ಬ್ರೇಕಿಂಗ್ ನ್ಯೂಸ್
10-05-21 01:31 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಎರಡನೇ ಅಲೆ ಶುರುವಾದ ಮೇಲೆ ಕೋವಿಡ್ 19 ವ್ಯಾಕ್ಸಿನ್ ಪಡೆಯಲು ಜನರು ತುಂಬಾನೇ ಉತ್ಸಾಹ ತೋರುತ್ತಿದ್ದಾರೆ. ಕೋವಿಡ್ 19 ಲಸಿಕೆ ಪಡೆದವರಲ್ಲಿ ಕೊರೊನಾ ಸೋಂಕು ತಗುಲಿದರೆ ರೋಗ ಲಕ್ಷಣಗಳು ಗಂಭೀರವಾಗುವುದಿಲ್ಲ ಎಂಬುವುದು ಈಗಾಗಲೇ ಸಾಬೀತಾಗೊದೆ.
ಸಾಕಷ್ಟು ನೀರು ಕುಡಿಯಿರಿ
ದಿನಕ್ಕೆ 8 ಲೋಟ ನೀರು ಕುಡಿಯುವುದು ಆರೋಗ್ಯದ ದೃಷ್ಟಿಯಿಂದ ತುಂಬಾನೇ ಒಳ್ಳೆಯದು. ಆದ್ದರಿಂದ ಲಸಿಕೆ ಪಡೆಯುವ ಮುನ್ನ ಹಾಗೂ ನಂತರ ಸಾಕಷ್ಟು ನೀರು ಕುಡಿಯಬೇಕು. ಬಿಸಿ- ಬಿಸಿ ನೀರು ಕುಡಿಯಿರಿ. ಹಣ್ಣುಗಳ ಜ್ಯೂಸ್ ಮಾಡಿ ಕುಡಿಯಿರಿ. ಇನ್ನು ನೀರಿಗೆ ಅರಿಶಿಣ ಹಾಕಿ ಕುಡಿದರೆ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ನಿಂಬು ಪಾನೀಯ ಕುಡ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಮದ್ಯ ಮುಟ್ಟಬಾರದು
ಮದ್ಯ ಕುಡಿಯುವುದರಿಂದ ಡೀಹೈಡ್ರೇಷನ್ (ನಿರ್ಜಲೀಕರಣ) ಉಂಟಾಗುವುದು. ಈ ಕಾರಣಕ್ಕೆ ಲಸಿಕೆ ಪಡೆಯುವ ಮುನ್ನ, ಪಡೆದ ನಂತರ ಮದ್ಯ ಸೇವಿಸಬೇಡಿ. ಅಲ್ಲದೆ ಮದ್ಯ ಸೇವಿಸುವುದರಿಮದ ರೋಗ ನಿರೋಧಕ ಸಾಮರ್ಥ್ಯ ಕುಗ್ಗಿಸುತ್ತೆ ಎಂದು ಸಂಶೋಧನೆಗಳು ಕೂಡ ಹೇಳಿವೆ.
ಸಂಸ್ಕರಿಸಿದ ಧಾನ್ಯಗಳನ್ನು ಬಳಸಿ
ಬ್ರಿಟಷ್ ಜರ್ನಲ್ ಆಫ್ ನ್ಯೂಟ್ರಿಷಿಯನ್ನಲ್ಲಿ ಪ್ರಕಟವಾದ ವರದಿಯಲ್ಲಿ ಈ ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಂಸ್ಕರಿಸಿದ ಧಾನ್ಯಗಳಿಗಿಂತ ಇಡೀ ಧಾನ್ಯಗಳ ಬಳಕೆ ಒಳ್ಳೆಯದು ಎಂದು ಹೇಳಿದೆ. ಇದರಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆ ತುಂಬಾನೇ ಒಳ್ಳೆಯದು. ಸಂಸ್ಕರಿಸಿದ ಆಹಾರದಲ್ಲಿ ಅಧಿಕ ಪ್ರಮಾಣದ ಕ್ಯಾಲೋರಿ ಇರುವುದರಿಂದ ಅಂಥ ಆಹಾರಗಳನ್ನು ದೂರವಿಡಿ.
ನಾರಿನಂಶವಿರುವ ಹಣ್ಣುಗಳು ಹಾಗೂ ತರಕಾರಿಗಳ ಸೇವನೆ
ಮಾಡಿ ಲಸಿಕೆ ಪಡೆಯುವ ಮುನ್ನ ಹಾಗೂ ಲಸಿಕೆ ಪಡೆದ ಬಳಿಕ ಹಣ್ಣುಗಳನ್ನು ಸೇವಿಸಿ, ತರಕಾರಿಗಳನ್ನು ತಿನ್ನಿ.
ಲಸಿಕೆಗೆ ಮುನ್ನ ಸಮತೋಲಿತ ಆಹಾರ ಸೇವಿಸಿ
ಕೋವಿಡ್ 19 ಲಸಿಕೆ ಪಡೆದ ಕೆಲವರಲ್ಲಿ ತಲೆಸುತ್ತು, ಸುಸ್ತು ಮುಂತಾದ ಅಡ್ಡಪರಿಣಾಮಗಳು ಕಂಡು ಬರುವುದು. ಇದನ್ನು ತಡೆಗಟ್ಟುವಲ್ಲಿ ಸಮತೋಲಿತ ಆಹಾರ ಸೇವನೆ ಸಹಾಯ ಮಾಡುತ್ತೆ. ಲಸಿಕೆ ಪಡೆಯುವ ಮುನ್ನ ಆರೋಗ್ಯಕರವಾದ ಆಹಾರ ಸೇವಿಸಿ, ನೀರು ಕುಡಿದು ಹೋಗಿ.
ಲಸಿಕೆ ಪಡೆದ ದಿನ ಈ ಆಹಾರ ಸೇವಿಸಬೇಡಿ
ನೀವು ಲಸಿಕೆ ಪಡೆದು ಬಂದು ಮೇಲೆ ಪಿಜ್ಜಾ, ನೂಡಲ್ಸ್, ಬನ್, ಮ್ಯಾಗಿ ಈ ರೀತಿಯ ಆಹಾರಗಳನ್ನು ಸೇವಿಸಬೇಡಿ. ಬದಲಿಗೆ ಭಾರತೀಯ ಶೈಲೀಯ ಆಹಾರ ಗಂಜಿ, ಕಿಚಡಿ ಈ ರೀತಿಯ ಆರೋಗ್ಯಕರ ಆಹಾರ ಸೇವಿಸಿ. ಫಾಸ್ಟ್ ಫುಡ್ಗಳಿಂದ ದೂರವಿರಿ. ವಿಟಮಿನ್ ಸಿ, ಸತುವಿನಂಶ ಆಹಾರವನ್ನು ನಿಮ್ಮ ಆಹಾರಕ್ರಮದಲ್ಲಿ ಸೇರಿಸಿ.
ಲಸಿಕೆ ಪಡೆದ ಬಳಿಕ ಅಡ್ಡಪರಿಣಾಮಗಳಾದರೆ
ಲಸಿಕೆ ಪಡೆದ ಬಳಿಕ ಒಮದು ವೇಳೆ ಅಡ್ಡ ಪರಿಣಾಮ ಉಂಟಾದರೆ 48 ಗಂಟೆಯಾದರೂ ಅದರ ಲಕ್ಷಣಗಳು ಕಡಿಮೆಯಾಗದಿದ್ದರೆ ವೈದ್ಯರನ್ನು ಭೇಟಿ ಮಾಡಿ.
(Kannada Copy of Boldsky Kannada)
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm