ಬ್ರೇಕಿಂಗ್ ನ್ಯೂಸ್
02-08-20 09:03 am Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟ ಮತ್ತು ನಿರ್ಮಾಪಕ ಸೋನು ಸೂದ್ ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಮಾನವೀಯ ಕಾರ್ಯಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಸೋನ್ ಸೂದ್ ತಾರೆಯಾಗಿ ಮಿಂಚುತ್ತಿದ್ದು, ಎಲ್ಲರೂ ಮೆಚ್ಚಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ನಟ ಮೂವರು ಮಕ್ಕಳನ್ನು ದತ್ತು ಪಡೆದುಕೊಳ್ಳುವ ಮೂಲಕ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ.
ಇತ್ತೀಚೆಗೆ ಕೊರೊನಾದಿಂದ ಕೆಲಸ ಕಳೆದುಕೊಂಡಿದ್ದ ಹೈದರಾಬಾದ್ ಟೆಕ್ಕಿ ಉದ್ಯೋಗ ಕೊಡಿಸುವ ಮೂಲಕ ಸಹಾಯ ಮಾಡಿದ್ದರು. ಈಗ ತೆಲಂಗಾಣದ ಭುವನಗಿರಿ ಜಿಲ್ಲೆಯ ಮೂವರು ಅನಾಥ ಮಕ್ಕಳ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೂಲಕ ಮತ್ತೊಂದು ಮಹತ್ತರ ಕಾರ್ಯ ಮಾಡಿದ್ದಾರೆ.

ಪತ್ರಕರ್ತ ರಾಜೇಶ್ ಕರಣಂ ಅವರು ಟ್ವಿಟ್ಟರಿನಲ್ಲಿ ಸೋನು ಸೂದ್ ಅವರಿಗೆ ಟ್ಯಾಗ್ ಮಾಡುವ ಮೂಲಕ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಪೋಷಕರಿಲ್ಲದ ಮಕ್ಕಳು ತಮ್ಮ ಮನೆಯ ಕೆಲಸಗಳನ್ನು ತಾನೇ ಮಾಡುತ್ತಿದ್ದರು. ಅಲ್ಲದೇ ಹಿರಿಯ ಸಹೋದರ ತನ್ನ ಇಬ್ಬರು ಒಡಹುಟ್ಟಿದವರನ್ನು ನೋಡಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಈ ವಿಡಿಯೋ ಶೇರ್ ಮಾಡಿ, “ಭುವನಗಿರಿ ಜಿಲ್ಲೆಯ ಯಾದಾದ್ರಿ ಗ್ರಾಮದ ಈ ಮೂವರು ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡಿದ್ದಾರೆ. ಈ ಮೂವರು ಮಕ್ಕಳು ನೋಡಿಕೊಳ್ಳಲು ಹಿರಿಯರು ಯಾರು ಇಲ್ಲ. ಆದ್ದರಿಂದ ಇವರು ಅನಾಥರಾಗಿದ್ದಾರೆ. ಹೀಗಾಗಿ ಇವರಿಗೆ ದಯವಿಟ್ಟು ಸಹಾಯ ಮಾಡಿ” ಎಂದು ಸೋನು ಸೂದ್ ಬಳಿ ಮನವಿ ಮಾಡಿಕೊಂಡಿದ್ದರು.
ಮಕ್ಕಳ ತಂದೆ ಈಗಾಗಲೇ ಮೃತಪಟ್ಟಿದ್ದರು. ಆದರೆ ಇತ್ತೀಚೆಗೆ ತಾಯಿಯೂ ಕೂಡ ಸಾವನ್ನಪ್ಪಿದ್ದಾರೆ. ಪತ್ರಕರ್ತ ಟ್ವೀಟ್ ಮಾಡಿದ ಸುಮಾರು 15 ನಿಮಿಷದೊಳಗೆ ಪ್ರತಿಕ್ರಿಯಿಸಿದ ಸೋನು ಸೂದ್, “ಅವರು ಇನ್ನು ಮುಂದೆ ಅನಾಥರಲ್ಲ. ಅವರು ನನ್ನ ಜವಾಬ್ದಾರಿಯಾಗುತ್ತಾರೆ” ಎಂದು ಭರವಸೆ ನೀಡಿದ್ದಾರೆ.
ಕೊಟ್ಟ ಮಾತಿನಿಂತೆ ಸೋನು ಸೂದ್ ತಮ್ಮ ಅಧಿಕಾರಿಗಳನ್ನು ಕಳುಹಿಸಿ ಮಕ್ಕಳನ್ನು ದತ್ತು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಟ್ವಿಟ್ಟರಿನಲ್ಲಿ ನೆಟ್ಟಿಗರು ಸೋನ್ ಸೂದ್ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm