ಬ್ರೇಕಿಂಗ್ ನ್ಯೂಸ್
27-08-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ವೇಗದ ಜೀವನಶೈಲಿಯಲ್ಲಿ ಕೆಲವೊಮ್ಮೆ ತಿಂಡಿ ತಯಾರಿಸಿ ತಿನ್ನಲೂ ಸಮಯವಿರುವುದಿಲ್ಲ. ಆಗ ಹೊಟೆಲ್ಗಳ ತಿಂಡಿಗೆ ಅವಲಂಬಿತವಾಗಿರಬೇಕಾಗುತ್ತದೆ. ಆದರೆ ಅವು ಎಷ್ಟರ ಮಟ್ಟಿಗ ಪೌಷ್ಟಿಕ ಎನ್ನವ ಪ್ರಶ್ನೆ ಮೂಡುತ್ತದೆ.
ಬೆಳಗ್ಗಿನ ತಿಂಡಿಯನ್ನು ಸ್ಕಿಪ್ ಮಾಡುವುದು ಒಳ್ಳೆಯದಲ್ಲ. ಅನೇಕರು ತಿಂಡಿಯನ್ನು ತಯಾರಿಸಲು ಸಮಯವಿರುವುದಿಲ್ಲ ಎನ್ನುತ್ತಾರೆ. ಹಾಗಾದರೆ ಕಡಿಮೆ ಸಮಯದಲ್ಲಿ ಪೌಷ್ಟಿಕವಾಗಿ ಯಾವ ಆಹಾರ ತಯಾರಿಸಬಹುದು ಎನ್ನುವ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.
ಇಡ್ಲಿ

ರಾಗಿ ಅಥವಾ ರವೆ ಇಡ್ಲಿಯನ್ನು ಬೇಗನೆ ಬೆಳಗ್ಗಿನ ತಿಂಡಿಯಾಗಿ ಸೇವಿಸಬಹದು. ಇವುಗಳು ಜೀರ್ಣಿಸಿಕೊಳ್ಳಲು ತುಂಬಾ ಸುಲಭ. ರಾಗಿ ಅಥವಾ ಫಿಂಗರ್ ರಾಗಿ ತೂಕ ನಷ್ಟಕ್ಕೆ ಪರಿಪೂರ್ಣ ಘಟಕಾಂಶವಾಗಿದೆ.
ಇದು ಜೀರ್ಣಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಆದರೆ ಆಹಾರ ಸೇವನೆಯಲ್ಲಿ ಪೂರ್ಣತೆಯನ್ನು ನೀಡುತ್ತದೆ. ಅವು ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುವುದಿಲ್ಲ. ಕಡಿಮೆ ಸೋಡಿಯಂ ಅಂಶವು ಹೃದಯಕ್ಕೂ ಒಳ್ಳೆಯದು.
ಬ್ರೆಡ್ ಸಾಂಡ್ವಿಚ್

ರುಚಿಕರವಾದ ತರಕಾರಿಗಳನ್ನು ತುಂಬಿ ತಯಾರಿಸಿದ ಆರೋಗ್ಯಕರ ಬ್ರೆಡ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಗೋಧಿ ಬ್ರೆಡ್ ಮತ್ತು ತರಕಾರಿಗಳ ಇಡೀ ದಿನ ಚೈತನ್ಯಪೂರ್ಣವಾಗಿ ಇರುವಂತೆ ಮಾಡುತ್ತದೆ.
ಬೆಳಗ್ಗಿನ ಗಡಿಬಿಡಿಯಲ್ಲಿ ಸುಲಭವಾಗಿ ಇದನ್ನು ತಯಾರಿಸಬಹುದಾಗಿದೆ. ಇದರಲ್ಲಿ ಫೈಬರ್, ವಿಟಮಿನ್ ಬಿ 1, ಬಿ 6, ಬಿ 12, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಅಧಿಕವಾಗಿದೆ. ಮಧುಮೇಹಿಗಳಿಗೆ ಮತ್ತು ತೂಕ ಇಳಿಸಿಕೊಳ್ಳುವವರಿಗೂ ಬಹಳ ಉತ್ತಮವಾಗಿದೆ.
ಮೊಟ್ಟೆ

ಮೊಟ್ಟೆಯ ಬಿಳಿಭಾಗವು ಸರಳವಾದ, ಪೌಷ್ಟಿಕಾಂಶಯುಕ್ತ ತಿಂಡಿಯಾಗಿದೆ. ಮೊಟ್ಟೆ ಪ್ರೋಟೀನ್ನ ಉತ್ತಮ ಮೂಲವಾಗಿದೆ, ಇದು ಸ್ನಾಯುವಿನ ಆರೋಗ್ಯವನ್ನು ಕಾಪಾಡುತ್ತದೆ.
ಪ್ರೋಟೀನ್ ಜೀರ್ಣಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ, ಹೀಗಾಗಿ ಹೆಚ್ಚು ಹೊತ್ತು ಹೊಟ್ಟೆ ತುಂಬಿದ ಭಾವನೆ ಇರುತ್ತದೆ. ನೀವು ಮೊಟ್ಟೆಯನ್ನು ಬೇಯಿಸಿ ಸೇವನೆ ಮಾಡಬಹುದು.
ಅವಲಕ್ಕಿ

ಭಾರತೀಯ ಆಹಾರ ಪದ್ಧತಿಯಲ್ಲಿ ಪೋಹಾ ಅಥವಾ ಅವಲಕ್ಕಿಗೆ ಒಗ್ಗರೆಣೆ ಹಾಕಿ ಸೇವನೆ ಮಾಡುವುದು ಹೆಚ್ಚಿನ ಜನರಿಗೆ ತಿಳಿದಿದೆ. ಇದು ಹಗುರವಾದ, ಹೊಟ್ಟೆ ತುಂಬುವ ಆಹಾರವಾಗಿದೆ.
ಇದು ಕಾರ್ಬೋಹೈಡ್ರೇಟ್ಗಳ ಅತ್ಯುತ್ತಮ ಮೂಲವಾಗಿದೆ, ಕಬ್ಬಿಣಾಂಶದಿಂದ ತುಂಬಿರುತ್ತದೆ, ಫೈಬರ್, ಉತ್ಕರ್ಷಣ ನಿರೋಧಕಗಳು ಮತ್ತು ಅಗತ್ಯವಾದ ಜೀವಸತ್ವಗಳ ಉತ್ತಮ ಮೂಲವಾಗಿದೆ. ಹೀಗಾಗಿ ಇದನ್ನು ಬೇಗನೆ ತಯಾರಿಸಿ ತಿನ್ನಬಹುದಾದ ಪೌಷ್ಟಿಕವಾದ ತಿಂಡಿಯಾಗಿದೆ.
ಉಪ್ಪಿಟ್ಟು

ಹೆಚ್ಚು ಜನರು ಉಪ್ಪಿಟ್ಟು ಎಂದರೆ ಮೂಗು ಮುರಿಯುತ್ತಾರೆ. ಆದರೆ ಉಪ್ಪಿಟ್ಟು ಬಹಳ ಒಳ್ಳೆಯದು. ಇದರಲ್ಲಿ ಬಳಸುವ ರವೆ, ತರಕಾರಿಗಳು ದೇಹಕ್ಕೆ ಶಕ್ತಿ ನೀಡುತ್ತವೆ.
ಅಲ್ಲದೆ ಬೆಳಗ್ಗಿನ ತಿಂಡಿಯಾಗಿ ಉಪ್ಪಿಟ್ಟನ್ನು ಸೇವನೆ ಮಾಡಿದರೆ ಜೀರ್ಣವಾಗಲು ಸಮಯ ಬೇಕಾಗಿರುವುದರಿಂದ ಪದೇಪದೇ ಹಸಿವೆಯಾಗುವುದು ತಪ್ಪುತ್ತದೆ. ಹೀಗಾಗಿ ದೇಹದ ತೂಕ ಇಳಿಸಿಕೊಳ್ಳಬೇಕು ಎಂದವರಿಗೆ ಇದು ಸುಲಭದ ಆಹಾರವಾಗಿದೆ.
These Are The Healthy And Easy Breakfast.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm