ಬ್ರೇಕಿಂಗ್ ನ್ಯೂಸ್
29-10-21 12:09 pm H K News Desk ಸಿನಿಮಾ
ಬೆಂಗಳೂರು, ಅ.29: ಕನ್ನಡದ ಹಿರಿಯ ನಟಿ ಲೀಲಾವತಿ(83) ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗುತ್ತಿದೆ. ವಯಸ್ಸಿನ ಕಾರಣದಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಲೀಲಾವತಿ ಅವರು ಇತ್ತೀಚೆಗೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಆನಂತರ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು.
ಲೀಲಾವತಿ ಅವರು ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯ ಮಗ ವಿನೋದ್ ರಾಜ್ ಜತೆ ವಾಸವಿದ್ದಾರೆ. ಕಳೆದ ಆಗಸ್ಟ್ ನಲ್ಲಿ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಆನಂತರ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದು ರೆಸ್ಟ್ ಅಗತ್ಯ ಇರುವ ಬಗ್ಗೆ ಸಲಹೆ ನೀಡಿದ್ದರು.
ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಲೀಲಾವತಿ ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕಳೆದ ಒಂದು ವಾರದಿಂದ ಆರೋಗ್ಯದಲ್ಲಿ ಏರುಪೇರು ಕಂಡುಬರುತ್ತಿದ್ದು ದ್ರವ ರೂಪದ ಆಹಾರವನ್ನು ಮಾತ್ರ ಸೇವಿಸುತ್ತಿದ್ದಾರೆನ್ನುವ ಮಾತುಗಳು ಕೇಳಿಬರುತ್ತಿವೆ. ಇದು ಅವರ ಅಪಾರ ಅಭಿಮಾನಿಗಳಿಗೆ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಹಲವು ನಟಿಯರು ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

1938 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಲೀಲಾಕಿರಣ್ ಹೆಸರಲ್ಲಿ ಜನಿಸಿದ್ದ ಲೀಲಾವತಿ 1950 ರಿಂದಲೇ ಚಿತ್ರರಂಗದಲ್ಲಿದ್ದಾರೆ. 1949ರಲ್ಲಿ ನಾಗಕನ್ನಿಕಾ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರಜೀವನ ಆರಂಭಿಸಿದ ಅವರು,ಕನ್ನಡ ತಮಿಳು ತೆಲುಗು ಹಾಗೂ ಮಲಯಾಳಂನ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 1999 ರಲ್ಲಿ ಚಿತ್ರರಂಗದಲ್ಲಿ ಜೀವಮಾನ ಸಾಧನೆಗಾಗಿ ನೀಡಲಾಗುವ ಡಾ.ರಾಜ್ ಕುಮಾರ್ ಪ್ರಶಸ್ತಿ ಪಡೆದಿರುವ ಲೀಲಾವತಿ, ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ.
Kannada actress Leelavathi condition serious admitted in Hospital.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm