ಬ್ರೇಕಿಂಗ್ ನ್ಯೂಸ್
06-03-21 12:26 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾ ಎಂಬ ಮಹಾಮಾರಿಯನ್ನು ಮುಗಿಸಲು ಭಾರತ ಹಂತ-ಹಂತವಾವಾಗಿ ಸಜ್ಜಾಗುತ್ತಿದೆ. ನಮ್ಮಲ್ಲೇ ತಯಾರಾದ ಕೊರೊನಾ ಲಸಿಕೆ ಕೊರೊನಾ ತಡೆಗಟ್ಟಲು ಸಮರ್ಥವಾಗಿದೆ ಎಂದು ಸಂಶೋಧನೆಗಳಿಂದ ದೃಢಪಟ್ಟಿದ್ದು ಮೊದಲ ಹಂತದಲ್ಲಿ ಎಲ್ಲಾ ಕೊರೊನಾ ವಾರಿಯರ್ಸ್ಗೆ ಈ ಔಷಧಿ ನೀಡಲಾಯಿತು.
ಇದೀಗ ಎರಡನೇ ಹಂತದಲ್ಲಿ ಹಿರಿಯ ನಾಗರಿಕರಿಗೆ ನೀಡಲು ಮುಂದಾಗಿದೆ. ಇನ್ನೇನು ಕೆಲವೇ ತಿಂಗಳಿನಲ್ಲಿ ಭಾರತದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ ಲಭಿಸಲಿದೆ. ಕೊರೊನಾ ಲಸಿಕೆ ನೀಡಲು ಪ್ರಾರಂಭಿಸಿ ತಿಂಗಳು ಕಳೆದರೂ ಜನರಿಗೆ ಇದರ ಕುರಿತು ಇನ್ನೂ ಅನೇಕ ಪ್ರಶ್ನೆಗಳಿವೆ.
ಕೊರೊನಾ ಲಸಿಕೆ ತೆಗೆದುಕೊಳ್ಳುವವರು ಅನುಸರಿಸಬೇಕಾದ ಅನುಸರಿಸಬೇಕಾದ ಅಗ್ಯತ ಮಾರ್ಗಸೂಚಿಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ:

ಭಾರತದಲ್ಲಿ ಲಭ್ಯವಿರುವ ಎರಡೂ ಲಸಿಕೆಗಳು ಸುರಕ್ಷಿತ
ಭಾರತದಲ್ಲಿ ಕೊವಾಕ್ಸಿನ್ ಹಾಗೂ ಕೋವಿಡ್ ಶೀಲ್ಡ್ ಎಂಬ ಎರಡು ಲಸಿಕೆಗಳನ್ನು ನೀಡುತ್ತಿದ್ದು ಈ ಎರಡೂ ಲಸಿಕೆಗಳು ಸುರಕ್ಷಿತವಾಗಿದೆ ಎಂಬುವುದು ಸಂಶೋಧನೆಯಿಂದ ದೃಢಪಟ್ಟಿರುವ ಅಂಶವಾಗಿದೆ. ಪುನೆಯ ಸೆರಂ ಇನ್ಸಿಟ್ಯೂಟ್ ಆಫ್ ಇಂಡಿಯಾ ಕೋವಿಡ್ ಶೀಲ್ಡ್ ತಯಾರಿಸಿದೆ.
ಭಾರತ್ ಬಯೋಟೆಕ್ ಸಂಸ್ಥೆಯು ಕೊವಾಕ್ಸಿನ್ ಲಸಿಕೆಯನ್ನು ಸಿದ್ಧ ಪಡಿಸಿದೆ. ಈ ಲಸಿಕೆಗಳಲ್ಲಿ ಯಾವುದಾದರು ಒಂದು ಬಗೆಯ ಲಸಿಕೆಯನ್ನು ಎರಡು ಡೋಸ್ನಲ್ಲಿ ಅಂದ್ರೆ ಒಮ್ಮೆ ಪಡೆದ ಬಳಿಕ 14 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕು.

ಕೊರೊನಾ ಲಸಿಕೆ ಪಡೆಯುವ ಮುಂಚೆ ಏನು ಮಾಡಬೇಕೆಂದು ನೀಡಿರುವ ಮಾರ್ಗಸೂಚಿ
* ಮೆಡಿಸಿನ್ ಅಥವಾ ಡ್ರಗ್(ಔಷಧ) ಅಲರ್ಜಿ ಇದ್ದವರು ತಜ್ಞರಿಂದ ಕ್ಲಿಯರೆನ್ಸ್ ಪಡೆಯಬೇಕು. ವೈದ್ಯರು ನಿಮಗೆ ಸಿಆರ್ಪಿ (ರಿಯಾಕ್ಟಿವ್ ಪ್ರೊಟಿನ್), ಸಿಬಿಸಿ (ಕಂಪ್ಲೀಟ್ ಬ್ಲಡ್ ಕೌಂಟ್) ಅಥವಾ ಇಮ್ಯುನೋಗ್ಲೋಬುಲಿನ್ ಪರೀಕ್ಷೆ ಮಾಡಿಸುವಂತೆ ಸೂಚಿಸುತ್ತಾರೆ.
* ಒಂದು ವೇಳೆ ವೈದ್ಯರು ಲಸಿಕೆ ಮುಂಚೆ ತೆಗೆದುಕೊಳ್ಳುವ ಔಷಧ ಹಾಗೂ ಆಹಾರದ ಬಗ್ಗೆ ಏನಾದರೂ ಸೂಚಿಸಿದ್ದರೆ ಅದನ್ನು ಪಾಲಿಸಬೇಕು.
* ಈ ಲಸಿಕೆ ಪಡೆಯಲು ಬರುವಾಗ ಯಾವುದೇ ಆತಂಕ ಬೇಡ, ರಿಲ್ಯಾಕ್ಸ್ ಆಗಿರಿ ಎಂದು ವೈದ್ಯರು ಹೇಳುತ್ತಾರೆ.
* ಯಾರಿಗೆ ಮಧುಮೇಹ, ರಕ್ತದೊತ್ತಡ ಇದ್ದವರನ್ನು ಗಮನಿಸುತ್ತಾ ಇರಬೇಕು. ಕ್ಯಾನ್ಸರ್ಗೆ ಕೀಮೋ ಪಡೆದುಕೊಂಡವರನ್ನೂ ಕೂಡ ಲಸಿಕೆ ಬಳಿಕ ಗಮನಿಸಬೇಕು.
* ಅಲ್ಲದೆ ಬ್ಲಡ್ ಪ್ಲಾಸ್ಮಾ ಪಡೆದುಕೊಂಡಿದ್ದರೆ ಅಥವಾ ಮೋನೋಕ್ಲೋನಲ್ ಆ್ಯಂಟಿಬಾಡೀಸ್ ತೆಗೆದುಕೊಂಡಿದ್ದರೆ ಅಥವಾ ಒಂದೂವರೆ ತಿಂಗಳಿನ ಒಳಗೆ ಯಾವುದಾದರೂ ಸೋಂಕು ತಗುಲಿದ್ದರೆ ಅಂಥವರು ಈಗಲೇ ಲಸಿಕೆ ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.

ಲಸಿಕೆ ಪಡೆದ ಬಳಿಕ ಏನು ಮಾಡಬೇಕು?
* ಲಸಿಕೆ ಪಡೆದ ತಕ್ಷಣ ಹೋಗುವಂತಿಲ್ಲ, ಸ್ವಲ್ಪ ಹೊತ್ತು ಆಸ್ಪತ್ರೆಯಲ್ಲೇ ರೆಸ್ಟ್ ಮಾಡಿ ಹೋಗಬೇಕು.
ಹೀಗೆ ಮಾಡುವುದರಿಂದ ಒಂದು ವೇಳೆ ಲಸಿಕೆ ಪಪಡೆದ ತಕ್ಷಣವೇ ಏನಾದರೂ ಅಲರ್ಜಿ ಲಕ್ಷಣ ಕಂಡು ಬಂದರೆ ತಕ್ಷಣವೇ ಚಿಕಿತ್ಸೆ ನೀಡಬಹುದು. ಲಸಿಕೆ ಪಡೆದ ಬಳಿಕ ಏನಾದರೂ ಅಲರ್ಜಿ ಕಾಣಿಸಿದರೆ ಕೂಡಲೇ ಲಸಿಕೆ ಪಡೆದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ.
* ಕೆಲವರಿಗೆ ಲಸಿಕೆ ಪಡೆದ ಬಳಿಕ ಜ್ವರ, ಚುಚ್ಚಿದ ಭಾಗದಲ್ಲಿ ನೋವು ಮುಂತಾದ ಲಕ್ಷಣಗಳು ಕಂಡು ಬರಬಹುದು. ಹೀಗೆ ಕಂಡು ಬಂದರೆ ಹೆದರುವ ಅವಶ್ಯಕತೆ ಇಲ್ಲ.
* ತಲೆಸುತ್ತು, ಚಳಿಯಾಗುವುದು ಈ ರೀತಿಯೆಲ್ಲಾ ಕಂಡು ಬಂದರೆ ಒಂದೆರಡು ದಿನದಲ್ಲಿ ಸರಿ ಹೋಗುವುದು, ಆದ್ದರಿಂದ ಆತಂಕ ಬೇಡ.
This News Article Is A Copy Of BOLDSKY
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm