ಬ್ರೇಕಿಂಗ್ ನ್ಯೂಸ್
29-11-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಒಳಗಿರುವ ಪ್ರತಿಯೊಂದು ಅಂಗಾಂಗಗಳ ಬಗ್ಗೆ ನಾವು ಕಾಳಜಿ ಹೊಂದಬೇಕು. ಏಕೆಂದರೆ ಅವುಗಳು ನಮ್ಮ ಕಣ್ಣಿಗೆ ಕಾಣುವುದಿಲ್ಲ ಮತ್ತು ನಿರಂತರವಾಗಿ ಕಾರ್ಯ ಚಟು ವಟಿಕೆ ನಡೆಸುತ್ತಿರುತ್ತವೆ. ಹಾಗಾಗಿ ಯಾವುದೇ ಸಂದರ್ಭದಲ್ಲಿ ಅವುಗಳಿಗೆ ನಮ್ಮ ಆಹಾರ ಪದ್ಧತಿಯಿಂದ ಅಥವಾ ನಮ್ಮಿಂದಲೇ ತೊಂದರೆ ಎದುರಾಗಬಹುದು.
ಮುಖ್ಯವಾಗಿ ನಮ್ಮ ದೇಹದಲ್ಲಿ ವಿಷಕಾರಿ ಅಂಶಗಳು ದೇಹದಿಂದ ಹೊರಹೋಗದೆ ದೇಹದಲ್ಲಿ ಹಾಗೆ ಶೇಖರಣೆ ಆದರೆ ನಮ್ಮ ದೇಹದ ಪ್ರಮುಖ ಅಂಗಾಂಗಗಳಾದ ಲಿವರ್ ಮತ್ತು ಕರುಳು ತೊಂದರೆಗೆ ಒಳಗಾಗುವ ಸಾಧ್ಯತೆ ಇರುತ್ತದೆ.
ಆರೋಗ್ಯಕಾರಿ ಆಹಾರ ಪದ್ಧತಿ ಅತ್ಯಗತ್ಯ

ಸಾಧ್ಯವಾದಷ್ಟು ಒಳ್ಳೆಯ ಆಹಾರ ಸೇವನೆ ಮತ್ತು ದೇಹಕ್ಕೆ ವ್ಯಾಯಾಮ ನೀಡುವುದರ ಕಡೆಗೆ ಗಮನ ಕೊಡಬೇಕು. ಈಗ ಲಿವರ್ ಬಗ್ಗೆ ಮಾತನಾಡುವುದಾದರೆ ಇದು ನಮ್ಮ ದೇಹದಲ್ಲಿ ಅನೇಕ ಕೆಲಸಗಳನ್ನು ನಮಗೆ ಗೊತ್ತಿಲ್ಲದೆ ಮಾಡುತ್ತದೆ.
ಉದಾಹರಣೆಗೆ ನಾವು ತಿಂದ ಆಹಾರ ಜೀರ್ಣವಾಗಲು ಅಗತ್ಯವಾಗಿ ಬೇಕಾದ ಜೀರ್ಣ ವ್ಯವಸ್ಥೆಯ ನಿರ್ವಹಣೆ, ಬೈಲ್ ಜ್ಯೂಸ್ ಉತ್ಪತ್ತಿ, ಪ್ರೋಟೀನ್ ಸಂಸ್ಕರಣೆ, ಮೆಟಬಾಲಿಸಂ, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಗೆ ಹಾಕುವುದು ಇವೆಲ್ಲವನ್ನೂ ಲಿವರ್ ಮಾಡುತ್ತದೆ.
ಆಯುರ್ವೇದ ಶಾಸ್ತ್ರದ ಪ್ರಕಾರ
-1557309616-1565595256.png)
ಆಯುರ್ವೇದ ಶಾಸ್ತ್ರದ ಪ್ರಕಾರ ಲಿವರ್ ಉಷ್ಣ ಪ್ರಭಾವದ ಮೇಲೆ ಕೆಲಸ ಮಾಡುವ ಅಂಗವಾಗಿದ್ದು, ಅದನ್ನು ದೀರ್ಘಕಾಲ ಚೆನ್ನಾಗಿ ನೋಡಿಕೊಳ್ಳಲು ತಂಪಾದ ಪ್ರಭಾವ ಹೊಂದಿರುವ ಆಹಾರಗಳ ಸೇವನೆ ಮಾಡಬೇಕು ಎಂದು ಆಯುರ್ವೇದ ತಜ್ಞರಾದ ಡಾ. ಪ್ರತಾಪ್ ಚೌಹಾನ್ ಹೇಳುತ್ತಾರೆ.
ಅವರ ಪ್ರಕಾರ ಕಹಿ ಇರುವ ಆಹಾರ ಪದಾರ್ಥಗಳು ಮತ್ತು ದೇಹಕ್ಕೆ ತಂಪು ಪ್ರಭಾವ ಬೀರುವ ಗಿಡಮೂಲಿಕೆಗಳು ಲಿವರ್ ಗೆ ಒಳ್ಳೆಯದು.
ಉದಾಹರಣೆಗೆ ಹೇಳುವುದಾದರೆ....

ಉದಾಹರಣೆಗೆ ಅಲೋವೆರಾ, ಬೇವು, ಹಾಗಲಕಾಯಿ, ಅರಿಶಿನ, ಬೆಟ್ಟದ ನೆಲ್ಲಿಕಾಯಿ ಇವು ಗಳನ್ನು ಆಗಾಗ ತಿನ್ನುತ್ತಿದ್ದರೆ ಲಿವರ್ ಆರೋಗ್ಯಕರವಾಗಿ ಕೂಡಿರುತ್ತದೆ. ಇದರ ಜೊತೆಗೆ ಹಸಿರು ಎಲೆ ತರಕಾರಿಗಳು, ಬೀಟ್ರೂಟ್, ಕ್ಯಾರೆಟ್, ಸೇಬು ಹಣ್ಣು ಇವುಗಳು ಕೂಡ ಲಿವರ್ ಆರೋಗ್ಯವನ್ನು ಕಾಪಾಡುತ್ತವೆ.
ಚಹಾ ತಯಾರು ಮಾಡಿ ಕುಡಿಯಬಹುದು
ಆದರೆ ಕೆಲವರಿಗೆ ಇವುಗಳೆಲ್ಲವನ್ನು ತಂದು ಆಹಾರ ಪದಾರ್ಥಗಳನ್ನು ತಯಾರಿಸಿ ತಿನ್ನಲು ಸಮಯವಿರುವುದಿಲ್ಲ. ಅಂತಹವರು ಸುಲಭವಾಗಿ ನಮ್ಮ ದೇಹಕ್ಕೆ ಆರೋಗ್ಯವನ್ನು ಒದಗಿಸುವ ಮತ್ತು ನಮ್ಮ ದೇಹದಿಂದ ವಿಷಕಾರಿ ಅಂಶಗಳನ್ನು ದೂರ ಮಾಡಿ ಲಿವರ್ ಮತ್ತು ಕರುಳಿನ ಭಾಗವನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ಆರೋಗ್ಯಕರವಾಗಿ ಇರಿಸುವ ಚಹಾ ತಯಾರು ಮಾಡಿ ಕುಡಿಯಬಹುದು.
ಇದಕ್ಕಾಗಿ ನೀವು ಮಾಡಬೇಕಾದ್ದು ಇಷ್ಟೇ

ಒಂದು ಚಿಟಿಕೆ ಅರಿಶಿನ ತೆಗೆದುಕೊಂಡು ಅದನ್ನು ಒಂದು ಕಪ್ ನೀರಿನಲ್ಲಿ ಹಾಕಿ ಕೆಲವು ನಿಮಿಷಗಳ ಕಾಲ ಚೆನ್ನಾಗಿ ಕುದಿಸಬೇಕು. ನೀರು ಸ್ವಲ್ಪ ತಣ್ಣಗಾಗುತ್ತಿದ್ದಂತೆ ಅಥವಾ ಉಗುರು ಬೆಚ್ಚಗಿನ ತಾಪಮಾನಕ್ಕೆ ಬಂದಾಗ ಅದಕ್ಕೆ ಸ್ವಲ್ಪ ನಿಂಬೆಹಣ್ಣಿನ ರಸ ಸೇರಿಸಿ ಕುಡಿಯಬೇಕು.
ಇದಕ್ಕೆ ಒಂದು ಟೀ ಚಮಚ ಜೇನುತುಪ್ಪ ಬೇಕಾದರೂ ಸೇರಿಸಬಹುದು. ಆದರೆ ಯಾವುದೇ ಕಾರಣಕ್ಕೂ ಸಕ್ಕರೆ ಹಾಕಬೇಡಿ. ಇಲ್ಲಿ ನೀವು ಬಳಸುವ ಅರಿಶಿನ ವಾಸಿ ಮಾಡುವ ಗುಣಲಕ್ಷಣಗಳನ್ನು ಹೊಂದಿದ್ದು ಲಿವರ್ ಭಾಗವನ್ನು ಸ್ವಚ್ಛಪಡಿಸುತ್ತದೆ.
Liver And Gut Can Be Cleaned By This Fantastic Herbal Tea.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm