ಬ್ರೇಕಿಂಗ್ ನ್ಯೂಸ್
17-11-21 02:00 pm HK News Desk ಸಿನಿಮಾ
ಚೆನ್ನೈ, ನ.17: ಒಂದೆಡೆ ಜೈಭೀಮ್ ಸಿನಿಮಾ ದೇಶಾದ್ಯಂತ ಹಿಟ್ ಆಗಿ ಭಾರೀ ಜನ ಮೆಚ್ಚುಗೆ ಪಡೆಯುತ್ತಿದ್ದರೆ, ತಮಿಳುನಾಡಿನಲ್ಲಿ ವನ್ನಿಯಾರ್ ಸಮುದಾಯವನ್ನು ಸಿನಿಮಾದಲ್ಲಿ ಕೀಳಾಗಿ ಚಿತ್ರಿಸಲಾಗಿದೆ ಎಂದು ಒಂದು ವರ್ಗ ಸಿನಿಮಾ ತಂಡದ ವಿರುದ್ಧ ಬೀದಿಗಿಳಿದಿದೆ. ಇದಕ್ಕಾಗಿ ಚೆನ್ನೈನಲ್ಲಿರುವ ಸಿನಿಮಾ ನಟ ಸೂರ್ಯ ಅವರ ಮನೆಗೆ ಶಸ್ತ್ರಧಾರಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಇದೇ ವೇಳೆ, ಹಿಂದುಳಿದ ಜನರನ್ನು ಪ್ರತಿನಿಧಿಸುವ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ರಾಜಕೀಯ ಪಕ್ಷದ ಮೈಲಾದುರೈ ಜಿಲ್ಲಾ ಸೆಕ್ರಟರಿ ಪನ್ನೀರ್ ಸೆಲ್ವಂ ಎಂಬವರು, ನಟ ಸೂರ್ಯ ತಮ್ಮ ಜಿಲ್ಲೆಗೆ ಬಂದ ಸಂದರ್ಭದಲ್ಲಿ ಆತನ ಮೇಲೆ ದಾಳಿ ನಡೆಸಿದರೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಎರಡು ದಿನಗಳ ಹಿಂದೆ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಮೈಲಾದುರೈನಲ್ಲಿ ಥಿಯೇಟರಿಗೆ ನುಗ್ಗಿದ್ದ ಕಾರ್ಯಕರ್ತರು ಬಲವಂತವಾಗಿ ಜೈಭೀಮ್ ಚಿತ್ರದ ಪ್ರದರ್ಶನಕ್ಕೆ ತಡೆಯೊಡ್ಡಿದ್ದರು. ಇದಲ್ಲದೆ, ನಟ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ದೂರನ್ನೂ ನೀಡಿದ್ದಾರೆ.

ಇನ್ನೊಂದು ಕಡೆ ವನ್ನಿಯಾರ್ ಸಮುದಾಯವನ್ನು ಪ್ರತಿನಿಧಿಸುವ ವನ್ನಿಯಾರ್ ಸಂಗಂ ವತಿಯಿಂದ ಸಿನಿಮಾ ತಂಡದ ವಿರುದ್ಧ ಲೀಗಲ್ ನೋಟೀಸ್ ನೀಡಲಾಗಿದೆ. ಸಮುದಾಯದ ಸಿಂಬಲನ್ನು ಬೆಂಕಿಗೆ ಹಾಕುವ ದೃಶ್ಯವನ್ನು ಸಿನಿಮಾದಿಂದ ತೆಗೆದು ಹಾಕಬೇಕು. ಅಲ್ಲದೆ, ಸಮುದಾಯಕ್ಕೆ ಅಗೌರವ ಸೂಚಿಸುವ ರೀತಿ ಚಿತ್ರಿಸಿದ್ದಕ್ಕೆ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಹೇಳಿ 5 ಕೋಟಿ ರೂಪಾಯಿ ಪರಿಹಾರ ಕೇಳಿ ಡಿಮ್ಯಾಂಡ್ ಮುಂದಿಟ್ಟಿದೆ.
1995ರಲ್ಲಿ ತಮಿಳುನಾಡಿನಲ್ಲಿ ಪೊಲೀಸರ ಚಿತ್ರಹಿಂಸೆಗೆ ಒಳಗಾಗಿ ಪರಿಶಿಷ್ಟ ವರ್ಗದ ಯುವಕನೊಬ್ಬ ಸಾವನ್ನಪ್ಪಿದ ನೈಜ ಘಟನೆ ಆಧರಿಸಿ, ಜೈಭೀಮ್ ಚಿತ್ರವನ್ನು ಮಾಡಲಾಗಿತ್ತು. ವಾಸ್ತವ ಕತೆಯ ಜೊತೆ ಕಾಲ್ಪನಿಕ ದೃಶ್ಯಗಳನ್ನು ಹೆಣೆದು ಪೊಲೀಸರ ಚಿತ್ರಹಿಂಸೆಯನ್ನು ಚಿತ್ರದಲ್ಲಿ ಕಟ್ಟಿಕೊಡಲಾಗಿತ್ತು. ಚಿತ್ರದಲ್ಲಿ ವನ್ನಿಯಾರ್ ಸಮುದಾಯದ ಬಗ್ಗೆ ಹೆಸರೆತ್ತಿ ಅಗೌರವ ಸೂಚಿಸುವ ರೀತಿ ಚಿತ್ರಿಸಲಾಗಿದೆ ಎನ್ನುವುದು ವನ್ನಿಯಾರ್ ಸಂಗಂ ಆರೋಪ. ವನ್ನಿಯಾರ್ ಅಥವಾ ವನ್ನಿಯಾ ಕುಲ ಕ್ಷತ್ರಿಯ ಎನ್ನುವ ಹೆಸರಲ್ಲಿ ಗುರುತಿಸಲ್ಪಟ್ಟ ತೀರಾ ಹಿಂದುಳಿದ ಪರಿಶಿಷ್ಟ ವರ್ಗದ ಸಮುದಾಯದ ಜನರು ತಮಿಳುನಾಡಿನ ಉತ್ತರ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ವಿವಾದ ಕೇಳಿಬರುತ್ತಿದ್ದಂತೆ ತಮಿಳು ಚಿತ್ರರಂಗದ ಹೆಚ್ಚಿನ ನಟ, ನಿರ್ದೇಶಕರು ಜೈಭೀಮ್ ಚಿತ್ರ ತಂಡದ ಪರವಾಗಿ ನಿಂತಿದ್ದಾರೆ. ಅಲ್ಲದೆ, ದಕ್ಷಿಣ ಭಾರತ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪಿಎಂಕೆ ಪಕ್ಷದ ಸ್ಥಾಪಕ, ಮಾಜಿ ಸಚಿವ ಅಂಬುಮನಿ ರಾಮದಾಸ್ ಅವರಿಗೆ ಪತ್ರ ಬರೆದು, ಜೈಭೀಮ್ ಚಿತ್ರದ ವಿರುದ್ಧ ಕಾರ್ಯಕರ್ತರು ಪ್ರತಿಭಟನೆ ನಡೆಸದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
In a controversial move, the Nagapattinam district secretary of Pattali Makkal Katchi (PMK), Sithamalli Pazhani Saamy, has announced a cash reward of Rs one lakh to any youngster who attacks actor Surya. The announcement was in response to Surya's recently released movie - Jai Bhim.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm