ಬ್ರೇಕಿಂಗ್ ನ್ಯೂಸ್
20-04-22 02:22 pm Source: Vijayakarnataka ಸಿನಿಮಾ
ಲವಲವಿಕೆ ಸುದ್ದಿಲೋಕ
ಇತ್ತೀಚಿನ ಸೂಪರ್ ಹಿಟ್ ಸಿನಿಮಾಗಳಾದ ‘ಆರ್ಆರ್ಆರ್’ (RRR) ಮತ್ತು ‘ಕೆಜಿಎಫ್ ಚಾಪ್ಟರ್- 2’ (KGF Chapter 2) ಯಶಸ್ಸು, ಬಹುಭಾಷೆಯಲ್ಲಿ ತಯಾರಾಗುತ್ತಿರುವ ಕೆಲ ಸಿನಿಮಾಗಳ ಜವಾಬ್ದಾರಿ ಹೆಚ್ಚಿಸಿದೆ. ಇದಕ್ಕೆ ಪೂರಕವಾಗಿ ಹಲವು ತಂಡಗಳು ಸಿದ್ಧತೆ ಮಾಡಿಕೊಳ್ಳಲಾರಂಭಿಸಿವೆ. ನಿರ್ದೇಶಕ ಆರ್. ಚಂದ್ರು ಸಹ ತಮ್ಮ‘ಕಬ್ಜ’ (Kabza Movie) ಸಿನಿಮಾವನ್ನು ಏಳು ಭಾಷೆಯಲ್ಲಿ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಇದರ ಮೇಕಿಂಗ್ನಲ್ಲಿ ಒಂದಷ್ಟು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
‘ಕಬ್ಜ’ ಸಿನಿಮಾವನ್ನು ದಸರಾ ಹಬ್ಬದ ಸಮಯದಲ್ಲಿ ಬಿಡುಗಡೆ ಮಾಡಲು ಚಂದ್ರು ಪ್ಲಾನ್ ಮಾಡಿಕೊಂಡಿದ್ದಾರೆ. ಇದರ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಲಿದ್ದು, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದೆ.
‘ಆರ್ಆರ್ಆರ್ ಮತ್ತು ಕೆಜಿಎಫ್ ಚಾಪ್ಟರ್- 2 ಸಿನಿಮಾಗಳ ಯಶಸ್ಸು ನಮ್ಮಂತಹ ಫಿಲಂ ಮೇಕರ್ಸ್ಗೆ ಕೊಂಚ ಒತ್ತಡ ಮತ್ತು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದೆ. ನಾನು ಬಜೆಟ್ ವಿಚಾರದಲ್ಲಿ ಮತ್ತು ಸಿನಿಮಾದ ಕ್ಯಾನ್ವಾಸ್ ವಿಚಾರದಲ್ಲಿ ಯಾವುದೇ ರೀತಿಯಲ್ಲಿಯೂ ಕಾಂಪ್ರಮೈಸ್ ಮಾಡಿಕೊಳ್ಳುವುದಿಲ್ಲ. ಸ್ಕ್ರಿಪ್ಟ್ ವಿಚಾರದಲ್ಲಿ ಮತ್ತೆ ಮತ್ತೆ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ಹೊಸ ಫೈಟ್ಗಳನ್ನು ಮತ್ತು ಸೀನ್ಗಳನ್ನು ಸಿನಿಮಾದಲ್ಲಿ ಪರಿಚಯಿಸುತ್ತಿದ್ದೇನೆ’ ಎನ್ನುತ್ತಾರೆ ಚಂದ್ರು.


‘ಈ ಚಿತ್ರದಲ್ಲಿಉಪೇಂದ್ರ ನಾಯಕರಾಗಿ ನಟಿಸುತ್ತಿದ್ದಾರೆ. ಅವರ ಜತೆ ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿದ್ದಾರೆ. ಇವರೆಲ್ಲರ ಜತೆಗೆ ಬಾಲಿವುಡ್ ನಟರಾದ ಡ್ಯಾನಿಶ್ ಅಖ್ತರ್ ಸೈಫಿ, ನವಾಬ್ ಶಾ, ಕಬೀರ್ ಸಿಂಗ್ ದುಹಾನ್, ದಕ್ಷಿಣ ಭಾರತದ ಖ್ಯಾತ ನಟ ಮುರಳಿಕೃಷ್ಣ ಹೀಗೆ ಹಲವರು ನಟಿಸುತ್ತಿದ್ದಾರೆ’ ಎನ್ನುವುದು ನಿರ್ದೇಶಕ ಚಂದ್ರು ಮಾತು.
![]()
‘ಈ ಚಿತ್ರದಲ್ಲಿ ಶ್ರೀಯಾ ಸರಣ್ ನಟಿಸುತ್ತಿದ್ದು, ಅವರ ಕಾಸ್ಟ್ಯೂಮ್ ಚಿತ್ರದ ಪ್ರಮುಖ ಹೈಲೈಟ್. 3.5 ಲಕ್ಷ ಮೌಲ್ಯದ ಸೀರೆ ಮತ್ತು 1 ಕೋಟಿ ರೂಪಾಯಿಯ ಡೈಮಂಡ್ ಆಭರಣಗಳನ್ನು ಸಿನಿಮಾದಲ್ಲಿ ಅವರಿಗೆ ಬಳಸಿದ್ದೇವೆ. ಈ ಚಿತ್ರವನ್ನು ಎಂಟಿಬಿ ನಾಗರಾಜ್ ಅರ್ಪಿಸುತ್ತಿದ್ದು, ನಾನು ನಿರ್ಮಾಣದ ಹೊಣೆ ಹೊತ್ತಿದ್ದೇನೆ’ ಎನ್ನುತ್ತಾರೆ ನಿರ್ದೇಶಕ ಆರ್.ಚಂದ್ರು.
'ನಾನು ಕಬ್ಜ ಸಿನಿಮಾ ವಿಚಾರದಲ್ಲಿ ಯಾವುದೇ ರೀತಿಯ ಕಾಂಪ್ರಮೈಸ್ ಆಗುತ್ತಿಲ್ಲ. ಇದಕ್ಕಾಗಿ ದೊಡ್ಡ ಮಟ್ಟದಲ್ಲಿ ತಯಾರಿ ನಡೆಸಿದ್ದೇನೆ' ಎಂದು ನಿರ್ದೇಶಕ ಆರ್.ಚಂದ್ರು ಹೇಳಿದ್ದಾರೆ.
ಪರಭಾಷೆ ನಟರು
ಟಾಲಿವುಡ್ನ ಎಲ್ಲಾ ಸ್ಟಾರ್ಗಳ ಸಿನಿಮಾಗಳಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುವ ಮುರಳಿ ಶರ್ಮ ಮತ್ತು ಅಲ್ಲಿನ ಖ್ಯಾತ ಸಂಭಾಷಣೆಕಾರ, ನಟ ಪೋಸಾನಿ ಕೃಷ್ಣ ಮುರಳಿ ಅವರೂ ಕೂಡ ‘ಕಬ್ಜ’ ಚಿತ್ರದಲ್ಲಿ ಪ್ರಧಾನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
Pan India Movie Kabza To Release In 7 Languages Says Director R Chandru.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm