ಬ್ರೇಕಿಂಗ್ ನ್ಯೂಸ್
25-10-22 09:00 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ಯಾವಾಗ ಆರೋಗ್ಯ ಹದಗೆಡುತ್ತದೆ ಎಂದು ಹೇಳುವುದು ಕಷ್ಟ. ಅದರಲ್ಲೂ ಈಗ ಬಿಸಿಲು ಮತ್ತು ಮಳೆ ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ. ಈ ಸಂದರ್ಭದಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಆರೋಗ್ಯ ತೊಂದರೆ ತಪ್ಪಿದ್ದಲ್ಲ. ಈ ಸಂದರ್ಭದಲ್ಲಿ ಶೀತ ನೆಗಡಿ ಉಂಟಾಗುತ್ತದೆ. ಇದರ ಜೊತೆ ಗಂಟಲು ನೋವು ಸಹ ಬರುತ್ತದೆ...
ಗಂಟಲು ನೋವಿಗೆ ಅರಿಶಿನ

ಶೀತ, ಕೆಮ್ಮು, ನೆಗಡಿ, ಗಂಟಲು ನೋವಿಗೆ ಅರಿಶಿನ

ಅರಿಶಿನವನ್ನು ನಾವು ನಮಗೆ ಶೀತ, ಕೆಮ್ಮು, ನೆಗಡಿ, ಗಂಟಲು ನೋವು ಬಂದಾಗ ಉಪಯೋಗಿಸುತ್ತೇವೆ. ಅಷ್ಟೇ ಅಲ್ಲದೆ ಗಾಯವನ್ನು ವಾಸಿ ಮಾಡಲು, ಮಧುಮೇಹ ಸಮಸ್ಯೆಯನ್ನು ನಿಯಂತ್ರಣ ಮಾಡಲು, ಮೈಕೈ ನೋವು, ಆರ್ಥ್ರೈಟಿಸ್, ರೋಗನಿರೋಧಕ ಶಕ್ತಿಯನ್ನು ಅಭಿವೃದ್ಧಿಪಡಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಇನ್ನಿತರ ತೊಂದರೆಗಳಿಗೆ ಪರಿಹಾರವಾಗಿ ಬಳಸಬಹುದಾಗಿದೆ ಎಂದು ಡಾ. ದೀಕ್ಷಾ ಭಾವ್ಸರ್ ಹೇಳಿದ್ದಾರೆ. ಗಂಟಲು ನೋವಿನ ಪರಿಹಾರಕ್ಕೆ ಅರಿಶಿನ ಎಂಬ ಗಿಡಮೂಲಿಕೆಯನ್ನು ಸುಲಭವಾಗಿ ಈ ರೀತಿ ಬಳಸಬಹುದು.
ಅರಿಶಿನದ ನೀರಿನಿಂದ ಬಾಯಿ ಮುಕ್ಕಳಿಸುವುದು
![]()
ಒಂದು ಲೋಟ ನೀರು ತೆಗೆದುಕೊಂಡು ಅದಕ್ಕೆ ಒಂದು ಟೇಬಲ್ ಚಮಚ ಅರಿಶಿನ ಪುಡಿಯನ್ನು ಸೇರಿಸಿ ಮೂರರಿಂದ ಐದು ನಿಮಿಷಗಳು ಚೆನ್ನಾಗಿ ಕುದಿಸಬೇಕು. ದಿನದಲ್ಲಿ ಮೂರು ಬಾರಿ ಈ ರೀತಿ ಮಾಡುವುದ ರಿಂದ ಗಂಟಲು ನೋವು ಕ್ರಮೇಣವಾಗಿ ಕಡಿಮೆಯಾಗುತ್ತದೆ.
ಅರಿಶಿನದ ಜೊತೆ ಕಾಳು ಮೆಣಸು

1 ಟೀಚಮಚ ಅರಿಶಿನ, ಒಂದು ಅಥವಾ ಎರಡು ಕುಟ್ಟಿ ಪುಡಿ ಮಾಡಿದ ಕಾಳು ಮೆಣಸು ಮತ್ತು ಒಂದು ಟೀ ಚಮಚ ಜೇನುತುಪ್ಪ ಎಲ್ಲವನ್ನು ಮಿಶ್ರಣ ಮಾಡಿ ಊಟಕ್ಕೆ ಒಂದು ಗಂಟೆ ಮುಂಚೆ ಅಥವಾ ನಂತರದಲ್ಲಿ ದಿನದಲ್ಲಿ ಎರಡರಿಂದ ಮೂರು ಬಾರಿ ಸೇವಿಸುವ ಅಭ್ಯಾಸವಿಟ್ಟುಕೊಳ್ಳಿ. ಇದು ಸಹ ಗಂಟಲು ನೋವಿಗೆ ಒಂದು ಒಳ್ಳೆಯ ಪರಿಹಾರ.
ಅರಿಶಿನ ಮಿಶ್ರಿತ ಹಾಲು

ರಾತ್ರಿ ಮಲಗುವ ಸಂದರ್ಭದಲ್ಲಿ ಈ ಪರಿಹಾರವನ್ನು ಮಾಡಿಕೊಳ್ಳಬಹುದು. ಪ್ರತಿದಿನ ಮಲಗುವಾಗ ನಿಮಗೆ ಒಂದು ವೇಳೆ ಹಸುವಿನ ಹಾಲು ಲಭ್ಯವಿದ್ದರೆ, ಅದನ್ನು ಒಂದು ಲೋಟ ತೆಗೆದುಕೊಂಡು ಅದಕ್ಕೆ ಒಂದು ಟೀ ಚಮಚ ಅರಿಸಿನ ಪುಡಿ ಸೇರಿಸಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಗಂಟಲು ನೋವು ಕಡಿಮೆಯಾಗುತ್ತದೆ ಎಂದು ವೈದ್ಯರಾದ ಡಾ. ದೀಕ್ಷಾ ಭಾವ್ಸರ್ ಹೇಳುತ್ತಾರೆ.
As Per The Health Experts Turmeric Has Broad Benefits For Your Throat Pain.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm