ಬ್ರೇಕಿಂಗ್ ನ್ಯೂಸ್
22-09-21 10:39 am Filmbeat: Manjunatha C ಸಿನಿಮಾ
ಗೆಳೆಯನೊಂದಿಗೆ ಜಾಲಿ ಟ್ರಿಪ್ ಹೊರಟಿದ್ದ ಯುವನಟಿ ಅಪಘಾತದಲ್ಲಿ ದಾರುಣ ಸಾವಿಗೀಡಾಗಿರುವ ಘಟನೆ ಮರಾಠಿ ಚಿತ್ರರಂಗವನ್ನು ಶೋಕಕ್ಕೆ ನೂಕಿದೆ.
ಮರಾಠಿ ನಟಿ ಈಶ್ವರ್ ದೇಶ್ಪಾಂಡೆ ಕಳೆದ ವಾರ ತಮ್ಮ ಬಾಯ್ಫ್ರೆಂಡ್ ಶುಭಂ ದಾದ್ಗೆ ಜೊತೆಗೆ ಗೋವಾಕ್ಕೆ ಜಾಲಿ ಟ್ರಿಪ್ ಹೋಗಿದ್ದರು. ಅಲ್ಲಿಂದ ಹಲವು ಕಡೆ ಕಾರಿನಲ್ಲಿಯೇ ಪ್ರವಾಸ ಮಾಡುತ್ತಿದ್ದರು, ಕಾರು ಗೋವಾದ ಬಾಗಾ ನದಿಗೆ ಬಿದ್ದ ಪರಿಣಾಮ ಈಶ್ವರಿ ಹಾಗೂ ಶುಭಂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ನೀರಿಗೆ ಬಿದ್ದಾಗ ಕಾರು ಸೆಂಟ್ರಲ್ ಲಾಕ್ ಆಗಿದ್ದ ಕಾರಣ ಇಬ್ಬರೂ ಸಹ ಕಾರಿನಿಂದ ಹೊರಗೆ ಬರಲು ಆಗದೆ ಅಲ್ಲಿಯೇ ಉಸಿರುಗಟ್ಟಿ ಅಸುನೀಗಿದ್ದಾರೆ. ಕಾರನ್ನು ನದಿಯಿಂದ ಮೇಲಕ್ಕೆತ್ತಲಾಗಿದ್ದು, ಮೃತ ದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
25 ವರ್ಷ ವಯಸ್ಸಿನ ನಟಿ ಈಶ್ವರಿ ನಟನೆ ಬಗ್ಗೆ ಬಹಳ ಆಸಕ್ತಿ ಹೊಂದಿದ್ದರು. ಮರಾಠಿ ಮತ್ತು ಹಿಂದಿ ಸಿನಿಮಾದ ಚಿತ್ರೀಕರಣವನ್ನು ಕಳೆದ ವಾರವಷ್ಟೆ ಅವರು ಮುಗಿಸಿದ್ದರು. ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ಬಾಯ್ಫ್ರೆಂಡ್ ಜೊತೆಗೆ ಗೋವಾಕ್ಕೆ ತೆರಳಿದ್ದರು. ಅಲ್ಲದೆ ತಮ್ಮ ಬಾಯ್ಫ್ರೆಂಡ್ ಶುಭಂ ಜೊತೆಗೆ ಮುಂದಿನ ತಿಂಗಳು ಎಂಗೇಜ್ಮೆಂಟ್ ಸಹ ಮಾಡಿಕೊಳ್ಳುವವರಿದ್ದರು ಈಶ್ವರಿ.

ಈಶ್ವರಿ ನಟಿಸಿದ್ದ ಎರಡು ಸಿನಿಮಾಗಳು ಬಿಡುಗಡೆ ಆಗುವುದರಲ್ಲಿದ್ದವು, ಆದರೆ ಸಿನಿಮಾ ಬಿಡುಗಡೆಗೆ ಮುನ್ನವೇ ಈಶ್ವರಿ ಕಾಲವಾಗಿದ್ದಾರೆ. ಅವರ ಮೊದಲ ಮರಾಠಿ ಸಿನಿಮಾ 'ಪ್ರೇಮಾಚೆ ಸೈಡ್ ಎಫೆಕ್ಟ್ಸ್' ನಲ್ಲಿ ಈಶ್ವರಿ ಜೊತೆ ನಟಿಸಿರುವ ನಟ ಅಭಿಯನ್ ಬೇರ್ಡೆ ಸಾಮಾಜಿಕ ಜಾಲತಾಣದಲ್ಲಿ ನಟಿ ಬಗ್ಗೆ ಒಳ್ಳೆಯ ಮಾತುಗಳನ್ನು ಬರೆದಿದ್ದು, ನಟಿಯ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm