ಬ್ರೇಕಿಂಗ್ ನ್ಯೂಸ್
12-07-23 06:40 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹ ಚಲನಶೀಲವಾಗಿರಲು ಹಾಗು ಯಾವುದೇ ರೋಗಗಳಿಂದ ದೂರವಿರಲು ಆಹಾರದ ಜೊತೆಗೆ ಪೌಷ್ಟಿಕಾಂಶದಿಂದ ಸಮೃದ್ಧವಾಗಿರುವ ಕೆಲವು ಬೀಜಗಳು, ಒಣಹಣ್ಣುಗಳು ತಿನ್ನಬೇಕು. ಇವುಗಳಲ್ಲಿ ಅತ್ಯುತ್ತಮ ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳಿರುತ್ತವೆ.
ಇತ್ತೀಚೆಗೆ ಅಗಸೆಬೀಜದ ಬಳಕೆ ಜನರಲ್ಲಿ ಹೆಚ್ಚಾಗುತ್ತಿದೆ. ಕಾರಣ ಇದರಲ್ಲಿರುವ ಪೋಷಕಾಂಶಗಳು. ಇದು ಸಂಭಾವ್ಯ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು, ತೂಕವನ್ನು ನಿರ್ವಹಿಸಲು, ಕೊಲೆಸ್ಟ್ರಾಲ್ ಹಾಗು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಗಸೆಬೀಜದ ಮತ್ತಷ್ಟು ಉಪಯೋಗಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ ಓದಿ.
ಹೃದ್ರೋಗದ ಸಮಸ್ಯೆ
ಈ ಸಣ್ಣ ಸಣ್ಣ ಅಗಸೆಬೀಜಗಳು ಅನೇಕ ಹೃದ್ರೋಗದ ಸಮಸ್ಯೆಗಳನ್ನು ತಡೆಯುತ್ತದೆ ಎಂದರೆ ನೀವು ನಂಬಲೇಬೇಕು. ಇದನ್ನು ಸಂಶೋಧನೆಗಳೇ ಸಾಬೀತು ಪಡಿಸಿವೆ ಕೂಡ ಹೌದು. ನಿಯಮಿತವಾಗಿ ಈ ಅಗಸೆಬೀಜವನ್ನು ಸೇವಿಸುವುದರಿಂದ ಉರಿಯೂತದ ಕ್ರಿಯೆ ಮತ್ತು ಹೃದಯ ಬಡಿತವನ್ನು ನಿಯಂತ್ರಣಕ್ಕೆ ತರುತ್ತದೆ.
ಮಧುಮೇಹಕ್ಕೆ ಒಳ್ಳೆಯದು

ಪ್ರಾಥಮಿಕ ಸಂಶೋಧನೆಯ ಪ್ರಕಾರ, ಅಗಸೆಬೀಜದಲ್ಲಿರುವ ಲಿಗ್ನಾನ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಸುಧಾರಿಸುತ್ತದೆ ಎಂದು ತಿಳಿಸಿದೆ. ಪ್ರತಿನಿತ್ಯ ಸಕ್ಕರೆ ಕಾಯಿಲೆ ಇರುವವರು ನಿಯಮಿತವಾಗಿ ಸೇವಿಸುತ್ತಾ ಬಂದರೆ ಮಧುಮೇಹದ ಅಪಾಯವನ್ನು ಕಡಿಮೆ ಮಾಡಿಕೊಳ್ಳಬಹುದು.
ಉರಿಯೂತ
![]()
ಅಗಸೆಬೀಜದಲ್ಲಿ ಉರಿಯೂತವನ್ನು ಕಡಿಮೆ ಮಾಡುವ ಲಕ್ಷಣಗಳಿವೆ. ಅಗಸೆಬೀಜಗಳಲ್ಲಿ ಎಎಲ್ಎ ಮತ್ತು ಲಿಗ್ನಾನ್ಗಳಿವೆ. ಇವೆರಡೂ ಉರಿಯೂತದ ವಿರುದ್ಧ ಹೋರಾಡುತ್ತದೆ. ಒಟ್ಟಾರೆ ಮಾರಣಾಂತಿಕ ಕಾಯಿಲೆಗಳಾದ ಹೃದಯಾಘಾತ ಮತ್ತು ಪಾರ್ಶ್ವವಾಯು ತಡೆಯಲು ಈ ಅಗಸೆಬೀಜಗಳು ದಿವ್ಯೌಷಧವಾಗಿ ಕಾರ್ಯನಿರ್ವಹಿಸುತ್ತದೆ.
ಕ್ಯಾನ್ಸರ್

ಕ್ಯಾನ್ಸರ್ ಎಷ್ಟು ಭಯಾನಕವಾದ ಕಾಯಿಲೆ ಎಂಬುದು ನಿಮಗೆ ಈಗಾಗಲೇ ತಿಳಿದಿದೆ. ಇಂತಹ ಕಾಯಿಲೆಯನ್ನು ಈ ಸಣ್ಣ ಬೀಜಗಳು ತಡೆಯುತ್ತವೆ ಎಂದರೆ ಅಚ್ಚರಿಯಾಗುತ್ತದೆ ಅಲ್ಲವೇ?
ಹೌದು ಇತ್ತೀಚಿನ ಅಧ್ಯಯನದ ಪ್ರಕಾರ, ಈ ಅಗಸೆಬೀಜಗಳು ಸ್ತನ ಕ್ಯಾನ್ಸರ್, ಪ್ರಾಸ್ಟೇಟ್ ಕ್ಯಾನ್ಸರ್ ಮತ್ತು ಕರುಳಿನ ಕ್ಯಾನ್ಸರ್ ವಿರುದ್ಧ ರಕ್ಷಿಸುತ್ತದೆ. ಎಎಲ್ಎ ಎಂದು ಕರೆಯಲ್ಪಡುವ ಅಂಶವು ಗೆಡ್ಡೆಯ ಸಂಭವ ಹಾಗು ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ.
ಈ ಔಷಧೀಯ ಗುಣಗಳಿರುವ ಬೀಜಗಳಲ್ಲಿ ಕೆಲವು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿವೆ. ಇದು ಕ್ಯಾನ್ಸರ್ ಮತ್ತು ಹೃದ್ರೋಗದ ವಿರುದ್ಧ ರಕ್ಷಣೆಗೆ ತನ್ನದೇ ಅದ ಕೊಡುಗೆ ನೀಡುತ್ತದೆ.
ಕೆಲವು ಸಲಹೆಗಳು
![]()
ಅಗಸೆ ಬೀಜವನ್ನು ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ಸೇವಿಸದಿರಲು ಶಿಫಾರಸು ಮಾಡಲಾಗುತ್ತದೆ.
ಮಾರುಕಟ್ಟೆಯಲ್ಲಿ ಅಗಸೆಬೀಜ ಹಾಗು ಅಗಸೆ ಎಣ್ಣೆ ಕೂಡ ದೊರೆಯುತ್ತದೆ. ಎಣ್ಣೆಯ ಬದಲಾಗಿ ಅಗಸೆಬೀಜಗಳನ್ನು ಸೇವಿಸುವುದು ಉತ್ತಮ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
5 amazing benefits of flaxseed.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm