ಬ್ರೇಕಿಂಗ್ ನ್ಯೂಸ್
04-02-22 02:55 pm Source: Vijayakarnataka ಸಿನಿಮಾ
ಬೆಂಗಳೂರು, ಫೆ.4: ಹರೀಶ್ ಬಸವರಾಜ್, ಕೋವಿಡ್ನ ಎರಡನೇ ಅಲೆಯ ಸಮಯದಲ್ಲಿ ಎಲ್ಲಿ ನೋಡಿದರೂ ಆಂಬ್ಯುಲೆನ್ಸ್ ಸೈರನ್ ಸದ್ದು. ಹಲವರ ನಿಧನದ ಸುದ್ದಿ, ಶವಸಂಸ್ಕಾರಕ್ಕೂ ಸ್ಥಳವಿಲ್ಲಎಂಬ ಮಾತುಗಳೇ ಕೇಳಿಬರುತ್ತಿದ್ದವು. ಇದೇ ವಿಚಾರವನ್ನು ಇಟ್ಟುಕೊಂಡು ನಟ ನೀನಾಸಂ ಸತೀಶ್ ಹಾಡೊಂದನ್ನು ಬರೆದು, ವಿಡಿಯೋ ಆಲ್ಬಂ ಮಾಡಿ ಅದಕ್ಕೆ 'ಅಶರೀರವಾಣಿ' ಎಂದು ಹೆಸರಿಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಸತೀಶ್ ಹಾಡನ್ನು ಬರೆದಿದ್ದು, ಅವರೇ ಸ್ವತಃ ಸಂಗೀತವನ್ನೂ ಸಂಯೋಜನೆ ಮಾಡಿದ್ದಾರೆ. ಸತೀಶ್ ಅವರ ಪುತ್ರಿ ಮನಸ್ವಿತಾ ಈ ಹಾಡಿನಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಬಂದಿರುವುದು ಈ ಹಾಡಿನ ವಿಶೇಷತೆ.
ಕೆಲ ದಿನಗಳ ಹಿಂದೆಯಷ್ಟೇ ಸತೀಶ್ ತಮ್ಮ ಪುತ್ರಿಯ ಫೋಟೊವನ್ನು ರಿವೀಲ್ ಮಾಡಿದ್ದರು. ಈಗ ವಿಡಿಯೋ ಆಲ್ಬಂನಲ್ಲಿ ಮನಸ್ವಿತಾರನ್ನು ನಟಿಸುವಂತೆ ಮಾಡಿ ಅವರ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. 'ಬೆಂಗಳೂರಿನ ಆರ್ಆರ್ ನಗರದಲ್ಲಿರುವ ನನ್ನ ಕಚೇರಿಗೆ ಬಿಜಿಎಸ್ ಆಸ್ಪತ್ರೆ, ಕೆಲ ನರ್ಸಿಂಗ್ ಹೋಂಗಳು ಹತ್ತಿರದಲ್ಲೇ ಇವೆ. ಕೋವಿಡ್ನ ಎರಡನೇ ಅಲೆಯ ಸಮಯದಲ್ಲಿ ದಿನವೊಂದಕ್ಕೆ ಹತ್ತಾರು ಬಾರಿ ಆಂಬ್ಯುಲೆನ್ಸ್ ಸೈರನ್ ಶಬ್ದವನ್ನು ಕೇಳುತ್ತಿದ್ದೆ. ಅದರಲ್ಲಿ ಬದುಕಿದವರೆಷ್ಟೋ, ಮೃತಪಟ್ಟವರೆಷ್ಟೊ ಗೊತ್ತಿಲ್ಲ. ಬಹಳ ಆತ್ಮೀಯರು ಸಹ ಕೋವಿಡ್ನ ಎರಡನೇ ಅಲೆಯಲ್ಲಿ ಮೃತಪಟ್ಟರು. ಆ ಸಮಯದಲ್ಲಿ ನನಗೆ 'ಈ ಅಶರೀರವಾಣಿ ಎಲ್ಲಿಂದ ಎಲ್ಲಿಗೆ ಹಾರಿತು' ಎಂಬ ಹಾಡು ಹುಟ್ಟಿಕೊಂಡಿತು. ಪ್ರಪಂಚದ ಈ ಪರಿಸ್ಥಿತಿಗೆ ಕಾರಣರಾರು ಎಂಬ ಪ್ರಶ್ನೆ, ಮನುಷ್ಯನ ಸ್ವಾರ್ಥಕ್ಕೆ ಭೂಮಿ ಎಂಬುದು ಸ್ಮಶಾನದ ರೀತಿಯಾಯಿತಲ್ಲಾ ಎಂಬ ಖೇದ-ಇವನ್ನೆಲ್ಲಾಇಟ್ಟುಕೊಂಡು ಈ ಹಾಡು ಬರೆದು, ಸಂಗೀತ ಸಂಯೋಜನೆ ಮಾಡಿ ನಿರ್ದೇಶನ ಮಾಡಿದೆ. ನನ್ನ ಸ್ನೇಹಿತರಾದ ರಘು ಕಾರ್ನಾಡ್ ಮತ್ತಿತರರು ಸಹಾಯ ಮಾಡಿದರು' ಎಂದು ಹೇಳುತ್ತಾರೆ ಸತೀಶ್.
ಇದು ನನಗೆ ವಿಭಿನ್ನ ಅನುಭವ
'ನನ್ನ ಮಗಳನ್ನು ನಿರ್ದೇಶನ ಮಾಡಿದ್ದು ಬೇರೆ ರೀತಿಯ ಅನುಭವ ನೀಡಿತು. ಮನಸ್ವಿತಾಗೆ ನಟನೆ, ಡಾನ್ಸ್ ಸೇರಿದಂತೆ ಹಲವು ವಿಷಯಗಳಲ್ಲಿ ತುಂಬಾ ಆಸಕ್ತಿ. ಕ್ಯಾಮೆರಾಗೆ ತಕ್ಕಂತೆ ನಟನೆ ಮಾಡಿದಳು. ಮತ್ತೆ ಈ ಶಾಟ್ ಬೇಕು ಅಂದ್ರೂ ಮಾಡಿದಳು. ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಕರೆದುಕೊಂಡು ಹೋದಾಗ ನನಗೆ ಆದ ಖುಷಿ ಅಷ್ಟಿಷ್ಟಲ್ಲ. ಬಹಳ ಚೆನ್ನಾಗಿ ನಟಿಸಿದ್ದಾಳೆ' ಎಂದು ಪುತ್ರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಸತೀಶ್. ಈ ಹಾಡು ಸದ್ಯದಲ್ಲೇ ಆನ್ಲೈನ್ನಲ್ಲಿ ಬಿಡುಗಡೆಯಾಗಲಿದ್ದು, ಬೆಂಗಳೂರಿನಲ್ಲಿಯೇ ಚಿತ್ರೀಕರಣ ಮಾಡಲಾಗಿದೆ.
Actor Sathish Ninasams Daughter Manaswitha Debut To Sandalwood With Music Video.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm