ಬ್ರೇಕಿಂಗ್ ನ್ಯೂಸ್
04-03-21 03:42 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾ ವೈರಸ್ ಮಣಿಸುವ ನಿಟ್ಟಿನಲ್ಲಿ ಭಾರತ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಮೊದಲಿಗೆ ಕೊರೊನಾ ವಾರಿಯರ್ಸ್ಗೆ ಲಸಿಕೆ ನೀಡಿದ ಸರ್ಕಾರ ಇದೀಗ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ಆರೋಗ್ಯ ಸಮಸ್ಯೆ ಇರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ನೋಂದಣಿ ಮಾರ್ಚ್ 1ರಿಂದ ಪ್ರಾರಂಭಿಸಿದೆ.
ಈ ಲಸಿಕೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ದೊರೆಯುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲೂ ಪಡೆಯಬಹುದಾಗಿದೆ. ಈ ಲಸಿಕೆ ಪಡೆಯಲು ಮೊದಲೇ ನೋಂದಣಿ ಮಾಡಬೇಕಾಗಿದ್ದು ಬೆಂಗಳೂರಿನಲ್ಲಿ ಈ ಕೆಳಕಂಡ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಲಭ್ಯವಿದೆ.
ಕೊರೊನಾ ಲಸಿಕೆ ಸಿಗುವ ಆಸ್ಪತ್ರೆಗಳು
* ಫೋರ್ಟಿಸ್ ಆಸ್ಪತ್ರೆ, ಕನ್ನಿಂಗ್ ಹ್ಯಾಮ್ ರಸ್ತೆ
* ಅಪೋಲೋ
* ಕಿಮ್ಸ್
* ನಾರಾಯಣ ಹೃದಯಾಲಯ
* ಸಾಗರ ಆಸ್ಪತ್ರೆ ಜಯನಗರ
* ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್
* ವೈದೇಹಿ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮತ್ತು ರಿಸರ್ಚ್ ಸೆಂಟರ್
* ಹೆಲ್ತ್ಕೇರ್ ಗ್ಲೋಬಲ್ ಎಂಟರ್ ಪ್ರೈಸಸ್ ಲಿ.
* ಪಿಡಿ ಹಿಂದೂಜಾ ಸಿಂಧಿ ಆಸ್ಪತ್ರೆ
* ಫೋರ್ಟಿಸ್ ಆಸ್ಪತ್ರೆ ಲಿಮಿಟೆಡ್
* ಹೊಸ್ಮಟ್ ಆಸ್ಪತ್ರೆ, ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆ ಜಯನಗರ
* ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ-HSR ಲೇಔಟ್
* PAN ನಾಗರಭಾವಿ ಆಸ್ಪತ್ರೆ ಫ್ರೈ. ಲಿ.

ಖಾಸಗಿ ಆಸ್ಪತ್ರೆಯಲ್ಲಿ ಕೊರೊನ ಲಸಿಕೆ ದರ
ನೀವು ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆಯುವುದಾದರೆ ಯಾವುದೇ ದುಡ್ಡು ಖರ್ಚಿಲ್ಲ, ಅದೇ ಖಾಸಗಿ ಆಸ್ಪತ್ರೆಹಯಲ್ಲಿ ಪಡೆಯುವುದಾದರೆ ರೂ. 250 ಪಾವತಿಸಬೇಕಾಗುವುದು.

ನೋಂದಣಿ ಮಾಡಿಕೊಳ್ಳುವುದು ಹೇಗೆ?
ನೀವು ನಿಮ್ಮ ಮೊಬೈಲ್ ನಂಬರ್ ರಿಜಿಸ್ಟರ್ ಮಾಡಿದಾಗ OTP ಬರುತ್ತದೆ, ಆಗ ನಿಮ್ಮ ಅಕೌಂಟ್ ಕ್ರಿಯೇಟ್ ಆಗುತ್ತದೆ, ನಿಮ್ಮ ಮನೆಯ 60 ವರ್ಷ ಮೇಲ್ಪಟ್ಟ ಸದಸ್ಯರ ಅಕೌಂಟ್ ಕೂಡ ಕ್ರಿಯೇಟ್ ಮಾಡಬಹುದು.

ಎಲ್ಲಿ ನೋಂದಣಿ ಮಾಡಬೇಕು?
Co-Win app, ಆರೋಗ್ಯ ಸೇತು app ಅಥವಾ cowin.gov.in ಸೈಟ್ಗೆ ಲಾಗಿನ್ ಆಗಬೇಕು. ನಂತರ ನಿಮ್ಮ ಮೊಬೈಲ್ ಸಂಖ್ಯೆ ನೀಡಬೇಕು. ನಿಮ್ಮ ಅಕೌಂಟ್ ಕ್ರಿಯೇಟ್ ಆದಾಗ OTP ಬರುತ್ತದೆ.
ನಂತರ ನಿಮ್ಮ ಹೆಸರು, ವಯಸ್ಸು, ಲಿಂಗ ನಮೂದಿಸಿ, ನಂತರ ಗುರುತಿನ ದಾಖಲೆ ನೀಡಿ.
45 ವರ್ಷ ಮೇಲ್ಪಟ್ಟವರಾದರೆ ವೈದ್ಯರು ನಿಮ್ಮ ಅನಾರೋಗ್ಯದ ಕುರಿತು ನೀಡಿರುವ ಸರ್ಟಿಫಿಕೇಟ್ ಫ್ರೂಫ್ ಆಗಿ ನೀಡಬೇಕು. ನಂತರ ದಿನಾಂಕ ಹಾಗೂ ಸೆಂಟರ್ (ಕೇಂದ್ರ) ಆಯ್ಕೆ ಮಾಡಿ.
ಒಂದು ಮೊಬೈಲ್ ಸಂಖ್ಯೆಯಿಂದ 4 ಅಪಾಯಿಂಟ್ಮೆಂಟ್ ತೆಗೆದುಕೊಳ್ಳಬಹುದು. ಇನ್ನು ಟೆಕ್ ಬಗ್ಗೆ ಅಷ್ಟು ಅರಿವು ಇಲ್ಲದವರು ಏನು ಮಾಡಬಹುದು? ಅವರು ಸಮೀಪದ ಸೇವಾ ಕೇಂದ್ರಕ್ಕೆ ಹೋಗಿ ರಿಜಿಸ್ಟರ್ ಮಾಡಬಹುದು. ಅಲ್ಲದೆ 1507 ಕಾಲ್ ಸೆಂಟರ್ ನಂಬರ್ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
This News Article Is A Copy Of BOLDSKY
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm