ಬ್ರೇಕಿಂಗ್ ನ್ಯೂಸ್
29-10-21 12:09 pm H K News Desk ಸಿನಿಮಾ
ಬೆಂಗಳೂರು, ಅ.29: ಕನ್ನಡದ ಹಿರಿಯ ನಟಿ ಲೀಲಾವತಿ(83) ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗುತ್ತಿದೆ. ವಯಸ್ಸಿನ ಕಾರಣದಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಲೀಲಾವತಿ ಅವರು ಇತ್ತೀಚೆಗೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಆನಂತರ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ವೈದ್ಯರ ಸಲಹೆಯಂತೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು.
ಲೀಲಾವತಿ ಅವರು ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯ ಮಗ ವಿನೋದ್ ರಾಜ್ ಜತೆ ವಾಸವಿದ್ದಾರೆ. ಕಳೆದ ಆಗಸ್ಟ್ ನಲ್ಲಿ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಆನಂತರ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದು ರೆಸ್ಟ್ ಅಗತ್ಯ ಇರುವ ಬಗ್ಗೆ ಸಲಹೆ ನೀಡಿದ್ದರು.
ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವ ಲೀಲಾವತಿ ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಕಳೆದ ಒಂದು ವಾರದಿಂದ ಆರೋಗ್ಯದಲ್ಲಿ ಏರುಪೇರು ಕಂಡುಬರುತ್ತಿದ್ದು ದ್ರವ ರೂಪದ ಆಹಾರವನ್ನು ಮಾತ್ರ ಸೇವಿಸುತ್ತಿದ್ದಾರೆನ್ನುವ ಮಾತುಗಳು ಕೇಳಿಬರುತ್ತಿವೆ. ಇದು ಅವರ ಅಪಾರ ಅಭಿಮಾನಿಗಳಿಗೆ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಹಲವು ನಟಿಯರು ಲೀಲಾವತಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

1938 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಲೀಲಾಕಿರಣ್ ಹೆಸರಲ್ಲಿ ಜನಿಸಿದ್ದ ಲೀಲಾವತಿ 1950 ರಿಂದಲೇ ಚಿತ್ರರಂಗದಲ್ಲಿದ್ದಾರೆ. 1949ರಲ್ಲಿ ನಾಗಕನ್ನಿಕಾ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರಜೀವನ ಆರಂಭಿಸಿದ ಅವರು,ಕನ್ನಡ ತಮಿಳು ತೆಲುಗು ಹಾಗೂ ಮಲಯಾಳಂನ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 1999 ರಲ್ಲಿ ಚಿತ್ರರಂಗದಲ್ಲಿ ಜೀವಮಾನ ಸಾಧನೆಗಾಗಿ ನೀಡಲಾಗುವ ಡಾ.ರಾಜ್ ಕುಮಾರ್ ಪ್ರಶಸ್ತಿ ಪಡೆದಿರುವ ಲೀಲಾವತಿ, ತುಮಕೂರು ವಿವಿಯಿಂದ ಗೌರವ ಡಾಕ್ಟರೇಟ್ ಪಡೆದಿದ್ದಾರೆ.
Kannada actress Leelavathi condition serious admitted in Hospital.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am