ಬ್ರೇಕಿಂಗ್ ನ್ಯೂಸ್
28-09-21 11:02 am Filmbeat: Bharath Kumar K ಸಿನಿಮಾ
ನಮ್ಮ ತಾಯಿ ಆರೋಗ್ಯ ಸರಿಯಿಲ್ಲ, ನಮ್ಮ ಅಕ್ಕನ ಆರೋಗ್ಯ ಸರಿಯಲ್ಲ, ಯಾರಾದರೂ ಸಹಾಯ ಮಾಡಿ ಎಂದು ಅಂಗಲಾಚಿ ಬೇಡುತ್ತಿದ್ದ ನಟಿ ವಿಜಯಲಕ್ಷ್ಮಿ ತಾಯಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ತಿಳಿದು ಬಂದಿದೆ.
75 ವರ್ಷದ ವಿಜಯಾ ಸುಂದರಂ ಅವರು ಇಂದು ಕೊನೆಯುಸಿರೆಳೆದರು. ವಿಜಯಲಕ್ಷ್ಮಿ ಅವರ ತಾಯಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸ್ವತಃ ವಿಜಯಲಕ್ಷ್ಮಿ ಅವರೇ ಹೇಳಿಕೊಂಡಿದ್ದ ಪ್ರಕಾರ ಚಿಕಿತ್ಸೆಯಲ್ಲಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ವಿಜಯಾ ಸುಂದರ ಸಾವನ್ನಪ್ಪಿದ್ದಾರೆ.
ವಿಜಯಲಕ್ಷ್ಮಿ ಅವರು ಸದ್ಯ ಚಿತ್ರರಂಗದಲ್ಲಿ ಸಕ್ರಿಯವಾಗಿಲ್ಲ. ಸಹೋದರಿ ಉಷಾ ಮತ್ತು ತಾಯಿಯ ಅನಾರೋಗ್ಯ ವಿಚಾರಕ್ಕೆ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಫೇಸ್ಬುಕ್ನಲ್ಲಿ ವಿಡಿಯೋ ಮಾಡಿ ಚಿತ್ರರಂಗ ಹಾಗೂ ಹಿರಿಯ ನಟಿ ಜಯಪ್ರದಾ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಕುಟುಂಬಕ್ಕೆ ಅನ್ಯಾಯವಾಗಿದೆ, ಯಾರೂ ಸಹಾಯ ಮಾಡ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಕಳೆದ ವಾರವೂ ಫೇಸ್ಬುಕ್ ಲೈವ್ ಬಂದು 'ನನಗೆ ಕೊರೊನಾ ಬಂದಿದೆ, ಕ್ವಾರಂಟೈನ್ ಆಗಲು ಮನೆಯಲ್ಲಿ, ಯಾರಾದರೂ ಅಭಿಮಾನಿಗಳು ಸಹಾಯ ಮಾಡಿ' ಎಂದು ಕೇಳಿಕೊಂಡಿದ್ದರು. 'ನನಗೆ ಬಹಳ ದಿನಗಳಿಂದಲೂ ಕಷ್ಟ ಇದೆ, ಸಹಾಯ ಮಾಡಿ ಎಂದು ಎಷ್ಟೇ ಕೇಳಿಕೊಂಡರೂ ಯಾರೂ ಸಹಾಯ ಮಾಡ್ತಿಲ್ಲ. ನನಗೆ ಬೆಂಗಳೂರಿನಲ್ಲಿ ಮನೆ ಇಲ್ಲ ಎಂದು ಹೇಳುತ್ತಲೇ ಬಂದಿದ್ದೇನೆ. ಈಗ ನನಗೆ ಕೊರೊನಾ ಬಂದಿದೆ. ಐಸೋಲೇಟ್ ಆಗಿದ್ದೇನೆ. ಇಂತಹ ಸಮಯದಲ್ಲಿ ನನ್ನ ಸಹೋದರಿ ಮತ್ತು ತಾಯಿಯನ್ನು ಎಲ್ಲಿಗೆ ಕಳುಹಿಸಲಿ ಎಂದು ಗೊತ್ತಾಗುತ್ತಿಲ್ಲ' ಎಂದಿದ್ದರು.
'ಕಲಾವಿದರ ಸಂಘದವರ ಬಳಿ ಎಷ್ಟೇ ಸಹಾಯ ಮಾಡಿದ್ರು ಯಾರು ಸರಿಯಾಗಿ ಸ್ಪಂದಿಸುತ್ತಿಲ್ಲ. ಒಬ್ಬರಿಂದ ಒಬ್ಬರಿಗೆ ಕರೆ ಮಾಡಿ ಎಂದು ಹೇಳುತ್ತಿದ್ದಾರೆ ಹೊರತು ಯಾರೂ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ' ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 'ಈಗಿನ ಪರಿಸ್ಥಿತಿಯಲ್ಲಿ ಯಾರಾದರೂ ಅಭಿಮಾನಿಗಳು ನನ್ನ ಬಗ್ಗೆ ಕಾಳಜಿ ತೋರಿ ಸಹಾಯ ಮಾಡಿ, ನಿಮ್ಮ ಮನೆ ಯಾವುದಾದರೂ ಖಾಲಿ ಇದ್ದಲ್ಲಿ ನಮ್ಮ ತಾಯಿ ಮತ್ತು ಅಕ್ಕ ಉಳಿದುಕೊಳ್ಳಲು ನೆರವು ನೀಡಿ' ಎಂದು ಮನವಿ ಮಾಡಿದ್ದಾರೆ. 'ಕಳೆದ ಐದು ದಿನಗಳಿಂದಲೂ ನಾನು ತೀವ್ರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದೇನೆ. ಹೆಚ್ಚು ಜ್ವರ ಇತ್ತು. ಊಟ ಸಹ ತಿನ್ನಲು ಆಗಿಲ್ಲ. ಈಗ ಕೋವಿಡ್ ಸೆಂಟರ್ಗೆ ಸ್ಥಳಾಂತರವಾಗಿ ಎಂದು ಹೇಳ್ತಿದ್ದಾರೆ. ನಿಜವಾಗಲೂ ಕಲಾವಿದರ ಸಂಘದಲ್ಲಿ ಯಾರೊ ಸಹಾಯ ಮಾಡ್ತಿಲ್ಲ. ಒಂದು ವೇಳೆ ನನಗೆ ಏನಾದರೂ ಹೆಚ್ಚು ಕಡಿಮೆ ಆದರು, ಎಲ್ಲರೂ ಸೇರಿ ನನ್ನ ಕೊಂದರು ಎಂದು ತಿಳಿದುಕೊಳ್ಳಿ' ಎಂದು ಅಸಮಾಧಾನ ಹೊರಹಾಕಿದರು.
ಒಬ್ಬ ನಟಿಗೆ ಇದು ತುಂಬಾ ದೊಡ್ಡ ಅನ್ಯಾಯವಾಗಿದೆ. ದರ್ಶನ್, ಯಶ್ ಅವರನ್ನು ಮಾತನಾಡಿಸಿ ಎಂದು ಎಷ್ಟೇ ಕೇಳಿದರೂ, ಯಾರೂ ಸ್ಪಂದಿಸುತ್ತಿಲ್ಲ. ನನ್ನನ್ನು ಬಲವಂತವಾಗಿ ಸಾಯಿಸುತ್ತಿದ್ದಾರೆ, ಎಲ್ಲರೂ ಸೇರಿ ನನ್ನ ಕೊಲೆ ಮಾಡ್ತಿದ್ದಾರೆ' ಎಂದು ವಿಜಯಲಕ್ಷ್ಮಿ ದೂರಿದ್ದರು.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm