ಬ್ರೇಕಿಂಗ್ ನ್ಯೂಸ್
02-08-20 09:03 am Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟ ಮತ್ತು ನಿರ್ಮಾಪಕ ಸೋನು ಸೂದ್ ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಮಾನವೀಯ ಕಾರ್ಯಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಸೋನ್ ಸೂದ್ ತಾರೆಯಾಗಿ ಮಿಂಚುತ್ತಿದ್ದು, ಎಲ್ಲರೂ ಮೆಚ್ಚಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ನಟ ಮೂವರು ಮಕ್ಕಳನ್ನು ದತ್ತು ಪಡೆದುಕೊಳ್ಳುವ ಮೂಲಕ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ.
ಇತ್ತೀಚೆಗೆ ಕೊರೊನಾದಿಂದ ಕೆಲಸ ಕಳೆದುಕೊಂಡಿದ್ದ ಹೈದರಾಬಾದ್ ಟೆಕ್ಕಿ ಉದ್ಯೋಗ ಕೊಡಿಸುವ ಮೂಲಕ ಸಹಾಯ ಮಾಡಿದ್ದರು. ಈಗ ತೆಲಂಗಾಣದ ಭುವನಗಿರಿ ಜಿಲ್ಲೆಯ ಮೂವರು ಅನಾಥ ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೂಲಕ ಮತ್ತೊಂದು ಮಹತ್ತರ ಕಾರ್ಯ ಮಾಡಿದ್ದಾರೆ.

ಪತ್ರಕರ್ತ ರಾಜೇಶ್ ಕರಣಂ ಅವರು ಟ್ವಿಟ್ಟರಿನಲ್ಲಿ ಸೋನು ಸೂದ್ ಅವರಿಗೆ ಟ್ಯಾಗ್ ಮಾಡುವ ಮೂಲಕ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಪೋಷಕರಿಲ್ಲದ ಮಕ್ಕಳು ತಮ್ಮ ಮನೆಯ ಕೆಲಸಗಳನ್ನು ತಾನೇ ಮಾಡುತ್ತಿದ್ದರು. ಅಲ್ಲದೇ ಹಿರಿಯ ಸಹೋದರ ತನ್ನ ಇಬ್ಬರು ಒಡಹುಟ್ಟಿದವರನ್ನು ನೋಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಈ ವಿಡಿಯೋ ಶೇರ್ ಮಾಡಿ, “ಭುವನಗಿರಿ ಜಿಲ್ಲೆಯ ಯಾದಾದ್ರಿ ಗ್ರಾಮದ ಈ ಮೂವರು ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ. ಈ ಮೂವರು ಮಕ್ಕಳು ನೋಡಿಕೊಳ್ಳಲು ಹಿರಿಯರು ಯಾರು ಇಲ್ಲ. ಆದ್ದರಿಂದ ಇವರು ಅನಾಥರಾಗಿದ್ದಾರೆ. ಹೀಗಾಗಿ ಇವರಿಗೆ ದಯವಿಟ್ಟು ಸಹಾಯ ಮಾಡಿ” ಎಂದು ಸೋನು ಸೂದ್ ಬಳಿ ಮನವಿ ಮಾಡಿಕೊಂಡಿದ್ದರು.
ಮಕ್ಕಳ ತಂದೆ ಈಗಾಗಲೇ ಮೃತಪಟ್ಟಿದ್ದರು. ಆದರೆ ಇತ್ತೀಚೆಗೆ ತಾಯಿಯೂ ಕೂಡ ಸಾವನ್ನಪ್ಪಿದ್ದಾರೆ. ಪತ್ರಕರ್ತ ಟ್ವೀಟ್ ಮಾಡಿದ ಸುಮಾರು 15 ನಿಮಿಷದೊಳಗೆ ಪ್ರತಿಕ್ರಿಯಿಸಿದ ಸೋನು ಸೂದ್, “ಅವರು ಇನ್ನು ಮುಂದೆ ಅನಾಥರಲ್ಲ. ಅವರು ನನ್ನ ಜವಾಬ್ದಾರಿಯಾಗುತ್ತಾರೆ” ಎಂದು ಭರವಸೆ ನೀಡಿದ್ದಾರೆ.
ಕೊಟ್ಟ ಮಾತಿನಿಂತೆ ಸೋನು ಸೂದ್ ತಮ್ಮ ಅಧಿಕಾರಿಗಳನ್ನು ಕಳುಹಿಸಿ ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಟ್ವಿಟ್ಟರಿನಲ್ಲಿ ನೆಟ್ಟಿಗರು ಸೋನ್ ಸೂದ್ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm