ಬ್ರೇಕಿಂಗ್ ನ್ಯೂಸ್
21-09-21 10:47 am Filmbeat: Bharath Kumar K ಸಿನಿಮಾ
ಮುಂಬೈ, ಸೆ.21: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧನವಾಗಿದ್ದ ಉದ್ಯಮಿ ರಾಜ್ ಕುಂದ್ರಾಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂಪಾಯಿ ಶ್ಯೂರಿಟಿ ಪಡೆದು ಸೋಮವಾರ ಶಿಲ್ಪಾ ಶೆಟ್ಟಿ ಪತಿಗೆ ಜಾಮೀನು ನೀಡಿದ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ.
ಉದ್ಯಮಿ ರಾಜ್ ಕುಂದ್ರಾ ಜೊತೆ ಸ್ನೇಹಿತ ರಾಯನ್ ತೋರ್ಪೆಗೂ ಜಾಮೀನು ಸಿಕ್ಕಿದೆ ಎಂದು ವರದಿಯಾಗಿದೆ. ಜುಲೈ 16 ರಂದು ರಾಜ್ ಕುಂದ್ರಾ ಮತ್ತು ಇತರರನ್ನು ಮುಂಬೈ ಕ್ರೈಂ ವಿಭಾಗದ ಪೊಲೀಸರು ಅರೆಸ್ಟ್ ಮಾಡಿದ್ದರು. ಈ ಕೇಸ್ ಸಂಬಂಧ ಕಳೆದ ವಾರವಷ್ಟೇ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (ಚಾರ್ಜ್ಶೀಟ್) ಸಲ್ಲಿಕೆ ಮಾಡಿದ್ದರು.

ಸೆಪ್ಟೆಂಬರ್ 16 ರಂದು ಮುಂಬೈ ಪೊಲೀಸರು 1467 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರಲ್ಲಿ 43 ಮಂದಿ ಸಾಕ್ಷಿಧಾರರ ಹೇಳಿಕೆಗಳು ದಾಖಲಾಗಿವೆ. ಐದು ವ್ಯಕ್ತಿಗಳು 164 ಸಿಆರ್ಪಿಸಿ ಪ್ರಕಾರ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ. ಇದು ಎರಡನೇ ದೋಷಾರೋಪ ಪಟ್ಟಿ. ಇದಕ್ಕೂ ಮುಂಚೆ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ 3000ಕ್ಕೂ ಅಧಿಕ ಪುಟಗಳನ್ನು ಹೊಂದಿತ್ತು.
ಆ ಸಂದರ್ಭದಲ್ಲಿ ನಟಿ ಗೆಹನಾ ವಸಿಷ್ಠ ಸೇರಿದಂತೆ ಹಲವರನ್ನು ಆಗ ಬಂಧಿಸಲಾಗಿತ್ತು. ಆ ಬಂಧನಗಳ ಬಳಿಕವೇ ರಾಜ್ ಕುಂದ್ರಾ ಹೆಸರು ಹೊರಗೆ ಬಂದು ಜುಲೈ 19 ರಂದು ರಾಜ್ ಕುಂದ್ರಾ ಅನ್ನು ಮುಂಬೈ ಪೊಲೀಸರು ಬಂಧಿಸಿದರು. ರಾಜ್ ಕುಂದ್ರಾ ಅವರಿಂದ ಕೆಲವು ಲ್ಯಾಪ್ಟಾಪ್, ಮೊಬೈಲ್, ಹಾರ್ಡ್ಡಿಸ್ಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ರಾಜ್ ಕುಂದ್ರಾ ವಿರುದ್ಧದ ಆರೋಪ?
ಭಾರತದಲ್ಲಿ ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಮಾರಾಟ ಅಪರಾಧವಾಗಿದ್ದು, ರಾಜ್ ಕುಂದ್ರಾರ ವಿಯಾನ್ ಸಂಸ್ಥೆ ಹಾಗೂ ಕೆಂಡ್ರಿನ್ ಕಂಪೆನಿಗಳು ಭಾರತದಲ್ಲಿಯೇ ನಟಿಯರಿಂದ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶದಲ್ಲಿರುವ ರಾಜ್ ಕುಂದ್ರಾದ ಸೋದರ ಸಂಬಂಧಿ ಪ್ರದೀಪ್ ಭಕ್ಷಿಯ ಸಂಸ್ಥೆಯ ಮೂಲಕ ಹಾಟ್ಶಾಟ್ಸ್ ಅಪ್ಲಿಕೇಶನ್ಗೆ ಅಪ್ಲೋಡ್ ಮಾಡಿಸುತ್ತಿದ್ದರು. ಹಾಟ್ಶಾಟ್ಸ್ ಆಪ್ ಮೂಲಕ ಪ್ರತಿದಿನ ಲಕ್ಷಾಂತರ ರುಪಾಯಿ ಹಣವನ್ನು ರಾಜ್ ಕುಂದ್ರಾ ಗಳಿಸುತ್ತಿದ್ದರು ಎಂದು ಮುಂಬೈ ಪೊಲೀಸರು ಆರೋಪ ಮಾಡಿದ್ದಾರೆ. ರಾಜ್ ಕುಂದ್ರಾಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm