ಬ್ರೇಕಿಂಗ್ ನ್ಯೂಸ್
23-09-21 01:39 pm Filmbeat: Manjunatha C ಸಿನಿಮಾ
ಜೂ.ಎನ್ಟಿಆರ್ ಕಾರುಗಳ ಬಗ್ಗೆ ವಿಶೇಷ ಆಸಕ್ತಿ ಇರುವ ನಟ. ಕೆಲವು ದಿನಗಳ ಹಿಂದಷ್ಟೆ ಐಶಾರಾಮಿ, ದುಬಾರಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಜೂ.ಎನ್ಟಿಆರ್ ಖರೀದಿಸಿದ್ದಾರೆ.
ಲ್ಯಾಂಬೊರ್ಗಿನಿ ಉರುಸ್ ಕಾರಿಗೆ 4 ಕೋಟಿಗೂ ಹೆಚ್ಚು ಹಣ ನೀಡಿರುವ ನಟ ಜೂ ಎನ್ಟಿಆರ್, ಆ ಉರುಸ್ ಕಾರಿನ ನಂಬರ್ಗೆ ಈಗ ಲಕ್ಷಾಂತರ ಹಣ ವ್ಯಯ ಮಾಡಿದ್ದಾರೆ.
ಜೂ.ಎನ್ಟಿಆರ್, ಉರುಸ್ ಕಾರಿನ ತಮ್ಮ ಅದೃಷ್ಟದ ಸಂಖ್ಯೆಯನ್ನು ಹಾಕಿಸಿಕೊಂಡಿದ್ದಾರೆ. ಅದುವೇ 9999 ಈ ಸಂಖ್ಯೆಗೆ ದೊಡ್ಡ ಮೊತ್ತದ ಹಣವನ್ನು ಆರ್ಟಿಓಗೆ ನೀಡಿದ್ದಾರೆ ಜೂ.ಎನ್ಟಿಆರ್.

ಬೇಡಿಕೆ ಇರುವ ಸಂಖ್ಯೆಗಳನ್ನು ಆರ್ಟಿಓ ಇಲಾಖೆ ಹರಾಜು ಹಾಕುತ್ತದೆ, ಸಂಖ್ಯೆ ಅವಶ್ಯಕತೆ ಇರುವವರು ಹರಾಜಿನಲ್ಲಿ ಕೂಗಿ ನಂಬರ್ ಪಡೆಯಬೇಕಾಗುತ್ತದೆ. 9999 ಬಹುಜನರ ಮೆಚ್ಚಿನ ನಂಬರ್ ಹಾಗಾಗಿ ಈ ಸಂಖ್ಯೆಗೆ ಬೇಡಿಕೆ ಹೆಚ್ಚು, ಹಾಗಾಗಿ ಹೆಚ್ಚು ಜನ ಈ ನಂಬರ್ಗೆ ಹರಾಜು ಕೂಗಿದ ಕಾರಣ ನಂಬರ್ನ ಬೆಲೆ ಏರಿದೆ. ಬೆಲೆ ಏರಿದರೂ ಬಿಡದ ಜೂ ಎನ್ಟಿಆರ್ ಬರೋಬ್ಬರಿ 17 ಲಕ್ಷ ನೀಡಿ ನಂಬರ್ ಅನ್ನು ಪಡೆದಿದ್ದಾರೆ. ಜೂ.ಎನ್ಟಿಆರ್ ಅವರ ಲ್ಯಾಂಬೊರ್ಗಿಸಿ ಉರುಸ್ ಕಾರಿನ ನಂಬರ್ ಈಗ ಟಿಎಸ್ 09 ಎಫ್ಎಸ್ 9999 ಆಗಿದೆ. 9 ಜೂ ಎನ್ಟಿಆರ್ಗೆ ಅದೃಷ್ಟದ ಸಂಖ್ಯೆಯಾಗಿದ್ದು, ನಂಬರ್ ಪ್ಲೇಟ್ನಲ್ಲಿ ಕೇವಲ 9 ಸಂಖ್ಯೆಗಳು ಮಾತ್ರವೇ ಇರುವಂತೆ ಮಾಡಿಕೊಂಡಿಕೊಂಡಿದ್ದಾರೆ ಜೂ ಎನ್ಟಿಆರ್.
ಜೂ ಎನ್ಟಿಆರ್ ಖರೀದಿಸಿರುವ ಕಾರಿನ ಎಕ್ಸ್ ಶೋರೂಂ ಬೆಲೆ 3.16 ಕೋಟಿ. ಕಾರಿನ ಆನ್ರೋಡ್ ಬೆಲೆ ಅಂದಾಜು 5 ಕೋಟಿ ಇದೆ. ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಇದಾಗಿದ್ದು, ಈ ಮಾದರಿಯ ಭಾರತದ ಮೊದಲ ಕಾರನ್ನು ಜೂ ಎನ್ಟಿಆರ್ ಖರೀದಿ ಮಾಡಿದ್ದರು. 'ದೇಶದ ಮೊದಲ ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಹೈದರಾಬಾದ್ನಲ್ಲಿ ತನ್ನ ಮನೆ ಕಂಡುಕೊಂಡಿದೆ' ಎಂದು ಸಾಮಾಜಿಕ ಜಾಲತಾಣದ ಫ್ಯಾನ್ಸ್ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದವು.
ಸ್ಯಾಂಡಲ್ವುಡ್ ನಟರಲ್ಲಿ ಮೂವರ ಬಳಿ ಲ್ಯಾಂಬರ್ಗಿನಿ ಉರುಸ್ ಕಾರಿದೆ, ಪುನೀತ್ ರಾಜ್ಕುಮಾರ್, ದರ್ಶನ್ ಹಾಗೂ ನಿಖಿಲ್ ಕುಮಾರಸ್ವಾಮಿ ಬಳಿಯೂ ಲ್ಯಾಂಬರ್ಗಿನಿ ಉರುಸ್ ಕಾರು ಇದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm