ಬ್ರೇಕಿಂಗ್ ನ್ಯೂಸ್
            
                        17-11-22 07:40 pm Source: Vijayakarnataka ಡಾಕ್ಟರ್ಸ್ ನೋಟ್
            ಋತುಮಾನದ ಹಣ್ಣುಗಳು ದೇಹವನ್ನು ಆರೋಗ್ಯವಾಗಿರಿಸಿಕೊಳ್ಳಲು ಸಹಾಯ ಮಾಡುತ್ತವೆ. ಅಂತಹವುಗಳಲ್ಲಿ ಪೇರಳೆ ಕೂಡ ಒಂದು. ನವೆಂಬರ್ ಡಿಸೆಂಬರ್ನಲ್ಲಿ ಚಳಿಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಪೇರಳೆ ಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು.
ಹೇರಳವಾದ ಉತ್ಕರ್ಷಣ ನಿರೋಧಕಗಳು, ಫೈಬರ್, ವಿಟಮಿನ್ ಸಿ, ಪ್ರೋಟೀನ್ಗಳು, ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್ಗಳು ಸೇರಿದಂತೆ ಅನೇಕ ರೀತಿಯ ಪೋಷಕಾಂಶಗಳನ್ನು ಹೊಂದಿರುತ್ತದೆ. ಹೀಗಾಗಿ ಚಳಿಗಾಲದಲ್ಲಿ ದೇಹವನ್ನು ಆರೋಗ್ಯವಾಗಿಡುವಲ್ಲಿ ಸಹಾಯ ಮಾಡುತ್ತದೆ.
ಹಾಗಾದರೆ ಪೇರಳೆ ಹಣ್ಣು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳನ್ನು ನೀಡುತ್ತದೆ ಎನ್ನುವ ಬಗ್ಗೆ ಆಯುರ್ವೇದ ವೈದ್ಯರಾದ ಡಾ. ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಮಧುಮೇಹ ಇದ್ದವರಿಗೆ ಒಳ್ಳೆಯದು
![]()
ಪೇರಳೆ ಹಣ್ಣು ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಹಣ್ಣು. ಇದರರ್ಥ ಅವುಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣ ಮಾಡಬಹುದು. ಅಲ್ಲದೆ ಇದರಲ್ಲಿ ಹೆಚ್ಚಿನ ಫೈಬರ್ ಅಂಶ ಇರುವ ಕಾರಣ ಜೀರ್ಣಕ್ರಿಯೆ ಉತ್ತಮವಾಗುವಂತೆ ಮಾಡುತ್ತದೆ.
ಹೀಗಾಗಿ ಮಧುಮೇಹ ಇದ್ದವರು ನಿಯಮಿತವಾಗಿ ಪೇರಳೆ ಹಣ್ಣನ್ನು ತಿನ್ನುವುದು ಬಹಳ ಒಳ್ಳೆಯದು ಎನ್ನುತ್ತಾರೆ ವೈದ್ಯರು.
ಬೊಜ್ಜು ನಿವಾರಣೆಗೆ

ದೇಹದಲ್ಲಿನ ಅಧಿಕ ತೂಕದಿಂದಾಗಿ ಉಂಟಾಗುವ ಬೊಜ್ಜಿನ ಸಮಸ್ಯೆ ನಿವಾರಣೆಗೆ ಪೇರಳೆ ಹಣ್ಣು ಸಹಾಯಕವಾಗಿದೆ. ಸರಳವಾಗಿ ಆಹಾರದ ಫೈಬರ್, ಪ್ರೋಟೀನ್ಗಳು ಮತ್ತು ಖನಿಜಗಳ ಸಮೃದ್ಧ ಮೂಲವಾಗಿರುವ ಪೇರಳೆ ತೂಕ ನಷ್ಟಕ್ಕೆ ನೆರವಾಗುತ್ತದೆ.
ಥೈರಾಯ್ಡ್ ಸಮಸ್ಯೆ ಇದ್ದವರಲ್ಲಿ ಕಾಡುವ ಬೊಜ್ಜಿನ ಸಮಸ್ಯೆಯನ್ನೂ ನಿವಾರಣೆ ಮಾಡಲು ಈ ಪೇರಳೆ ಹಣ್ಣು ಸಹಾಯ ಮಾಡುತ್ತದೆ.
ಮಲಬದ್ಧತೆ ಸಮಸ್ಯೆಗೆ

ಕಡಿಮೆ ಫೈಬರ್ ಸೇವನೆಯಿಂದ ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಅಲ್ಲದೆ ಸರಿಯಾದ ಕರುಳಿನ ಚಲನೆಯಿಲ್ಲದೆ ಸರಿಯಾಗಿ ಮಲವಿಸರ್ಜನೆಯಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಪೇರಳೆ ಹಣ್ಣುಗಳನ್ನು ತಿನ್ನುವುದು ಒಳ್ಳೆಯದು.
ಫೈಬರ್ ಅಂಶ ಅಧಿಕವಾಗಿ ಇರುವುದರಿಂದ ಚಳಿಗಾಲದಲ್ಲಿ ಪೇರಳೆ ಹಣ್ಣನ್ನು ತಿನ್ನುವುದು ಜೀರ್ಣಾಂಗ ವ್ಯವಸ್ಥೆಯನ್ನು ಸರಿಪಡಿಸಲು ಸಹಾಯ ಮಾಡುತ್ತದೆ.
ಬಾಯಿಯ ಹುಣ್ಣಿಗೆ

ದೇಹದಲ್ಲಿ ಉಷ್ಣತೆ ಜಾಸ್ತಿಯಾದಾಗ ಅಥವಾ ಹೆಚ್ಚು ಮಸಾಲೆ ಪದಾರ್ಥಗಳನ್ನು ತಿಂದಾಗ ಕೆಲವರಿಗೆ ಬಾಯಲ್ಲಿ ಗುಳ್ಳೆಯಾಗುತ್ತದೆ. ಅತೀವ ಉರಿ, ನೋವನ್ನು ನೀಡುವ ಈ ಬಾಯಿ ಹುಣ್ಣಿನ ನಿವಾರಣೆಗೆ ಪೇರಳೆ ಹಣ್ಣು ಅಥವಾ ಪೇರಳೆ ಗಿಡದ ಎಲೆ ಸಹಾಯ ಮಾಡುತ್ತದೆ.
ಬಾಯಿಯ ಹುಣ್ಣಾದ ಸಮಯದಲ್ಲಿ ಪೇರಳೆ ಹಣ್ಣನ್ನು ತಿನ್ನಬಹುದು ಅಥವಾ ಪೇರಳೆ ಗಿಡದ ಎಲೆಯನ್ನು ಜಗಿಯುವುದರಿಂದ ಗುಳ್ಳೆ ನಿವಾರಣೆಯಾಗುತ್ತದೆ.
ಪೇರಳೆ ಹಣ್ಣು ತಿಂದು ನೀರು ಕುಡಿಯಬೇಡಿ

ಪೇರಳೆ ಹಣ್ಣನ್ನು ಆಯುರ್ವೇದದಲ್ಲಿ ಬೇರೂಕ ಎನ್ನುತ್ತಾರೆ. ದೇಹಕ್ಕೆ ಇದು ಶೀತವಾಗಿದೆ. ಪೇರಳೆ ಹಣ್ಣನ್ನು ಹಚ್ಚು ತಿಂದರೂ ಸಮಸ್ಯೆಯೇ. ಮುಖ್ಯವಾಗಿ ಪೇರಳೆ ಹಣ್ಣನ್ನು ತಿಂದು ನೀರು ಕುಡಿಯಬಾರದು. ಏಕೆಂದರೆ ಇದರಲ್ಲಿ ಪೊಟ್ಯಾಷಿಯಂ ಅಂಶವಿರುತ್ತದೆ. ಹೀಗಾಗಿ ಪೇರಳೆ ತಿಂದು ನೀರು ಕುಡಿದರೆ ಅತಿಸಾರವಾಗುವ ಸಾಧ್ಯತೆ ಇರುತ್ತದೆ.
ಪೇರಳೆಹಣ್ಣಿನಲ್ಲಿ ಆಂಟಿಆಕ್ಸಿಡೆಂಟ್ಗಳು ಇರುವುದರಿಂದ ಚರ್ಮ, ಕೂದಲು, ಹಲ್ಲಿನ ಆರೋಗ್ಯಕ್ಕೆ, ಕಣ್ಣಿಗೆ, ಹೃದಯಕ್ಕೂ ಪೇರಳೆ ಹಣ್ಣು ಬಹಳ ಒಳ್ಳೆಯದು.
            
            
            Eating Guava Fruit In Winter Gives Amazing Health Benefits.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm