ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm