ಬ್ರೇಕಿಂಗ್ ನ್ಯೂಸ್
21-09-21 10:47 am Filmbeat: Bharath Kumar K ಸಿನಿಮಾ
ಮುಂಬೈ, ಸೆ.21: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧನವಾಗಿದ್ದ ಉದ್ಯಮಿ ರಾಜ್ ಕುಂದ್ರಾಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 50 ಸಾವಿರ ರೂಪಾಯಿ ಶ್ಯೂರಿಟಿ ಪಡೆದು ಸೋಮವಾರ ಶಿಲ್ಪಾ ಶೆಟ್ಟಿ ಪತಿಗೆ ಜಾಮೀನು ನೀಡಿದ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ.
ಉದ್ಯಮಿ ರಾಜ್ ಕುಂದ್ರಾ ಜೊತೆ ಸ್ನೇಹಿತ ರಾಯನ್ ತೋರ್ಪೆಗೂ ಜಾಮೀನು ಸಿಕ್ಕಿದೆ ಎಂದು ವರದಿಯಾಗಿದೆ. ಜುಲೈ 16 ರಂದು ರಾಜ್ ಕುಂದ್ರಾ ಮತ್ತು ಇತರರನ್ನು ಮುಂಬೈ ಕ್ರೈಂ ವಿಭಾಗದ ಪೊಲೀಸರು ಅರೆಸ್ಟ್ ಮಾಡಿದ್ದರು. ಈ ಕೇಸ್ ಸಂಬಂಧ ಕಳೆದ ವಾರವಷ್ಟೇ ಮುಂಬೈ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (ಚಾರ್ಜ್ಶೀಟ್) ಸಲ್ಲಿಕೆ ಮಾಡಿದ್ದರು.

ಸೆಪ್ಟೆಂಬರ್ 16 ರಂದು ಮುಂಬೈ ಪೊಲೀಸರು 1467 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದರಲ್ಲಿ 43 ಮಂದಿ ಸಾಕ್ಷಿಧಾರರ ಹೇಳಿಕೆಗಳು ದಾಖಲಾಗಿವೆ. ಐದು ವ್ಯಕ್ತಿಗಳು 164 ಸಿಆರ್ಪಿಸಿ ಪ್ರಕಾರ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ. ಇದು ಎರಡನೇ ದೋಷಾರೋಪ ಪಟ್ಟಿ. ಇದಕ್ಕೂ ಮುಂಚೆ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲಿ 3000ಕ್ಕೂ ಅಧಿಕ ಪುಟಗಳನ್ನು ಹೊಂದಿತ್ತು.
ಆ ಸಂದರ್ಭದಲ್ಲಿ ನಟಿ ಗೆಹನಾ ವಸಿಷ್ಠ ಸೇರಿದಂತೆ ಹಲವರನ್ನು ಆಗ ಬಂಧಿಸಲಾಗಿತ್ತು. ಆ ಬಂಧನಗಳ ಬಳಿಕವೇ ರಾಜ್ ಕುಂದ್ರಾ ಹೆಸರು ಹೊರಗೆ ಬಂದು ಜುಲೈ 19 ರಂದು ರಾಜ್ ಕುಂದ್ರಾ ಅನ್ನು ಮುಂಬೈ ಪೊಲೀಸರು ಬಂಧಿಸಿದರು. ರಾಜ್ ಕುಂದ್ರಾ ಅವರಿಂದ ಕೆಲವು ಲ್ಯಾಪ್ಟಾಪ್, ಮೊಬೈಲ್, ಹಾರ್ಡ್ಡಿಸ್ಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಏನಿದು ರಾಜ್ ಕುಂದ್ರಾ ವಿರುದ್ಧದ ಆರೋಪ?
ಭಾರತದಲ್ಲಿ ಅಶ್ಲೀಲ ವಿಡಿಯೋ ನಿರ್ಮಾಣ ಮತ್ತು ಮಾರಾಟ ಅಪರಾಧವಾಗಿದ್ದು, ರಾಜ್ ಕುಂದ್ರಾರ ವಿಯಾನ್ ಸಂಸ್ಥೆ ಹಾಗೂ ಕೆಂಡ್ರಿನ್ ಕಂಪೆನಿಗಳು ಭಾರತದಲ್ಲಿಯೇ ನಟಿಯರಿಂದ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶದಲ್ಲಿರುವ ರಾಜ್ ಕುಂದ್ರಾದ ಸೋದರ ಸಂಬಂಧಿ ಪ್ರದೀಪ್ ಭಕ್ಷಿಯ ಸಂಸ್ಥೆಯ ಮೂಲಕ ಹಾಟ್ಶಾಟ್ಸ್ ಅಪ್ಲಿಕೇಶನ್ಗೆ ಅಪ್ಲೋಡ್ ಮಾಡಿಸುತ್ತಿದ್ದರು. ಹಾಟ್ಶಾಟ್ಸ್ ಆಪ್ ಮೂಲಕ ಪ್ರತಿದಿನ ಲಕ್ಷಾಂತರ ರುಪಾಯಿ ಹಣವನ್ನು ರಾಜ್ ಕುಂದ್ರಾ ಗಳಿಸುತ್ತಿದ್ದರು ಎಂದು ಮುಂಬೈ ಪೊಲೀಸರು ಆರೋಪ ಮಾಡಿದ್ದಾರೆ. ರಾಜ್ ಕುಂದ್ರಾಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm