ಬ್ರೇಕಿಂಗ್ ನ್ಯೂಸ್
23-06-22 09:25 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಸುತ್ತಮುತ್ತಲು ಸಿಗುವ ಎಷ್ಟೋ ಹಣ್ಣು, ತರಕಾರಿಗಳು ನಮ್ಮ ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಾಯಕವಾಗಿವೆ. ಅಂತಹ ಹಣ್ಣುಗಳಲ್ಲಿ ಅತ್ತಿ ಹಣ್ಣು ಕೂಡ ಒಂದು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಎತ್ತರದ ಅತ್ತಿ ಮರವನ್ನು ಕಾಣುತ್ತೇವೆ. ಇದರಲ್ಲಿ ಬಿಡುವ ಹಣ್ಣುಗಳು ಹಕ್ಕಿ, ಪಕ್ಷಿಗಳಿಗೆ ಮೃಷ್ಟಾನ್ನ ಭೋಜನದಂತೆ.
ಹಿಂದೂ ಸಂಪ್ರದಾಯದಲ್ಲಿ ಔದುಂಬರ ವೃಕ್ಷ ಎಂದೇ ಈ ಅತ್ತಿ ಮರಕ್ಕೆ ಕರೆಯುತ್ತಾರೆ. ಇದರ ವೈಜ್ಞಾನಿಕ ಹೆಸರು ಫೈಕಸ್ ರೆಸೆಮೊಸಾ (Ficus Racemosa) ಎಂದಾಗಿದೆ. ಈ ಮರದ ತೊಗಟೆಯು ಹಳದಿ ಬಣ್ಣದಿಂದ ಕೂಡಿದ್ದು, ಅಂಟಾದ ಹಾಲನ್ನು ಸ್ರವಿಸುತ್ತದೆ. ಈ ಮರದಲ್ಲಿ ಗುಂಡಾದ ಹಸಿರು ಕಾಯಿ ಬೆಳೆಯುತ್ತದೆ. ಹಣ್ಣಾದ ಮೇಲೆ ಕೆಂಪು ಬಣ್ಣಕ್ಕೆ ತಿರುಗಿ ಪಕ್ಷಿಗಳ ಕಣ್ಣುಕುಕ್ಕುತ್ತವೆ.
ಗೊಂಚಲಿನ ರೀತಿಯಲ್ಲಿ ಬಿಡುವ ಹಣ್ಣುಗಳಲ್ಲಿ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇಲ್ಲಿದೆ ನೋಡಿ ಅತ್ತಿ ಹಣ್ಣಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಉಪಯುಕ್ತ ಮಾಹಿತಿ.
ಹೊಟ್ಟೆ ನೋವಿನ ನಿವಾರಣೆಗೆ
![]()
ಅತ್ತಿ ಹಣ್ಣನ್ನು ಸೇವನೆ ಮಾಡಿದರೆ ಮುಟ್ಟಿನ ದಿನಗಳ ಹೊಟ್ಟೆ ನೋವು ಕಡಿಮೆಯಾಗುತ್ತದೆ. ಅಲ್ಲದೆ ಹೆಣ್ಣಮಕ್ಕಳಲ್ಲಿ ಸಾಮಾನ್ಯವಾಗಿ ಕಂಡುಬರುವ ಬಿಳಿ ಮುಟ್ಟಿಗೂ ಈ ಅತ್ತಿ ಹಣ್ಣು ಪರಿಹಾರವಾಗಿದೆ. ಅತ್ತಿ ಹಣ್ಣನ್ನು ತಂದು ಚೆನ್ನಾಗಿ ಸೋಸಿ, ಹುಳುಗಳಿಲ್ಲದಂತೆ ಶುಚಿಗೊಳಿಸಿ ಅದರ ರಸವನ್ನು ಮಾಡಿ ಅದಕ್ಕೆ ಕಲ್ಲು ಸಕ್ಕರೆ ಸೇರಿಸಿ ಸೇವನೆ ಮಾಡಿದರೆ ಬಿಳಿ ಮುಟ್ಟು ನಿಯಂತ್ರಣಕ್ಕೆ ಬರುತ್ತದೆ.
ಬಾಯಿಹುಣ್ಣಿನ ನಿವಾರಣೆ

ಅತ್ತಿ ಮರದ ತೊಗಟೆಯನ್ನು ತಂದು ನೀರಿನಲ್ಲಿ ಕುದಿಸಿ ಚಿಟಿಕೆ ಸಕ್ಕರೆ ಹಾಕಿಕೊಂಡು ಕುಡಿದರೆ ಬಾಯಿಹುಣ್ಣು ನಿವಾರಣೆಯಾಗುತ್ತದೆ. ಇದರಿಂದ ದೇಹವೂ ತಂಪಾಗುತ್ತದೆ.
ಅತ್ತಿಕಾಯಿಯನ್ನು ಒಣಗಿಸಿ ಪುಡಿ ಮಾಡಿ ಅದಕ್ಕೆ ಕಲ್ಲುಸಕ್ಕರೆ ಹಾಗೂ ನೀರನ್ನು ಸೇರಿಸಿ ಬಾಯಿ ಮುಕ್ಕಳಿಸಿದರೆ ಮುಟ್ಟಿನ ಸಮಯದಲ್ಲಿ ಆಗುವ ಅಧಿಕ ರಕ್ತಸ್ರಾವ ನಿಲ್ಲುತ್ತದೆ.
ಊತ ನಿವಾರಣೆಗೂ ಸಹಕಾರಿ
![]()
ಅತ್ತಿ ಹಣ್ಣಿನ ರಸವನ್ನು ಗೋದಿ ಹಿಟ್ಟಿನಲ್ಲಿ ಮಿಶ್ರಣ ಮಾಡಿ ಬಾವುಗಳಿರುವ ಜಾಗದಲ್ಲಿ ಲೇಪನೆ ಮಾಡಿದರೆ ನೋವಿನಿಂದ ಊದಿಕೊಂಡಿರುವ ದೇಹದ ಭಾಗ ಸರಿಯಾಗುತ್ತದೆ.
ಅದೇ ರೀತಿ ಉಗುರು ಸುತ್ತಾದರೆ ಅತ್ತಿ ಹಣ್ಣನ್ನು ಬಿಡಿಸಿ ಉಗುರಿಗೆ ಕಟ್ಟಿದರೆ ಕೆಟ್ಟ ರಕ್ತ ಹೊರಗಡೆ ಹೋಗಿ ನೋವು, ಉರಿ ಕಡಿಮೆಯಾಗುತ್ತದೆ.
ಕೆಂಪು ರಕ್ತ ಕಣಗಳನ್ನು ಹೆಚ್ಚಿಸುತ್ತದೆ

ಭಾರತವನ್ನು ಹೊರತುಪಡಿಸಿ, ಆಸ್ಟ್ರೇಲಿಯಾ, ಮಲೇಷ್ಯಾ ಮತ್ತು ಚೀನಾದ ಭಾಗಗಳಲ್ಲಿ ಈ ಅತ್ತಿ ಹಣ್ಣು ಬೆಳೆಯುತ್ತದೆ. ಇದರಲ್ಲಿರುವ ವಿಟಮಿನ್ ಬಿ 2 ಕೆಂಪು ರಕ್ತ ಕಣಗಳ ಉತ್ಪಾದನೆಗೆ ನೆರವಾಗುತ್ತದೆ. ಇದಲ್ಲದೆ, ದೇಹದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ತಲುಪಿಸಲು ಸಹಾಯ ಮಾಡುವ ಪ್ರತಿಕಾಯಗಳನ್ನು ತಯಾರಿಸಲು ಅತ್ತಿ ಹಣ್ಣು ಉಪಯುಕ್ತವಾಗಿದೆ.
ಮಧುಮೇಹ ನಿಯಂತ್ರಣ

ಅತ್ತಿ ಮರದ ತೊಗಟೆಯನ್ನು ಒಣಗಿಸಿ ನಯವಾದ ಪುಡಿ ಮಾಡಿಟ್ಟುಕೊಳ್ಳಿ. ಇದನ್ನು ಬಿಸಿ ನೀರಿಗೆ ಹಾಕಿ ಪ್ರತಿ ದಿನ ಎರಡು ಬಾರಿ ಕುಡಿಯುತ್ತಾ ಬಂದರೆ ಮಧುಮೇಹ ನಿಯಂತ್ರಣದಲ್ಲಿ ಇರುತ್ತದೆ.
ಮೂಗಿನಿಂದ ರಕ್ತಸ್ರಾವವಾಗುತ್ತಿದ್ದರೆ, ಅತ್ತಿಹಣ್ಣಿನ ರಸ ತೆಗೆದು ಸಕ್ಕರೆ ಸೇರಿಸಿ ಸೇವನೆ ಮಾಡಬೇಕು ಆಗ ದೇಹ ತಂಪಾಗಿ ರಕ್ತಸ್ರಾವದ ಸಮಸ್ಯೆ ನಿವಾರಣೆಯಾಗುತ್ತದೆ.
ಅಲ್ಲದೆ ದೇಹದಲ್ಲಿ ಕಬ್ಬಿಣಾಂಶವನ್ನು ಹೆಚ್ಚಿಸಲೂ ಕೂಡ ನೆರವಾಗುತ್ತದೆ. ಆದರೆ ನೆನಪಿಡಿ ಆದಷ್ಟು ತಾಜಾ ಅತ್ತಿ ಹಣ್ಣುಗಳು ಸಿಕ್ಕಿರೆ ತಿನ್ನಿ, ಜೊತೆಗೆ ಹಣ್ಣಿನಲ್ಲಿರುವ ಹುಳುಗಳ ಬಗ್ಗೆ ಎಚ್ಚರಿಕೆವಹಿಸಿ ಸೇವನೆ ಮಾಡಿ.
Health Benefits Of Cluster Fig Fruit.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am