ಬ್ರೇಕಿಂಗ್ ನ್ಯೂಸ್
26-08-22 07:18 pm Source: Vijayakarnataka ಡಾಕ್ಟರ್ಸ್ ನೋಟ್
ಹಾಲಿಗೆ ಅರಿಶಿನ ಮಿಕ್ಸ್ ಮಾಡಿ ಕುಡಿದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನೋದನ್ನು ನೀವು ಕೇಳಿರಬಹುದು. ಇದು ದೇಹದ ಆಯಾಸವನ್ನು ಕಡಿಮೆ ಮಾಡುತ್ತದೆ, ದೇಹದ ನೋವನ್ನು ನೀವಾರಿಸುತ್ತದೆ, ಗಾಯ ಗುಣಮುಖವಾಗಲು ಸಹಾಯಮಾಡುತ್ತದೆ. ಆದರೆ ಈ ಅರಿಶಿನದ ಹಾಲಿನ ಸೇವನೆ ಎಲ್ಲರಿಗೂ ಒಳ್ಳೆಯದಲ್ಲ ಅನ್ನೋದು ನಿಮಗೆ ಗೊತ್ತಾ? ಕೆಲವೊಂದು ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಈ ಅರಿಶಿನದ ಹಾಲನ್ನು ಸೇವಿಸೋದರಿಂದ ಹಾನಿಯಾಗಬಹುದಂತೆ.
ಕಡಿಮೆ ರಕ್ತದ ಸಕ್ಕರೆ ಅಂಶ ಇರುವವರು
![]()
ಕಡಿಮೆ ರಕ್ತದ ಸಕ್ಕರೆ ಅಂಶ ಇರುವವರು ಅಂದರೆ ಯಾರಿಗೆ ಲೋ ಶುಗರ್ ಇದೆಯೋ ಅಂತಹ ವ್ಯಕ್ತಿಗಳು ಅರಿಶಿನ ಹಾಕಿದ ಹಾಲನ್ನು ಕುಡಿಯಬಾರದಂತೆ, ಅದನ್ನು ಕುಡಿದ್ರೆ ಅವರ ಶುಗರ್ ಲೆವೆಲ್ ಇನ್ನೂ ಕಡಿಮೆ ಯಾಗುತ್ತದೆ ಎನ್ನಲಾಗುತ್ತದೆ.ಅರಿಶಿನದಲ್ಲಿ ಕರ್ಕ್ಯುಮಿನ್ ಇರುವುದರಿಂದ ಕಡಿಮೆ ರಕ್ತದ ಸಕ್ಕರೆಯಿಂದ ತೊಂದರೆಗೊಳಗಾದವರು ವೈದ್ಯರ ಸಲಹೆಯ ಮೇರೆಗೆ ಇದನ್ನು ಸೇವಿಸಬೇಕು.
ಪುರುಷರಲ್ಲಿ ಬಂಜೆತನ
![]()
ಅರಿಶಿನವು ಪುರುಷರಲ್ಲಿ ಬಂಜೆತನಕ್ಕೆ ಕಾರಣವಾಗಬಹುದು. ಅವರ ಟೆಸ್ಟೋಸ್ಟೆರಾನ್ ಮಟ್ಟವನ್ನು ಕಡಿಮೆ ಮಾಡುವುದು. ವೀರ್ಯ ಚಲನೆಯನ್ನು ಕಡಿಮೆ ಮಾಡುವುದು. ಆದ್ದರಿಂದ, ಮಗುವನ್ನು ಹೊಂದಲು ಪ್ರಯತ್ನಿಸುತ್ತಿರುವ ಪುರುಷರು ಅರಿಶಿನವನ್ನು ಎಚ್ಚರಿಕೆಯಿಂದ ಬಳಸಬೇಕು.
ಕಿಡ್ನಿ ಸಂಬಂಧಿತ ಸಮಸ್ಯೆ
![]()
ವ್ಯಕ್ತಿಗೆ ಕಿಡ್ನಿ ಸಂಬಂಧಿತ ಯಾವುದೇ ಸಮಸ್ಯೆ ಇದ್ದಲ್ಲಿ ಅಂತಹ ಪರಿಸ್ಥಿತಿಯಲ್ಲಿ ಅರಿಶಿನದ ಹಾಲಿನ ಸೇವನೆಯು ಆರೋಗ್ಯಕ್ಕೆ ಹಾನಿಯಾಗಬಹುದು.ವಿಶೇಷವಾಗಿ ಕಲ್ಲುಗಳ ಸಮಸ್ಯೆ ಇದ್ದಾಗ, ವಾಸ್ತವವಾಗಿ ಅರಿಶಿನವು ಆಕ್ಸಲೇಟ್ ಅನ್ನು ಹೊಂದಿರುತ್ತದೆ, ಇದು ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ಪ್ರಚೋದಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಮೂತ್ರಪಿಂಡದ ಸಮಸ್ಯೆಯ ಸಮಯದಲ್ಲಿ ಹಾಲಿಗೆ ಅರಿಶಿನ ಸೇರಿಸಿ ಕುಡಿಯಲೇ ಬಾರದು.
ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆ

ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆ ಇರುವವರು ಅಂದರೆ ಮಲಬದ್ಧತೆ ಸಮಸ್ಯೆ, ಹೊಟ್ಟೆಯಲ್ಲಿ ಗ್ಯಾಸ್, ಉಬ್ಬುವುದು ಸಮಸ್ಯೆ, ಹೊಟ್ಟೆ ಉಬ್ಬುವುದು, ಎದೆಯುರಿ ಅಥವಾ ಆಸಿಡ್ ರಿಫ್ಲಕ್ಸ್, ಅಜೀರ್ಣ ಇತ್ಯಾದಿ ಸಮಸ್ಯೆಯನ್ನು ಹೊಂದಿರುವ ಜನರು ಅರಿಶಿನ ಹಾಲನ್ನು ಸೇವಿಸಬಾರದು.
ಕಬ್ಬಿಣದಂಶದ ಕೊರತೆ ಇರುವವರು
![]()
ನಿಮ್ಮ ದೇಹದಲ್ಲಿ ಕಬ್ಬಿಣದ ಕೊರತೆಯಿದ್ದರೆ, ಅಂತಹ ಪರಿಸ್ಥಿತಿಯಲ್ಲಿ ಅರಿಶಿನ ಹಾಲನ್ನು ಸೇವಿಸಬಾರದು. ಇದು ನಿಮ್ಮ ಸಮಸ್ಯೆಯನ್ನು ಇನ್ನಷ್ಟು ಉಲ್ಭಣಗೊಳಿಸಬಹುದು.
ಶಸ್ತ್ರಚಿಕಿತ್ಸೆ
![]()
ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಮತ್ತು ನಂತರ ರಕ್ತಸ್ರಾವದ ಅಪಾಯದ ಕಾರಣದಿಂದ ನಿಗದಿತ ಶಸ್ತ್ರಚಿಕಿತ್ಸೆಗೆ ಎರಡು ವಾರಗಳ ಮೊದಲು ಅರಿಶಿನವನ್ನು ನಿಲ್ಲಿಸಬೇಕು. ಅರಿಶಿನವು ರಕ್ತ ಹೆಪ್ಪುಗಟ್ಟುವಿಕೆಯ ರಚನೆಯನ್ನು ವಿಳಂಬಗೊಳಿಸುತ್ತದೆ.ಇನ್ನು ಉಳಿದವರು ಅರಿಶಿನದ ಹಾಲು ಸೇವಿಸುವಾಗ ಬರೀ ಒಂದು ಚಿಟಿಕೆ ಅರಿಶಿನ ಸೇರಿಸಿದ್ರೆ ಸಾಕು. ಅದಕ್ಕಿಂತ ಹೆಚ್ಚು ಅರಿಶಿನ ಸೇರಿಸುವ ಅಗತ್ಯವಿಲ್ಲ.
Who Should Not Consume Turmeric Milk.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm