ಬ್ರೇಕಿಂಗ್ ನ್ಯೂಸ್
22-09-20 04:57 pm Headline Karnataka News Network ಸಿನಿಮಾ
ಮುಂಬೈ, ಸೆಪ್ಟಂಬರ್ 22: ಬಾಲಿವುಡ್ ಡ್ರಗ್ ನಂಟು ಈಗ ಖ್ಯಾತ ನಟಿ ದೀಪಿಕಾ ಪಡುಕೋಣೆ ಕೊರಳು ಸುತ್ತಿಕೊಂಡಿದೆ. ದೀಪಿಕಾ ತನ್ನ ಮ್ಯಾನೇಜರ್ ಜೊತೆ ವಾಟ್ಸಪ್ ಸಂಭಾಷಣೆ ನಡೆಸಿದ್ದ ಪ್ರತಿಗಳು ರಿವೀಲ್ ಆಗಿದ್ದು, ಅದರಲ್ಲಿ ದೀಪಿಕಾ ಡ್ರಗ್ಸ್ ಕೇಳುವ ಸಂಭಾಷಣೆ ಈಗ ವೈರಲ್ ಆಗಿದೆ. ಹೀಗಾಗಿ ಮುಂಬೈನ ಎನ್ ಸಿ ಬಿ ಅಧಿಕಾರಿಗಳು ಇವತ್ತು ಅಥವಾ ನಾಳೆ ದೀಪಿಕಾಗೆ ಸಮನ್ಸ್ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈಗಾಗ್ಲೇ ನಟಿ ದೀಪಿಕಾ, ಮ್ಯಾನೇಜರ್ ಆಗಿದ್ದ ಕರಿಷ್ಮಾ ಪ್ರಕಾಶ್ ಳನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಾಟ್ಸಪ್ ಸಂದೇಶದಲ್ಲಿ ಇವರಿಬ್ಬರ ಸಂಭಾಷಣೆ ಹೀಗಿದೆ.
ದೀಪಿಕಾ – ‘ಮಾಲ್’ ಇದೆಯಾ ?
ಕರಿಷ್ಮಾ – ಇದೆ, ನನ್ನ ಮನೇಲಿದೆ, ಈಗ ನಾನು ಬಾಂದ್ರಾದಲ್ಲಿದ್ದೇನೆ…
ಕರಿಷ್ಮಾ – ನಿಮ್ಗೆ ಬೇಕಿದ್ದರೆ ಅಮಿತ್ ಬಳಿ ತಂದುಕೊಡಲು ಹೇಳ್ತೀನಿ...
ದೀಪಿಕಾ – ಯಸ್ ಪ್ಲೀಸ್...
ಕರಿಷ್ಮಾ – ಅಮಿತ್ ಬಳಿಯಿದೆ, ಅವನು ತಂದುಕೊಡುತ್ತಾನೆ...’’
ಹೀಗೆ ಮುಂದುವರಿಯುತ್ತದೆ ಈ ಸಂಭಾಷಣೆ. ವಾಟ್ಸಪ್ ನಲ್ಲಿ ಹೀಗೆ ಸಂಭಾಷಣೆ ನಡೆಸಿದ್ದು, ದೀಪಿಕಾ ಡ್ರಗ್ಸ್ ನಂಟು ಹೊಂದಿದ್ದಳೆಂಬುದಕ್ಕೆ ಪುರಾವೆ ಎನ್ನಲಾಗುತ್ತಿದೆ.
KWAN ಎನ್ನುವ ಹೆಸರಿನ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪೆನಿಯಲ್ಲಿ ಕರಿಷ್ಮಾ ಪ್ರಕಾಶ್ ಕೆಲಸ ಮಾಡುತ್ತಾಳೆ. ಇದೇ ಸಂಸ್ಥೆ ದೀಪಿಕಾ ಪಡುಕೋಣೆಯ ಚಲನಚಿತ್ರ ಮತ್ತಿತರ ಕಾರ್ಯಕ್ರಮಗಳ ಉಸ್ತುವಾರಿ ನೋಡಿಕೊಳ್ಳುತ್ತದೆ. ತಂಡದ ಮ್ಯಾನೇಜರ್ ಆಗಿರುವ ಜಯಾ ಸಹಾನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆಕೆಯೇ ಡ್ರಗ್ ವಹಿವಾಟಿನ ಕಿಂಗ್ ಪಿನ್ ಎಂದು ರಿಪಬ್ಲಿಕ್ ಟಿವಿ ವರದಿ ಮಾಡಿದೆ. ಈಗ ಜಯಾ ಸಹಾ ಮತ್ತು ಕರಿಷ್ಮಾ ಮೊಬೈಲಿನಲ್ಲಿದ್ದ ವಾಟ್ಸಪ್ ಸಂದೇಶಗಳು ಪೊಲೀಸರಿಗೆ ಲಭಿಸಿದ್ದು, ಅವರ ಜೊತೆ ಸಂಪರ್ಕ ಇದ್ದವರನ್ನು ಜಾಲಾಡ ತೊಡಗಿದ್ದಾರೆ. ದೀಪಿಕಾ ಮತ್ತು ಕರಿಷ್ಮಾ ನಡುವೆ 2017ರ ಅಕ್ಟೋಬರ್ 28ರಂದು ಈ ಸಂಭಾಷಣೆ ನಡೆದಿತ್ತು ಎನ್ನುತ್ತವೆ ವರದಿಗಳು.
ಜಯಾ ಸಹಾ ನೀಡಿರುವ ಮಾಹಿತಿ ಆಧರಿಸಿ ಮ್ಯಾನೇಜ್ಮೆಂಟ್ ಕಂಪನಿಯ ಸಿಇಓ ಧ್ರುವ್ ಚಿಟ್ಗೋಪ್ಕರ್ ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದೇ ವೇಳೆ, ಸಹಾ ಜೊತೆಗೆ ನಂಟು ಹೊಂದಿದ್ದ ಚಿತ್ರ ನಿರ್ಮಾಪಕ ಮಧು ಮಂತೇನಾಗೆ ಬುಧವಾರ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಿದ್ದಾರೆ. ಹೆಸರಾಂತ ಚಿತ್ರಗಳಾದ ಘಜ್ನಿ, ಕ್ವೀನ್, ಸೂಪರ್ 30 ಚಿತ್ರ ನಿರ್ಮಾಣ ಮಾಡಿದ್ದ ಮಧು ಮಂತೇನಾ, ಕ್ವಾನ್ ಕಂಪೆನಿಯಲ್ಲಿ ಪಾಲುದಾರಿಕೆ ಹೊಂದಿದ್ದಾರೆ.
ಇದಲ್ಲದೆ, ನಟಿಯರಾದ ಸಾರಾ, ರಕುಲ್ ಪ್ರೀತ್ ಸಿಂಗ್, ಶ್ರದ್ಧಾ ಕಪೂರ್, ಫ್ಯಾಷನ್ ಡಿಸೈನರ್ ಸಿಮೋನ್ ಕಂಭಟ್ಟರಿಗೂ ಎನ್ ಸಿಬಿ ನೋಟೀಸ್ ನೀಡಿ, ವಿಚಾರಣೆಗೆ ಕರೆಯಲಿದೆ ಎನ್ನಲಾಗುತ್ತಿದೆ. ಸುಶಾಂತ್ ಸಾವಿನ ಪ್ರಕರಣದಲ್ಲಿ ಡ್ರಗ್ ನಂಟು ಕೇಳಿ ಬಂದಿದ್ದರಿಂದ ಈಗಾಗ್ಲೇ ರಿಯಾ ಚಕ್ರಬರ್ತಿ ಮತ್ತು ಆಕೆಯ ಸೋದರ ಶೋವಿಕ್ ಸೇರಿದಂತೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ, ರಿಯಾ ಮತ್ತು ಶೋವಿಕ್ ಅವರನ್ನು ಅಕ್ಟೋಬರ್ 6ರ ವರೆಗೆ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm