದಾರೆ'' ಎಂದಿದ್ದರು. ಪ್ರಣಿತಾರ ಈ ಟ್ವೀಟ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರಿಂದ, ಆರ್ಎಸ್ಎಸ್ ಬೆಂಬಲಿಗರಿಂದ ಭಾರಿ ಬೆಂಬಲ ವ್ಯಕ್ತವಾಗಿತ್ತು.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm