ಬ್ರೇಕಿಂಗ್ ನ್ಯೂಸ್
15-07-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಉಪ್ಪಿಗಿಂತ ಬೇರೆ ರುಚಿಯಿಲ್ಲ ಎನ್ನುತ್ತಾರೆ. ಆದರೆ ಉಪ್ಪಿನ ಸೇವನೆಯು ಅಧಿಕವಾದರೆ ಅಕಾಲಿಕ ಸಾವನ್ನಪ್ಪಬೇಕಾಗುತ್ತದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಕೆಲವರು ತಾವು ಸೇವಿಸುವ ಆಹಾರದಲ್ಲಿ ಪ್ರತಿನಿತ್ಯ ಉಪ್ಪು ಅಧಿಕ ಹಾಕುತ್ತಾರೆ. ನೀವೂ ಕೂಡಾ ಅಧಿಕ ಪ್ರಮಾಣದಲ್ಲಿ ಉಪ್ಪಿನ ಆಹಾರ ಸೇವಿಸುತ್ತಿದ್ದೀರೆಂದಾದರೆ ತಕ್ಷಣ ನಿಮ್ಮ ಅಭ್ಯಾಸವನ್ನು ಬದಲಾಯಿಸಬೇಕು.
ಅಧಿಕ ಉಪ್ಪಿನ ಸೇವನೆಯಿಂದ ಸಾವು
ಉಪ್ಪಿನ ಅಧಿಕ ಸೇವನೆಯು ಸಾವಿಗೆ ಕಾರಣವಾಗುತ್ತದೆ. ತಮ್ಮ ಆಹಾರದಲ್ಲಿ ಯಾವಾಗಲೂ ಅಧಿಕ ಉಪ್ಪನ್ನು ಸೇರಿಸುವ ಜನರು ಕಡಿಮೆ ಉಪ್ಪನ್ನು ಸೇವಿಸುವ ಜನರಿಗೆ ಹೋಲಿಸಿದರೆ ಅಕಾಲಿಕವಾಗಿ ಸಾಯುವ ಅಪಾಯವು ಶೇಕಡಾ 28 ರಷ್ಟು ಹೆಚ್ಚಾಗುತ್ತದೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ.
40 ರಿಂದ 69 ವರ್ಷ ವಯಸ್ಸಿನವರು
ಯುರೋಪಿಯನ್ ಹಾರ್ಟ್ ಜರ್ನಲ್ನಲ್ಲಿ ಪ್ರಕಟವಾದ ಹೊಸ ಅಧ್ಯಯನದ ಪ್ರಕಾರ, ಸಾಮಾನ್ಯ ಜನಸಂಖ್ಯೆಯಲ್ಲಿ 40 ರಿಂದ 69 ವರ್ಷ ವಯಸ್ಸಿನ ಪ್ರತಿ ನೂರರಲ್ಲಿ ಮೂರು ಜನರು ಅಕಾಲಿಕವಾಗಿ ಸಾಯುತ್ತಾರೆ. ಅದರಲ್ಲಿ ಒಬ್ಬರು ಆಹಾರಕ್ಕೆ ಅಧಿಕ ಉಪ್ಪು ಸೇರಿಸುವುದರಿಂದ ಅಕಾಲಿಕವಾಗಿ ಸಾಯುತ್ತಾರೆ ಎಂದು ಕಂಡುಹಿಡಿದಿದೆ.
ಆಯಸ್ಸು ಕಡಿಮೆಯಾಗುತ್ತದೆ
ಊಟಕ್ಕೆ ಹೆಚ್ಚುವರಿ ಉಪ್ಪನ್ನು ಸೇರಿಸುವುದರಿಂದ 50 ವರ್ಷ ವಯಸ್ಸಿನ ಪುರುಷರು ಮತ್ತು ಮಹಿಳೆಯರಿಗೆ ಕ್ರಮವಾಗಿ ಎರಡು ವರ್ಷಗಳ ಮತ್ತು 1.5 ವರ್ಷಗಳ ಜೀವಿತಾವಧಿ ಕಡಿಮೆಯಾಗುತ್ತವೆ ಎಂದು ಸಂಶೋಧನೆಗಳು ಬಹಿರಂಗಪಡಿಸಿವೆ. ಹಾಗಾಗಿ ಜನರು ತಮ್ಮ ಆಹಾರದಲ್ಲಿ ಹೆಚ್ಚು ಮಸಾಲೆ ಹಾಕುವುದನ್ನು ತಪ್ಪಿಸಲು ಶಿಫಾರಾಸ್ಸು ಮಾಡಲಾಗುವುದು.
ಸೇವಿಸಬೇಕಾದ ಉಪ್ಪಿನ ಪ್ರಮಾಣ ಎಷ್ಟು?
ಹೆಚ್ಚಿನ ಜನರು ದಿನಕ್ಕೆ ಸರಾಸರಿ 9 ರಿಂದ 12 ಗ್ರಾಂ ಉಪ್ಪನ್ನು ಸೇವಿಸುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಇದು ಶಿಫಾರಸು ಮಾಡಲಾದ ಗರಿಷ್ಠ ಸೇವನೆಯ ಎರಡು ಪಟ್ಟು ಹೆಚ್ಚು.
ರಕ್ತದೊತ್ತಡದ ಮಟ್ಟಗಳು ಮತ್ತು ಪಾರ್ಶ್ವವಾಯು, ಪರಿಧಮನಿಯ ಹೃದಯಾಘಾತ ಸೇರಿದಂತೆ ಹೃದಯರಕ್ತನಾಳದ ಕಾಯಿಲೆಯ ಅಪಾಯಗಳನ್ನು ಕಡಿಮೆ ಮಾಡಲು ವಯಸ್ಕರು ದಿನಕ್ಕೆ 5 ಗ್ರಾಂಗಿಂತ ಕಡಿಮೆ ಉಪ್ಪನ್ನು ಸೇವಿಸಬೇಕೆಂದು WHO ಶಿಫಾರಸು ಮಾಡುತ್ತದೆ.
ಸಾವಿನ ಸಂಖ್ಯೆ ಕಡಿಮೆ ಮಾಡಬಹುದು
ಜಾಗತಿಕ ಉಪ್ಪಿನ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಅಂದರೆ ವಿಶ್ವ ಆರೋಗ್ಯ ಸಂಸ್ಥೆ ಶಿಫಾರಾಸು ಮಾಡಿದಂತೆ ಐದು ಗ್ರಾಂಗೆ ಇಳಿಸಿದರೆ ಪ್ರತಿ ವರ್ಷ ಸುಮಾರು 2.5 ಮಿಲಿಯನ್ ಸಾವುಗಳನ್ನು ತಡೆಯಬಹುದು ಎನ್ನುತ್ತದೆ ಸಂಶೋಧನೆ.
Eating More Salty Food Daily Can Lead To Premature Death.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm