ಬ್ರೇಕಿಂಗ್ ನ್ಯೂಸ್
27-10-21 10:49 pm Bengaluru Correspondent ಸಿನಿಮಾ
ಬೆಂಗಳೂರು, ಅ.27: ಕರೋನಾ ಆತಂಕ ದೂರವಾಗುತ್ತಿದ್ದಂತೆ ಚಿತ್ರ ರಸಿಕರಿಗೆ ಒಂದಾದ ಮೇಲೊಂದು ಸಿಹಿ ಸುದ್ದಿಗಳು ಸಿಗುತ್ತಿವೆ. ಕಾಮಿಡಿ ಕಿಂಗ್ ಶರಣ್ ಅಭಿನಯದ ಅವತಾರ್ ಪುರುಷ ಚಿತ್ರ ತಂಡ ದೀಪಾವಳಿಗೂ ಮೊದಲೇ ಸಿನಿ ರಸಿಕರಿಗೆ ಸರ್ಪ್ರೈಜ್ ಕೊಡುತ್ತಿದೆ.
ಕೆಜಿಎಫ್ ಚಿತ್ರದಂತೆಯೇ ಅವತಾರ ಪುರುಷ ಚಿತ್ರ ಕೂಡ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ ಎಂದು ಹೇಳಲಾಗುತ್ತಿದೆ. ಅದೇನಾದರು ನಿಜವಾದರೆ ಶರಣ್ ವೃತ್ತಿ ಬದುಕಿನ ಅತಿ ಹೆಚ್ಚು ಬಜೆಟ್ ನ ಚಿತ್ರ ಇದಾಗಲಿದೆ. ದೀಪಾವಳಿಗೂ ಮೊದಲೇ ಚಿತ್ರತಂಡ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಲ್ಲಿದ್ದು, ಸಿನಿಮಾ ಪ್ರಚಾರದ ಕಾವನ್ನ ನಿಧಾನವಾಗಿ ಹೆಚ್ಚಿಸಿಕೊಳ್ಳುತ್ತಿದೆ.
ಶರಣ್ ಮತ್ತು ಸಿಂಪಲ್ ಸುನಿ ಕಾಂಬಿನೇಷನ್ ನ ಅವತಾರ್ ಪುರುಷ ಚಿತ್ರ ಹಾರರ್ ಕಾಮಿಡಿ ಸಬ್ಜೆಕ್ಟ್ ಹೊಂದಿದ್ದು ಪ್ರೇಕ್ಷಕರಲ್ಲಿ ಭಯ ಮತ್ತು ಕಾಮಿಡಿಯನ್ನ ಏಕಕಾಲಕ್ಕೆ ಹೊಮ್ಮಿಸಲಿದೆ. ಶರಣ್ ಮತ್ತು ಸುನಿ ಶೈಲಿಯ ಜೊತೆಗೆ ಆಪ್ತಮಿತ್ರ ಥರಹದ ಕಾಮಿಡಿಯನ್ನ ಈ ಚಿತ್ರದಲ್ಲಿ ನೋಡಬಹುದಾಗಿದೆ.
ಕಿರಿಕ್ ಪಾರ್ಟಿ, ಅವನೇ ಶ್ರೀಮನ್ನಾರಾಯಣ, ಗೋಧಿ ಬಣ್ಣ ಸಾಧಾರಣ ಮೈಕಟ್ಟು ನಂತಹ ಸಕ್ಸಸ್ ಚಿತ್ರಗಳನ್ನ ಕನ್ನಡಿಗರಿಗೆ ಕೊಟ್ಟ ಪುಷ್ಕರ್ ಮಲ್ಲಿಕಾರ್ಜುನಯ್ಯ ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದು ಪುಷ್ಕರ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ತೆರೆಕಾಣಲಿದೆ.
ಶರಣ್ ಗೆ ನಾಯಕಿಯಾಗಿ ಚಂದನ ವನದ ಚಿಟ್ಟೆ
ಅವತಾರ ಪುರುಷನಿಗೆ ನಾಯಕಿಯಾಗಿ ಈ ಹಿಂದೆ ಚುಟು ಚುಟು ಅಂತ ಹೆಜ್ಜೆ ಹಾಕಿದ್ದ ಅಶಿಕಾ ರಂಗನಾಥ್ ಈ ಚಿತ್ರದಲ್ಲೂ ತೆರೆ ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಪಕ್ಕಾ ಮಾರ್ಡನ್ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ಬಹುದಿನಗಳಿಂದ ಕಾಣದಂತೆ ಮಾಯವಾಗಿದ್ದ ಶ್ರೀನಗರ ಕಿಟ್ಟಿ ಅವತಾರ್ ಪುರುಷ ಮೂಲಕ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಬ್ಲಾಕ್ ಮ್ಯಾಜಿಷಿಯನ್ ಆಗಿ ವಿಶೇಷ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಇದರ ಜೊತೆಗೆ ಶರಣ್ ಅವರ ಮಗಳು ‘ಪುಣ್ಯ’ ಕೂಡ ನಟಿಸುತ್ತಿದ್ದಾರೆ. ಈ ಮೂಲಕ ಅಪ್ಪನ ಚಿತ್ರದ ಮೂಲಕವೇ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇನ್ನೂ ದೊಡ್ಡ ದೊಡ್ಡ ನಟರ ದಂಡೇ ಈ ಚಿತ್ರದಲ್ಲಿದೆ. ಸಾಯಿಕುಮಾರ್, ಸುಧಾರಾಣಿ, ಅಯ್ಯಪ್ಪ, ಭವ್ಯ, ಸಾಧುಕೋಕಿಲ, ಶ್ರೀನಗರ ಕಿಟ್ಟಿ ಸೇರಿದಂತೆ ಹಲವಾರು ಕಲಾವಿದರು ಅವತಾರ ಪುರುಷನಿಗೆ ಸಾಥ್ ಕೊಡಲಿದ್ದಾರೆ.
Sharan’s Avatar Purusha, which was scheduled to release on May 28 is all set to release this Deepavali 2021. The romantic comedy thriller will be released in two parts, each lasting two hours and twenty minutes. The first is titled Ashta Digbandana Madalaka, and it will feature a mix of intense characterisation and humour.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm