ಬ್ರೇಕಿಂಗ್ ನ್ಯೂಸ್
17-09-20 03:00 pm Headline Karnataka News Network ಸಿನಿಮಾ
ನಟ ವಿಶಾಲ್ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್ ಇಂಡಿಯಾ ಚಿತ್ರ. ಸೈಬರ್ ಕ್ರೈಮ್ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ಮೇ ತಿಂಗಳಿನಲ್ಲಿಯೇ ಈ ಸಿನಿಮಾ ತೆರೆ ಕಾಣಬೇಕಿತ್ತು. ಕೋವಿಡ್–19 ಪರಿಣಾಮ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗಿತ್ತು. ಈಗ ಒಟಿಟಿಯಲ್ಲಿ ದೀಪಾವಳಿ ಹಬ್ಬದಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ.

ಇದನ್ನು ವಿಶಾಲ್ ಅವರೇ ದೃಢಪಡಿಸಿದ್ದಾರೆ. ಇದನ್ನು ನಿರ್ದೇಶಿರುವುದು ಎಂ.ಎಸ್. ಆನಂದನ್. ಇದರಲ್ಲಿ ವಿಶಾಲ್ ಅವರದು ಮಿಲಿಟರಿ ಅಧಿಕಾರಿಯ ಪಾತ್ರವಂತೆ. ಶ್ರದ್ಧಾ ಶ್ರೀನಾಥ್ ತನಿಖಾಧಿಕಾರಿಯಾಗಿ ನಟಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದು ಹ್ಯಾಕರ್ಸ್ ತಂಡವೊಂದು ಬೆಂಗಳೂರಿನಲ್ಲಿ 49 ಮನೆಗಳಲ್ಲಿ ದರೋಡೆ ನಡೆಸುತ್ತದೆ. ವಿಶಾಲ್ ಮನೆಯಲ್ಲಿದ್ದ ‘ಅಶೋಕ ಚಕ್ರ’ ಕೂಡ ಕಳವಾಗುತ್ತದೆ. ಹ್ಯಾಕರ್ಸ್ ಪತ್ತೆಗೆ ಈ ಇಬ್ಬರು ಕಾರ್ಯಾಚರಣೆಗೆ ಧುಮುಕುತ್ತಾರೆ. ದರೋಡೆಕೋರರನ್ನು ಹೇಗೆ ಪತ್ತೆ ಹಚ್ಚತ್ತಾರೆ ಎಂಬುದೇ ಇದರ ಹೂರಣ. ನಟಿ ರೆಜಿನಾ ಕಸ್ಸಂದ್ರ ಕೂಡ ಇದರಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಭ್ರಷ್ಟಾಚಾರ ಸಮಾಜಕ್ಕೆ ಕಂಟಕವಾಗಿ ಪರಿಣಮಿಸಿದೆ. ನಮಗೆ ಗೊತ್ತಿಲ್ಲದೆ ನಾವು ಸಂಪಾದಿಸಿದ ಹಣದ ಲೂಟಿ ನಡೆಯುತ್ತಿದೆ. ಇದರ ವಿರುದ್ಧವೇ ‘ಚಕ್ರ’ದಲ್ಲಿ ಹೇಳಲಾಗಿದೆ’ ಎಂದಿದ್ದಾರೆ ವಿಶಾಲ್. ಪ್ರಸ್ತುತ ವಿಶಾಲ್ ಸೇರಿದಂತೆ 25 ಜನರ ಚಿತ್ರತಂಡ ಬಾಕಿ ಉಳಿದಿರುವ ‘ಚಕ್ರ’ದ ಶೂಟಿಂಗ್ನಲ್ಲಿ ಪಾಲ್ಗೊಂಡಿದೆಯಂತೆ. ಸರ್ಕಾರದ ಮಾರ್ಗಸೂಚಿ ಅನ್ವಯ ಚಿತ್ರೀಕರಣ ನಡೆಸಲಾಗುತ್ತಿದೆ. ಚಿತ್ರಮಂದಿರಗಳು ಯಾವಾಗ ಶುರುವಾಗುತ್ತವೆ ಎಂಬುದು ಖಾತ್ರಿ ಇಲ್ಲ. ಹಾಗಾಗಿ, ಒಟಿಟಿಯಲ್ಲಿ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ’ ಎಂದು ಹೇಳಿದ್ದಾರೆ.
Join our WhatsApp group for latest news updates
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am