ಬ್ರೇಕಿಂಗ್ ನ್ಯೂಸ್
23-09-21 01:39 pm Filmbeat: Manjunatha C ಸಿನಿಮಾ
ಜೂ.ಎನ್ಟಿಆರ್ ಕಾರುಗಳ ಬಗ್ಗೆ ವಿಶೇಷ ಆಸಕ್ತಿ ಇರುವ ನಟ. ಕೆಲವು ದಿನಗಳ ಹಿಂದಷ್ಟೆ ಐಶಾರಾಮಿ, ದುಬಾರಿ ಲ್ಯಾಂಬೊರ್ಗಿನಿ ಉರುಸ್ ಕಾರನ್ನು ಜೂ.ಎನ್ಟಿಆರ್ ಖರೀದಿಸಿದ್ದಾರೆ.
ಲ್ಯಾಂಬೊರ್ಗಿನಿ ಉರುಸ್ ಕಾರಿಗೆ 4 ಕೋಟಿಗೂ ಹೆಚ್ಚು ಹಣ ನೀಡಿರುವ ನಟ ಜೂ ಎನ್ಟಿಆರ್, ಆ ಉರುಸ್ ಕಾರಿನ ನಂಬರ್ಗೆ ಈಗ ಲಕ್ಷಾಂತರ ಹಣ ವ್ಯಯ ಮಾಡಿದ್ದಾರೆ.
ಜೂ.ಎನ್ಟಿಆರ್, ಉರುಸ್ ಕಾರಿನ ತಮ್ಮ ಅದೃಷ್ಟದ ಸಂಖ್ಯೆಯನ್ನು ಹಾಕಿಸಿಕೊಂಡಿದ್ದಾರೆ. ಅದುವೇ 9999 ಈ ಸಂಖ್ಯೆಗೆ ದೊಡ್ಡ ಮೊತ್ತದ ಹಣವನ್ನು ಆರ್ಟಿಓಗೆ ನೀಡಿದ್ದಾರೆ ಜೂ.ಎನ್ಟಿಆರ್.

ಬೇಡಿಕೆ ಇರುವ ಸಂಖ್ಯೆಗಳನ್ನು ಆರ್ಟಿಓ ಇಲಾಖೆ ಹರಾಜು ಹಾಕುತ್ತದೆ, ಸಂಖ್ಯೆ ಅವಶ್ಯಕತೆ ಇರುವವರು ಹರಾಜಿನಲ್ಲಿ ಕೂಗಿ ನಂಬರ್ ಪಡೆಯಬೇಕಾಗುತ್ತದೆ. 9999 ಬಹುಜನರ ಮೆಚ್ಚಿನ ನಂಬರ್ ಹಾಗಾಗಿ ಈ ಸಂಖ್ಯೆಗೆ ಬೇಡಿಕೆ ಹೆಚ್ಚು, ಹಾಗಾಗಿ ಹೆಚ್ಚು ಜನ ಈ ನಂಬರ್ಗೆ ಹರಾಜು ಕೂಗಿದ ಕಾರಣ ನಂಬರ್ನ ಬೆಲೆ ಏರಿದೆ. ಬೆಲೆ ಏರಿದರೂ ಬಿಡದ ಜೂ ಎನ್ಟಿಆರ್ ಬರೋಬ್ಬರಿ 17 ಲಕ್ಷ ನೀಡಿ ನಂಬರ್ ಅನ್ನು ಪಡೆದಿದ್ದಾರೆ. ಜೂ.ಎನ್ಟಿಆರ್ ಅವರ ಲ್ಯಾಂಬೊರ್ಗಿಸಿ ಉರುಸ್ ಕಾರಿನ ನಂಬರ್ ಈಗ ಟಿಎಸ್ 09 ಎಫ್ಎಸ್ 9999 ಆಗಿದೆ. 9 ಜೂ ಎನ್ಟಿಆರ್ಗೆ ಅದೃಷ್ಟದ ಸಂಖ್ಯೆಯಾಗಿದ್ದು, ನಂಬರ್ ಪ್ಲೇಟ್ನಲ್ಲಿ ಕೇವಲ 9 ಸಂಖ್ಯೆಗಳು ಮಾತ್ರವೇ ಇರುವಂತೆ ಮಾಡಿಕೊಂಡಿಕೊಂಡಿದ್ದಾರೆ ಜೂ ಎನ್ಟಿಆರ್.
ಜೂ ಎನ್ಟಿಆರ್ ಖರೀದಿಸಿರುವ ಕಾರಿನ ಎಕ್ಸ್ ಶೋರೂಂ ಬೆಲೆ 3.16 ಕೋಟಿ. ಕಾರಿನ ಆನ್ರೋಡ್ ಬೆಲೆ ಅಂದಾಜು 5 ಕೋಟಿ ಇದೆ. ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಇದಾಗಿದ್ದು, ಈ ಮಾದರಿಯ ಭಾರತದ ಮೊದಲ ಕಾರನ್ನು ಜೂ ಎನ್ಟಿಆರ್ ಖರೀದಿ ಮಾಡಿದ್ದರು. 'ದೇಶದ ಮೊದಲ ಲ್ಯಾಂಬೋರ್ಗಿನಿ ಉರುಸ್ ಗ್ರಾಫೈಟ್ ಕ್ಯಾಪ್ಸುಲ್ ಕಾರು ಹೈದರಾಬಾದ್ನಲ್ಲಿ ತನ್ನ ಮನೆ ಕಂಡುಕೊಂಡಿದೆ' ಎಂದು ಸಾಮಾಜಿಕ ಜಾಲತಾಣದ ಫ್ಯಾನ್ಸ್ ಖಾತೆಗಳಲ್ಲಿ ಫೋಟೋಗಳು ವೈರಲ್ ಆಗಿದ್ದವು.
ಸ್ಯಾಂಡಲ್ವುಡ್ ನಟರಲ್ಲಿ ಮೂವರ ಬಳಿ ಲ್ಯಾಂಬರ್ಗಿನಿ ಉರುಸ್ ಕಾರಿದೆ, ಪುನೀತ್ ರಾಜ್ಕುಮಾರ್, ದರ್ಶನ್ ಹಾಗೂ ನಿಖಿಲ್ ಕುಮಾರಸ್ವಾಮಿ ಬಳಿಯೂ ಲ್ಯಾಂಬರ್ಗಿನಿ ಉರುಸ್ ಕಾರು ಇದೆ.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm