ಬ್ರೇಕಿಂಗ್ ನ್ಯೂಸ್
28-11-22 07:25 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹವು ವೇಗವಾಗಿ ಹರಡುವ ಮತ್ತು ಗುಣಪಡಿಸಲಾಗದ ಕಾಯಿಲೆಯಾಗಿದೆ. ನೀವು ಅದನ್ನು ನಿಯಂತ್ರಿಸದಿದ್ದರೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮೇಯೊ ಕ್ಲಿನಿಕ್ ಪ್ರಕಾರ, ಮಧುಮೇಹವು ರೋಗಿಯ ರಕ್ತದಲ್ಲಿನ ಸಕ್ಕರೆಯು ವೇಗವಾಗಿ ಏರುವ ಕಾಯಿಲೆಯಾಗಿದೆ. ಇದು ಮೂತ್ರಪಿಂಡಗಳಲ್ಲಿನ ರಕ್ತನಾಳಗಳನ್ನು ಹಾನಿಗೊಳಿಸುತ್ತದೆ ಮತ್ತು ಅವುಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರುತ್ತದೆ.
ಮೂತ್ರಪಿಂಡದ ಮೇಲೆ ಪರಿಣಾಮ

ಮಧುಮೇಹ ಹಚ್ಚಾದರೆ ದೇಹದಿಂದ ತ್ಯಾಜ್ಯ ಉತ್ಪನ್ನಗಳು ಮತ್ತು ಹೆಚ್ಚುವರಿ ದ್ರವವನ್ನು ತೆಗೆದುಹಾಕಲು ಮೂತ್ರಪಿಂಡಗಳ ಸಾಮರ್ಥ್ಯವು ತೀವ್ರವಾಗಿ ಪರಿಣಾಮ ಬೀರುತ್ತದೆ. ಸಮಯಕ್ಕೆ ಚಿಕಿತ್ಸೆ ನೀಡದಿದ್ದರೆ, ಮೂತ್ರಪಿಂಡ ವೈಫಲ್ಯದ ಅಪಾಯವೂ ಹೆಚ್ಚಾಗುತ್ತದೆ. ಇದು ರಕ್ತದಿಂದ ವಿಷ ಮತ್ತು ತ್ಯಾಜ್ಯವನ್ನು ತೆಗೆದುಹಾಕುವ ಮೂಲಕ ದೇಹದೊಳಗಿನ ಸಮತೋಲನವನ್ನು ಕಾಪಾಡಿಕೊಳ್ಳಲು ಕಾರಣವಾಗಿದೆ.
ಕೆಲವೊಂದು ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು
![]()
ಮೂತ್ರಪಿಂಡ ಕಾಯಿಲೆಯ ಅಪಾಯವನ್ನು ಎದುರಿಸಲು ಮಧುಮೇಹ ರೋಗಿಗಳಲ್ಲಿ ಕೆಲವು ಅಭ್ಯಾಸಗಳನ್ನು ಅನುಸರಿಸುವುದು ಬಹಳ ಮುಖ್ಯ. ಮಧುಮೇಹ ರೋಗಿಗಳು ಮೂತ್ರಪಿಂಡಗಳನ್ನು ಆರೋಗ್ಯವಾಗಿರಿಸಿಕೊಳ್ಳಬಹುದು ಮತ್ತು ಕೆಲವು ಸರಳ ಕೆಲಸಗಳ ಮೂಲಕ ಅವುಗಳ ಕಾರ್ಯನಿರ್ವಹಣೆಯನ್ನು ಉತ್ತೇಜಿಸಬಹುದು.
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಿ
![]()
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮೂತ್ರಪಿಂಡದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಆರೋಗ್ಯಕರ ಆಹಾರ, ವ್ಯಾಯಾಮ ಮತ್ತು ಔಷಧಿಗಳ ಮೂಲಕ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಬೇಕು.
ರಕ್ತದೊತ್ತಡವನ್ನು ನಿಯಂತ್ರಿಸಿ
![]()
ಅನೇಕ ಮಧುಮೇಹ ರೋಗಿಗಳು ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಇದು ಮೂತ್ರಪಿಂಡದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸುವ ಮೂಲಕ, ಮಧುಮೇಹ ರೋಗಿಗಳಲ್ಲಿ ಮೂತ್ರಪಿಂಡದ ಹಾನಿಯ ಅಪಾಯವನ್ನು ಕಡಿಮೆ ಮಾಡಬಹುದು. ಹಾಗಾಗಿ ಬಿಪಿಯನ್ನು 130/80 ಕ್ಕಿಂತ ಕಡಿಮೆ ಇರುವಂತೆ ನೋಡಿಕೊಳ್ಳಿ.
ಆರೋಗ್ಯಕರ ಜೀವನಶೈಲಿ ಸಹ ಮುಖ್ಯವಾಗಿದೆ

ನಿಯಮಿತ ವ್ಯಾಯಾಮ, ಕಡಿಮೆ ಉಪ್ಪು ಸೇವನೆ ಮತ್ತು ಸರಿಯಾದ ಬಾಡಿ ಮಾಸ್ ಇಂಡೆಕ್ಸ್ನೊಂದಿಗೆ ತೂಕವು ಮೂತ್ರಪಿಂಡದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನೀವು ಮೂತ್ರಪಿಂಡದ ಕಾಯಿಲೆ ಹೊಂದಿದ್ದರೆ ಕಡಿಮೆ ಪ್ರೋಟೀನ್ ಸೇವಿಸಿ ಮತ್ತು ಜಂಕ್ ಫುಡ್ ನಿಂದ ದೂರವಿರಿ.
ತಂಬಾಕಿನಿಂದ ದೂರವಿರಿ
![]()
ಯಾವುದೇ ರೂಪದಲ್ಲಿ ತಂಬಾಕು ಸೇವನೆಯು ಹೃದ್ರೋಗದ ಅಪಾಯವನ್ನು ಹೆಚ್ಚಿಸುವುದಲ್ಲದೆ ಮೂತ್ರಪಿಂಡದ ಕಾಯಿಲೆಗೆ ಕಾರಣವಾಗುತ್ತದೆ. ಹಾಗಾಗಿ ಅದನ್ನು ತಪ್ಪಿಸಲು ಶಿಫಾರಸು ಮಾಡಲಾಗುತ್ತದೆ.
ಔಷಧಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ

ಮೇಲೆ ತಿಳಿಸಿದ ಕ್ರಮಗಳ ಹೊರತಾಗಿ, ನೀವು ಔಷಧಿಗಳ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕು. ಮೂತ್ರಪಿಂಡದ ಕಾಯಿಲೆಯನ್ನು ತಡೆಗಟ್ಟಲು ಸಾಬೀತಾಗಿರುವ ಔಷಧಿಗಳನ್ನು ನೀವು ತೆಗೆದುಕೊಳ್ಳಬೇಕು.
Do You Have High Sugar, Then Be Careful About Your Kidney.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm