ಬ್ರೇಕಿಂಗ್ ನ್ಯೂಸ್
04-02-22 02:55 pm Source: Vijayakarnataka ಸಿನಿಮಾ
ಬೆಂಗಳೂರು, ಫೆ.4: ಹರೀಶ್ ಬಸವರಾಜ್, ಕೋವಿಡ್ನ ಎರಡನೇ ಅಲೆಯ ಸಮಯದಲ್ಲಿ ಎಲ್ಲಿ ನೋಡಿದರೂ ಆಂಬ್ಯುಲೆನ್ಸ್ ಸೈರನ್ ಸದ್ದು. ಹಲವರ ನಿಧನದ ಸುದ್ದಿ, ಶವಸಂಸ್ಕಾರಕ್ಕೂ ಸ್ಥಳವಿಲ್ಲಎಂಬ ಮಾತುಗಳೇ ಕೇಳಿಬರುತ್ತಿದ್ದವು. ಇದೇ ವಿಚಾರವನ್ನು ಇಟ್ಟುಕೊಂಡು ನಟ ನೀನಾಸಂ ಸತೀಶ್ ಹಾಡೊಂದನ್ನು ಬರೆದು, ವಿಡಿಯೋ ಆಲ್ಬಂ ಮಾಡಿ ಅದಕ್ಕೆ 'ಅಶರೀರವಾಣಿ' ಎಂದು ಹೆಸರಿಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಸತೀಶ್ ಹಾಡನ್ನು ಬರೆದಿದ್ದು, ಅವರೇ ಸ್ವತಃ ಸಂಗೀತವನ್ನೂ ಸಂಯೋಜನೆ ಮಾಡಿದ್ದಾರೆ. ಸತೀಶ್ ಅವರ ಪುತ್ರಿ ಮನಸ್ವಿತಾ ಈ ಹಾಡಿನಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಬಂದಿರುವುದು ಈ ಹಾಡಿನ ವಿಶೇಷತೆ.
ಕೆಲ ದಿನಗಳ ಹಿಂದೆಯಷ್ಟೇ ಸತೀಶ್ ತಮ್ಮ ಪುತ್ರಿಯ ಫೋಟೊವನ್ನು ರಿವೀಲ್ ಮಾಡಿದ್ದರು. ಈಗ ವಿಡಿಯೋ ಆಲ್ಬಂನಲ್ಲಿ ಮನಸ್ವಿತಾರನ್ನು ನಟಿಸುವಂತೆ ಮಾಡಿ ಅವರ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. 'ಬೆಂಗಳೂರಿನ ಆರ್ಆರ್ ನಗರದಲ್ಲಿರುವ ನನ್ನ ಕಚೇರಿಗೆ ಬಿಜಿಎಸ್ ಆಸ್ಪತ್ರೆ, ಕೆಲ ನರ್ಸಿಂಗ್ ಹೋಂಗಳು ಹತ್ತಿರದಲ್ಲೇ ಇವೆ. ಕೋವಿಡ್ನ ಎರಡನೇ ಅಲೆಯ ಸಮಯದಲ್ಲಿ ದಿನವೊಂದಕ್ಕೆ ಹತ್ತಾರು ಬಾರಿ ಆಂಬ್ಯುಲೆನ್ಸ್ ಸೈರನ್ ಶಬ್ದವನ್ನು ಕೇಳುತ್ತಿದ್ದೆ. ಅದರಲ್ಲಿ ಬದುಕಿದವರೆಷ್ಟೋ, ಮೃತಪಟ್ಟವರೆಷ್ಟೊ ಗೊತ್ತಿಲ್ಲ. ಬಹಳ ಆತ್ಮೀಯರು ಸಹ ಕೋವಿಡ್ನ ಎರಡನೇ ಅಲೆಯಲ್ಲಿ ಮೃತಪಟ್ಟರು. ಆ ಸಮಯದಲ್ಲಿ ನನಗೆ 'ಈ ಅಶರೀರವಾಣಿ ಎಲ್ಲಿಂದ ಎಲ್ಲಿಗೆ ಹಾರಿತು' ಎಂಬ ಹಾಡು ಹುಟ್ಟಿಕೊಂಡಿತು. ಪ್ರಪಂಚದ ಈ ಪರಿಸ್ಥಿತಿಗೆ ಕಾರಣರಾರು ಎಂಬ ಪ್ರಶ್ನೆ, ಮನುಷ್ಯನ ಸ್ವಾರ್ಥಕ್ಕೆ ಭೂಮಿ ಎಂಬುದು ಸ್ಮಶಾನದ ರೀತಿಯಾಯಿತಲ್ಲಾ ಎಂಬ ಖೇದ-ಇವನ್ನೆಲ್ಲಾಇಟ್ಟುಕೊಂಡು ಈ ಹಾಡು ಬರೆದು, ಸಂಗೀತ ಸಂಯೋಜನೆ ಮಾಡಿ ನಿರ್ದೇಶನ ಮಾಡಿದೆ. ನನ್ನ ಸ್ನೇಹಿತರಾದ ರಘು ಕಾರ್ನಾಡ್ ಮತ್ತಿತರರು ಸಹಾಯ ಮಾಡಿದರು' ಎಂದು ಹೇಳುತ್ತಾರೆ ಸತೀಶ್.
ಇದು ನನಗೆ ವಿಭಿನ್ನ ಅನುಭವ
'ನನ್ನ ಮಗಳನ್ನು ನಿರ್ದೇಶನ ಮಾಡಿದ್ದು ಬೇರೆ ರೀತಿಯ ಅನುಭವ ನೀಡಿತು. ಮನಸ್ವಿತಾಗೆ ನಟನೆ, ಡಾನ್ಸ್ ಸೇರಿದಂತೆ ಹಲವು ವಿಷಯಗಳಲ್ಲಿ ತುಂಬಾ ಆಸಕ್ತಿ. ಕ್ಯಾಮೆರಾಗೆ ತಕ್ಕಂತೆ ನಟನೆ ಮಾಡಿದಳು. ಮತ್ತೆ ಈ ಶಾಟ್ ಬೇಕು ಅಂದ್ರೂ ಮಾಡಿದಳು. ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಕರೆದುಕೊಂಡು ಹೋದಾಗ ನನಗೆ ಆದ ಖುಷಿ ಅಷ್ಟಿಷ್ಟಲ್ಲ. ಬಹಳ ಚೆನ್ನಾಗಿ ನಟಿಸಿದ್ದಾಳೆ' ಎಂದು ಪುತ್ರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಸತೀಶ್. ಈ ಹಾಡು ಸದ್ಯದಲ್ಲೇ ಆನ್ಲೈನ್ನಲ್ಲಿ ಬಿಡುಗಡೆಯಾಗಲಿದ್ದು, ಬೆಂಗಳೂರಿನಲ್ಲಿಯೇ ಚಿತ್ರೀಕರಣ ಮಾಡಲಾಗಿದೆ.
Actor Sathish Ninasams Daughter Manaswitha Debut To Sandalwood With Music Video.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm