ಬ್ರೇಕಿಂಗ್ ನ್ಯೂಸ್
05-04-22 02:04 pm Source: Vijayakarnataka ಸಿನಿಮಾ
'ದಳಪತಿ' ವಿಜಯ್ ಮತ್ತು ಪೂಜಾ ಹೆಗ್ಡೆ ಅಭಿನಯದ 'ಬೀಸ್ಟ್' ಸಿನಿಮಾ ಏಪ್ರಿಲ್ 13ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ಒಂದು ವರ್ಷದ ನಂತರ ವಿಜಯ್ ಸಿನಿಮಾವೊಂದು ತೆರೆಗೆ ಬರುತ್ತಿರುವುದರಿಂದ ಫ್ಯಾನ್ಸ್ ಕುತೂಹಲದಿಂದ ಕಾಯುತ್ತಿದ್ದಾರೆ. ಈಚೆಗಷ್ಟೇ ರಿಲೀಸ್ ಆಗಿರುವ ಸಿನಿಮಾದ ಟ್ರೇಲರ್ ಎಲ್ಲರ ಗಮನಸೆಳೆಯುತ್ತಿದೆ. ತಮಿಳು ಜೊತೆಗೆ ಹಿಂದಿ, ತೆಲುಗು, ಕನ್ನಡದಲ್ಲೂ ಈ ಸಿನಿಮಾ ರಿಲೀಸ್ ಆಗಲಿದೆ. ಈ ಮಧ್ಯೆ ಒಂದು ಬ್ಯಾಡ್ ನ್ಯೂಸ್ ವಿಜಯ್ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ. ಅದೇನೆಂದರೆ, ಈ ಬಹುನಿರೀಕ್ಷಿತ 'ಬೀಸ್ಟ್' ಸಿನಿಮಾವನ್ನು ಕುವೈತ್ನಲ್ಲಿ ನೋಡುವಂತಿಲ್ಲ. ಅಲ್ಲಿ ಪ್ರದರ್ಶನ ಮಾಡದಂತೆ ಸಿನಿಮಾವನ್ನು ಬ್ಯಾನ್ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ! ಇದು ಸಿನಿಮಾ ತಂಡಕ್ಕೆ ದೊಡ್ಡ ಶಾಕ್ ನೀಡಿದೆ. ಅಷ್ಟಕ್ಕೂ ಇಂಥದ್ದೊಂದು ಖಡಕ್ ನಿರ್ಧಾರಕ್ಕೆ ಕಾರಣವೇನು?
ಮುಸ್ಲಿಮರನ್ನು ಟೆರರಿಸ್ಟ್ ರೀತಿ ತೋರಿಸುವ ಹಾಗಿಲ್ಲ!

ಕುವೈತ್ ಸರ್ಕಾರ ಒಂದು ನಿಯಮ ರೂಪಿಸಿದೆ. ಅದೇನೆಂದರೆ, ಸಿನಿಮಾಗಳಲ್ಲಿ ಮುಸ್ಲಿಮರನ್ನು ಭಯೋತ್ಪಾದಕರಂತೆ ತೋರಿಸುವ ಹಾಗಿಲ್ಲ. ಹಾಗೇ ತೋರಿಸಿದರೆ, ಅಂಥ ಸಿನಿಮಾಗಳನ್ನು ಕುವೈತ್ನಲ್ಲಿ ಪ್ರದರ್ಶನ ಮಾಡುವುದಕ್ಕೆ ಅನುಮತಿ ನೀಡುವುದಿಲ್ಲ. ಇದೀಗ ಆ ನಿಯಮ 'ಬೀಸ್ಟ್'ಗೂ ಅನ್ವಯಿಸಲಿದೆ. ಅಷ್ಟಕ್ಕೂ ಸಿನಿಮಾದಲ್ಲಿ ಏನಿದೆ? ಚೆನ್ನೈನ ಪ್ರಸಿದ್ಧ ಮಾಲ್ ಮೇಲೆ ಟೆರರಿಸ್ಟ್ಗಳು ದಾಳಿ ಮಾಡಿ, ಮಾಲ್ನಲ್ಲಿ ಇರುವವರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಳ್ಳುತ್ತಾರೆ. ಸಿನಿಮಾದಲ್ಲಿ ಸಾಕಷ್ಟು ಭಯೋತ್ಪಾದಕರ ಜೊತೆಗೆ ಹೀರೋ ಹೋರಾಡುತ್ತಾನೆ. ಅಲ್ಲದೆ, ಹಾಗೆ ಸಿನಿಮಾದಲ್ಲಿ ಬರುವ ಟೆರರಿಸ್ಟ್ ಪಾತ್ರಗಳು ಮುಸ್ಲಿಮರನ್ನು ಹೋಲುತ್ತವೆ. ಆ ಕಾರಣಕ್ಕಾಗಿ ಕುವೈತ್ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಇದೇ ಮೊದಲ ಬಾರಿ ಏನಲ್ಲ!

ಈ ರೀತಿ ಭಾರತದ ಸಿನಿಮಾಗಳನ್ನು ಕುವೈತ್ ಸರ್ಕಾರ ಬ್ಯಾನ್ ಮಾಡಿರುವುದು ಇದೇ ಮೊದಲ ಬಾರಿ ಏನಲ್ಲ. ಈಚೆಗೆ ತೆರೆಕಂಡ ಮಲಯಾಳಂ ಕುರುಪ್ ಮತ್ತು ತಮಿಳಿನ ಎಫ್ಐಆರ್ ಸಿನಿಮಾಗಳನ್ನು ಕೂಡ ಕುವೈತ್ ಸರ್ಕಾರ ಬ್ಯಾನ್ ಮಾಡಿತ್ತು. ಅದಕ್ಕೂ ಕೂಡ ಇದೇ ಅಂಶವೇ ಕಾರಣವಾಗಿತ್ತು. ಈ ಸಿನಿಮಾಗಳಲ್ಲಿ ಮುಸ್ಲಿಮರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದು ಕುವೈತ್ ಸರ್ಕಾರದ ನೀತಿಗೆ ವಿರುದ್ಧವಾಗಿತ್ತು. ಇದೀಗ ವಿಜಯ್ ಅವರ 'ಬೀಸ್ಟ್' ರಿಲೀಸ್ಗೆ ತಡೆಯೊಡ್ಡಿರುವುದು ಅಲ್ಲಿರುವ ದಳಪತಿ ಫ್ಯಾನ್ಸ್ಗೆ ಬೇಸರ ಉಂಟು ಮಾಡಿದೆ. ಅವರೀಗ ಸಿನಿಮಾ ವೀಕ್ಷಿಸಲು ಬೇರೆಡೆಗೆ ಹೋಗಬೇಕಿದೆ.
Kuwait Government Bans Thalapathy Vijay Pooja Hegdes Beast Movie.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm