ಬ್ರೇಕಿಂಗ್ ನ್ಯೂಸ್
18-01-22 12:11 pm HK Desk news ಸಿನಿಮಾ
ಹೈದರಾಬಾದ್, ಜ 18 : ಕಾಲಿವುಡ್ ನಟ ಧನುಷ್ ಹಾಗೂ ರಜಿನಿಕಾಂತ್ ಪುತ್ರಿ ಐಶ್ವರ್ಯಾ ಪರಸ್ಪರ ದೂರಾಗುತ್ತಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ 18 ವರ್ಷಗಳ ವೈವಾಹಿಕ ಜೀವನ ಅಂತ್ಯಗೊಂಡಂತಾಗಿದೆ.
2004 ರಲ್ಲಿ ಐಶ್ವರ್ಯಾ ಹಾಗೂ ಧನುಷ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದೀಗ 18 ವರ್ಷಗಳ ದಾಂಪತ್ಯ ಜೀವನ ಅಂತ್ಯ ಹಾಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ತಾವು ದೂರವಾಗುತ್ತಿರುವ ಬಗ್ಗೆ ಅಧಿಕೃತ ಮಾಹಿತಿಯನ್ನು ಧನುಷ್ ಮತ್ತು ಐಶ್ವರ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನಾವಿಬ್ಬರು 18 ವರ್ಷಗಳಿಂದ ಸ್ನೇಹಿತರಾಗಿ, ಪ್ರೇಮಿಗಳಾಗಿ, ದಂಪತಿಯಾಗಿ , ಪೋಷಕರಾಗಿ, ಪರಸ್ಪರ ಒಳ್ಳೆಯದನ್ನು ಬಯಸುತ್ತಾ, ಅರ್ಥಮಾಡಿಕೊಳ್ಳುತ್ತಾ, ಸಹಕರಿಸುತ್ತಾ ಜೀವನ ನಡೆಸಿದ್ದೇವೆ. ಒಬ್ಬರಿಗೆ ಒಬ್ಬರು ಆಸರೆಯಾಗಿದ್ದೇವೆ. ಇಂದು ನಮ್ಮಿಬ್ಬರ ದಾರಿ ಬೇರೆ ಬೇರೆಯಾಗಿದೆ. ನಾನು ಹಾಗೂ ಐಶ್ವರ್ಯಾ ಸಮಯ ತೆಗೆದುಕೊಂಡು ಕೊನೆಗೆ ತೀರ್ಮಾನಿಸಿ ಪರಸ್ಪರ ಒಪ್ಪಿ ದಾಂಪತ್ಯ ಜೀವನದಿಂದ ದೂರಾಗುತ್ತಿದ್ದೇವೆ. ನಮ್ಮ ನಿರ್ಧಾರಕ್ಕೆ ನಿಮ್ಮ ಬೆಂಬಲ ಹಾಗೂ ಸಹಕಾರ ಇರಲಿ ಎಂದು ಆಶಿಸುತ್ತೇನೆ. ದಯಮಾಡಿ ನಮ್ಮ ಖಾಸಗಿ ನಿರ್ಧಾರವನ್ನು ಗೌರವಿಸಿ ಎಂದು ಧನುಷ್ ಟ್ವೀಟ್ ಮಾಡಿದ್ದಾರೆ.
ಧನುಷ್ ಅವರ ಪೋಸ್ಟ್ನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡ ಐಶ್ವರ್ಯಾ, ಇದಕ್ಕೆ ಶೀರ್ಷಿಕೆ ಅಗತ್ಯವಿಲ್ಲ. ನಿಮ್ಮ ತಿಳುವಳಿಕೆ ಮತ್ತು ನಿಮ್ಮ ಪ್ರೀತಿ ಮಾತ್ರ ಅಗತ್ಯ ಎಂದು ಬರೆದುಕೊಂಡು ದಾಂಪತ್ಯ ಜೀವನದಿಂದ ಇಬ್ಬರು ದೂರವಾಗುತ್ತಿರುವ ಕುರಿತಾಗಿ ತಿಳಿಸಿದ್ದಾರೆ.
ದಂಪತಿಗೆ ಯಾತ್ರಾ ಮತ್ತು ಲಿಂಗ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. 2006 ಮತ್ತು 2010 ರಲ್ಲಿ ಜನಿಸಿದವರಾಗಿದ್ದಾರೆ. ಐಶ್ವರ್ಯಾ ಅವರ ಮೊದಲ ನಿರ್ದೇಶನದ ‘3’ ನಲ್ಲಿ ಧನುಷ್ ಕೆಲಸ ಮಾಡಿದ್ದರು ಮತ್ತು ಚಿತ್ರದ ‘ಕೊಲವೆರಿ ಡಿ’ ಹಾಡು ಸೂಪರ್ ಹಿಟ್ ಆಗಿ ಎಲ್ಲಾ ಕಡೆ ಸದ್ದು ಮಾಡಿತ್ತು.
ಎರಡನೇ ಪುತ್ರಿ ಸೌಂದರ್ಯ ಕೂಡ ಮೊದಲ ಮದುವೆ ಮುರಿದುಕೊಂಡು ಕೆಲವೇ ವರ್ಷಗಳ ಹಿಂದೆ ಎರಡನೇ ವಿವಾಹವಾಗಿದ್ದರು. ರಜನಿಕಾಂತ್ ಮೊದಲ ಪುತ್ರಿ ಐಶ್ವರ್ಯಾ ದಾಂಪತ್ಯವೂ ಮುರಿದುಬಿದ್ದಿದೆ.
Choosing to end their 18-year-long marriage, actor Dhanush and director Aishwaryaa Dhanush, who also happens to be the daughter of superstar Rajinikanth, have announced that they have decided to part ways. Late on Monday night, both the actor and the director put out a letter, which looked similar for the most part, on their respective social media handles. Dhanush, who was most recently seen with Sara Ali Khan in ‘Atrangi Re’, shared his letter on Twitter, Aishwarya chose Instagram.
10-07-25 12:45 pm
HK News Desk
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
10-07-25 01:00 pm
HK News Desk
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
09-07-25 10:25 pm
Mangalore Correspondent
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
Mangalore Peace meeting Home Minister: ಎಳೆಯ ಮ...
09-07-25 07:37 pm
ಮಂಗಳೂರಿನಲ್ಲಿ ಒಂದೇ ದಿನ ಅಂತರದಲ್ಲಿ ಹಾರ್ಟ್ ಅಟ್ಯಾಕ...
09-07-25 06:53 pm
10-07-25 01:05 pm
HK News Desk
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm