ಬ್ರೇಕಿಂಗ್ ನ್ಯೂಸ್
18-03-23 08:51 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡವು ಗಂಭೀರ ಸಮಸ್ಯೆಯಾಗಿದ್ದು ಇದನ್ನು ಕಂಟ್ರೋಲ್ನಲ್ಲಿಡದಿದ್ದರೆ ಜೀವಕ್ಕೆ ಹಾನಿಯುಂಟು ಮಾಡಬಲ್ಲದು. ಇದು ಹೃದಯ ಮತ್ತು ಮೆದುಳಿಗೆ ನೇರ ಹಾನಿಯನ್ನುಂಟುಮಾಡುತ್ತದೆ. ಇದು ಹೃದಯಾಘಾತ-ಸ್ಟ್ರೋಕ್ಗೆ ಕಾರಣವಾಗಬಹುದು. ಇದನ್ನು ನಿಯಂತ್ರಿಸಲು ಈ ಆಹಾರಗಳು ಸಹಕಾರಿಯಾಗಬಲ್ಲದು.
ಅಧಿಕ ರಕ್ತದೊತ್ತಡದ ಲಕ್ಷಣಗಳು ಯಾವುವು?
![]()
ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆಯು ಯುವಜನರಲ್ಲಿಯೂ ಕಂಡುಬರುತ್ತಿದೆ, ಆದ್ದರಿಂದ ಇದರ ಲಕ್ಷಣಗಳನ್ನು ಆದಷ್ಟು ಬೇಗನೆ ಗುರುತಿಸಿ ಚಿಕಿತ್ಸೆ ಪಡೆಯುವುದು ಉತ್ತಮ.
ನಿಮಗೆ ಆಗಾಗ್ಗೆ ತಲೆನೋವು, ಉಸಿರಾಟದ ತೊಂದರೆ, ಮೂಗಿನಿಂದ ರಕ್ತಸ್ರಾವ, ಕಣ್ಣುಗಳು ಕೆಂಪಾಗುವುದ ಅಥವಾ ಹೆಚ್ಚು ಬೆವರುವಿಕೆ ಇದ್ದರೆ ಒಮ್ಮೆ ನಿಮ್ಮ ಬಿಪಿಯನ್ನು ಚೆಕ್ ಮಾಡಲೇ ಬೇಕು.
ಕುಂಬಳಕಾಯಿ ಬೀಜಗಳು
![]()
ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಅಂಶಗಳು ಕುಂಬಳಕಾಯಿ ಬೀಜಗಳಲ್ಲಿ ಕಂಡುಬರುತ್ತವೆ. ಇದು ಅರ್ಜಿನೈನ್ ಅನ್ನು ಹೊಂದಿರುತ್ತದೆ, ಇದು ಅಮೈನೋ ಆಮ್ಲವಾಗಿದೆ ಮತ್ತು ನೈಟ್ರಿಕ್ ಆಕ್ಸೈಡ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಪಬ್ಮೆಡ್ ಸೆಂಟ್ರಲ್ ಸಂಶೋಧನೆಯ ಪ್ರಕಾರ, ನೈಟ್ರಿಕ್ ಆಮ್ಲವು ನರಗಳನ್ನು ವಿಶ್ರಾಂತಿ ಮಾಡುವ ಮೂಲಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಟೊಮೆಟೊ

ಬಿಪಿ ನಿಯಂತ್ರಣಕ್ಕೆ ಟೊಮೇಟೊ ಕೂಡ ಸೇವಿಸಬಹುದು. ಇದು ಲೈಕೋಪೀನ್ ಅನ್ನು ಹೊಂದಿರುತ್ತದೆ, ಇದು ರಕ್ತದ ಹರಿವನ್ನು ಸಾಮಾನ್ಯಗೊಳಿಸಲು ಸಹಾಯ ಮಾಡುತ್ತದೆ. ಇದು ಹೃದ್ರೋಗ ಅಥವಾ ಅದರಿಂದ ಉಂಟಾಗುವ ಸಾವಿನ ಅಪಾಯವನ್ನು ಕಡಿಮೆ ಮಾಡುತ್ತದೆ.
ದ್ವಿದಳ ಧಾನ್ಯಗಳು ಮತ್ತು ಬೇಳೆಗಳು
![]()
ಯಾವಾಗ ನಾವು ಇತರ ಆಹಾರದ ಬದಲು ದ್ವಿದಳ ಧಾನ್ಯಗಳು ಮತ್ತು ಕಾಳುಗಳ ಸೇವನೆಯನ್ನು ಹೆಚ್ಚಿಸುತ್ತೇವೆಯೋ, ಆಗ ಬಿಪಿ ಸಮಸ್ಯೆಯು ಕಡಿಮೆಯಾಗುತ್ತದೆ ಎಂದು ಅನೇಕ ಸಂಶೋಧನೆಗಳು ಹೇಳುತ್ತವೆ. ಅದಕ್ಕಾಗಿಯೇ ನೀವು ಅವುಗಳನ್ನು ನಿಮ್ಮ ಆಹಾರದ ಅವಿಭಾಜ್ಯ ಅಂಗವಾಗಿ ಮಾಡಬೇಕು.
ಕ್ಯಾರೆಟ್

ನೀವು ನಿಯಮಿತವಾಗಿ ಕ್ಯಾರೆಟ್ ಸೇವಿಸುತ್ತಿದ್ದರೆ ಅಧಿಕ ಬಿಪಿ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಏಕೆಂದರೆ ಇದನ್ನು ಸೇವಿಸುವ ಜನರಲ್ಲಿ ರಕ್ತದೊತ್ತಡದ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಕ್ಯಾರೆಟ್ನಲ್ಲಿ ಫೀನಾಲಿಕ್ ಸಂಯುಕ್ತಗಳಿವೆ. ಇವು ಬಿಪಿಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.
ಚಿಯಾ ಮತ್ತು ಅಗಸೆ ಬೀಜಗಳು

ರಕ್ತದೊತ್ತಡ ಹೆಚ್ಚಾದಾಗ ಚಿಯಾ ಬೀಜಗಳು ಮತ್ತು ಅಗಸೆ ಬೀಜಗಳನ್ನು ತಿನ್ನಲು ಪ್ರಾರಂಭಿಸಿ. ಅವುಗಳನ್ನು ಸೇವಿಸುವುದರಿಂದ ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಫೈಬರ್ ಸಿಗುತ್ತದೆ. ಇದು ರೋಗವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
foods which reduce high blood pressure.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm