ಬ್ರೇಕಿಂಗ್ ನ್ಯೂಸ್
12-04-22 01:52 pm Source: Vijayakarnataka ಸಿನಿಮಾ
ತಾರಾಜೋಡಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮದುವೆ ಕುರಿತಾದ ಸುದ್ದಿಗಳು ಈಗ ಸೋಷಿಯಲ್ ಮೀಡಿಯಾದಲ್ಲಿ‘ರಲಿಯಾ’ ಎಂಬ ಹ್ಯಾಷ್ಟ್ಯಾಗ್ನಲ್ಲಿ ಟಾಪ್ ಟ್ರೆಂಡಿಂಗ್ನಲ್ಲಿದೆ. ರಣಬೀರ್ ಮತ್ತು ಆಲಿಯಾ ಹೆಸರಿನ ಮೊದಲಾಕ್ಷರವನ್ನು ಜೋಡಿಸಿರುವ ರಲಿಯಾ ಎಂಬ ಪದದಲ್ಲಿ ಅವರ ಮದುವೆ ವಿವರಗಳನ್ನು ಜನರು ಪೋಸ್ಟ್ ಮಾಡುತ್ತಿದ್ದಾರೆ.
ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮದುವೆಯು ನಟನ ತಂದೆ, ಹಿರಿಯ ನಟ ರಿಷಿ ಕಪೂರ್ ( Rishi Kapoor ) ಮತ್ತು ತಾಯಿ, ಹಿರಿಯ ನಟಿ ನೀತೂ ಸಿಂಗ್ ಮದುವೆಯಾಗಿದ್ದ ಮುಂಬಯಿಯ ಆರ್ಕೆ ಹೌಸ್ನಲ್ಲಿ ಮುಂದಿನ ವಾರ ನಡೆಯಲಿದೆ. ಕಪೂರ್ ಕುಟುಂಬದ ಪೂರ್ವಜರ ಮನೆಯಾಗಿರುವ ಈ ತಾಣ ಏಪ್ರಿಲ್ 14ರಂದು ‘ರಲಿಯಾ’ (ರಣಬೀರ್ ಕಪೂರ್, ಆಲಿಯಾ ಭಟ್ ) ಮದುವೆಗೆ ಸಾಕ್ಷಿಯಾಗಲಿದೆ. ಆದರೆ ಈಗ ಮದುವೆಯ ದಿನಾಂಕ ಬದಲಾವಣೆಯಾಗಲಿದೆ ಎಂದು ಹೇಳಲಾಗುತ್ತಿದೆ. ಸೆಕ್ಯುರಿಟಿ ಕಾರಣಕ್ಕೆ ಮದುವೆ ದಿನಾಂಕ ಬದಲಾಯಿಸಲಾಗುತ್ತದೆ ಎಂದು ಹೇಳಲಾಗಿದೆ. ಆದರೆ ಆದಷ್ಟು ಬೇಗ ಡೇಟ್ ಘೋಷಣೆ ಮಾಡಲಿದ್ದಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ.ರಣಬೀರ್ ಕಪೂರ್ ತಾಯಿ ನೀತು ಕಪೂರ್ ಮಾತನಾಡಿ, "ಯಾವಾಗ ಮದುವೆ ಆಗತ್ತೆ ಅಂತ ಗೊತ್ತಿಲ್ಲ, ಆದಷ್ಟು ಬೇಗ ಮದುವೆ ಆಗಲಿ" ಎಂದಿದ್ದಾರೆ.

ಮದುವೆಯ ಸಿದ್ಧತೆಗಳು ಆರಂಭಗೊಂಡಿದ್ದು, ಮದುವೆ ದಿನ ಆಲಿಯಾ ಭಟ್ ( Alia Bhatt ), ಫ್ಯಾಷನ್ ಡಿಸೈನರ್ ಸವ್ಯಸಾಚಿ ಮುಖರ್ಜಿ ವಿನ್ಯಾಸಗೊಳಿಸಿದ ಡಿಸೈನರ್ ಲೆಹೆಂಗಾದಲ್ಲಿ ಮಿಂಚಲಿದ್ದಾರೆ. ಸಂಗೀತ್ ಮತ್ತು ಮೆಹೆಂದಿ ಕಾರ್ಯಕ್ರಮಗಳಿಗೆ ಅವರು ಮನೀಷ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ಡಿಸೈನರ್ ವೇರ್ಗಳಲ್ಲಿ ಕಂಗೊಳಿಸಲಿದ್ದಾರೆ.

ನಟ ರಣಬೀರ್ ಕಪೂರ್ ( Randir Kapoor ) ಬ್ಯಾಚುಲರ್ ಪಾರ್ಟಿಯ ಸಿದ್ಧತೆಯಲ್ಲಿದ್ದು, ಅದರಲ್ಲಿ ಅವರ ಆತ್ಮೀಯ ಗೆಳೆಯರಾದ ಅರ್ಜುನ್ ಕಪೂರ್, ಆದಿತ್ಯ ರಾಯ್ ಕಪೂರ್, ಅಯಾನ್ ಮುಖರ್ಜಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

‘ಬ್ರಹ್ಮಾಸ್ತ್ರ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿರುವ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಈ ಮೊದಲು ಈ ಸಿನಿಮಾ ಬಿಡುಗಡೆಯಾದ ಮೇಲೆ ಅಂದರೆ ಸೆಪ್ಟೆಂಬರ್ನಲ್ಲಿ ಮದುವೆಯಾಗುವುದಾಗಿ ಹೇಳಿಕೊಂಡಿದ್ದರು. ಆದರೆ ಆಲಿಯಾ ಭಟ್ ಅವರ ಅಜ್ಜ ಅಂದರೆ ತಾಯಿಯ ತಂದೆಯ ಆರೋಗ್ಯ ತೀರಾ ಹದಗೆಟ್ಟಿದ್ದು, ಅವರು ತಮ್ಮ ಮೊಮ್ಮಗಳ ಮದುವೆ ನೋಡುವ ಇಚ್ಛೆ ವ್ಯಕ್ತಪಡಿಸಿದ ಕಾರಣ ಮದುವೆ ಬೇಗ ನಡೆಯುತ್ತಿದೆಯಂತೆ. ಮದುವೆಯ ನಂತರ ರಣಬೀರ್ ಮತ್ತು ಆಲಿಯಾ ಸ್ವಿಟ್ಜರ್ಲೆಂಡ್ಗೆ ಹನಿಮೂನ್ ಹೋಗಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಆಲಿಯಾ ಭಟ್, ರಣವೀರ್ ಸಿಂಗ್ ಕೂಡ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸುತ್ತಿದ್ದಾರೆ.
Bollywood Actor Ranbir Kapoor Alia Bhatt Wedding Date Postponed.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm