ಬ್ರೇಕಿಂಗ್ ನ್ಯೂಸ್
14-05-21 02:09 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಯೋಗ ಪ್ರತಿಯೊಬ್ಬರ ಆರೋಗ್ಯ ಹಾಗೂ ಮನಸ್ಸನ್ನು ಉತ್ತಮ ಸ್ಥಿತಿಯಲ್ಲಿಡಲು ಬಹಳ ಸಹಕಾರಿ. ಅದರಲ್ಲೂ ಗರ್ಭಾವಸ್ಥೆಯಲ್ಲಿ ಯೋಗ ಮಾಡುವುದರಿಂದ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿರುತ್ತಾರೆ. ಜೊತೆಗೆ ಹೆರಿಗೆಯ ಸಮಯದಲ್ಲಿ ತೊಡಕುಗಳು ಕಡಿಮೆಯಾಗುತ್ತವೆ.
ಆದರೆ ಯೋಗ ಮಾಡುವಾಗ ಯಾವ ಭಂಗಿಯನ್ನು ಯಾವಾಗ ಮಾಡಬೇಕು ಮತ್ತು ಯಾವಾಗ ಯಾವ ಭಂಗಿಯನ್ನು ಮಾಡಬಾರದು ಎಂಬುದು ನಿಮಗೆ ತಿಳಿದಿರಬೇಕು ಏಕೆಂದರೆ ಗರ್ಭಾವಸ್ಥೆಯಲ್ಲಿ ಎಲ್ಲಾ ಆಸನವನ್ನು ಮಾಡಲು ಸಾಧ್ಯವಿಲ್ಲ. ಈ ಲೇಖನದಲ್ಲಿ ಗರ್ಭೀಣಿಯರು ಯೋಗ ಮಾಡುವಾಗ ನೆನಪಿಡಬೇಕಾದ ಅಂಶಗಳ ಬಗ್ಗೆ ವಿವರಿಸಿದ್ದೇವೆ.

ಈ ಆಸನಗಳನ್ನು ಮಾಡಬೇಡಿ:
ಗರ್ಭಧಾರಣೆಯ ಆರಂಭದಿಂದಲೂ ನೀವು ಈ ಆಸನಗಳನ್ನು ಮಾಡಬಾರದು, ಉದಾಹರಣೆಗೆ ಚಕ್ರಾಸನ, ನೌಕಾಸನ, ಭುಜಂಗಾಸನ, ಅರ್ಧಮತ್ಯಾಂದ್ರಸಾನ, ಭುಜಂಗಾಸನ, ಧನುರಾಸನ ಮತ್ತು ಇತರ ಕಿಬ್ಬೊಟ್ಟೆಯ ಆಸನಗಳು ಮತ್ತು ಕಿಬ್ಬೊಟ್ಟೆಯನ್ನು ಹಿಗ್ಗಿಸುವ ಆಸನಗಳನ್ನು ಮಾಡಬೇಡಿ. ಹೊಟ್ಟೆಯಲ್ಲಿ ಜೀವ ಹೊತ್ತಿರುವಾಗ ಈ ಆಸನಗಳನ್ನು ಮಾಡುವುದು ಅಪಾಯಕಾರಿ. ನೀವು ಮಾಡುತ್ತಿರುವ ಎಲ್ಲಾ ಆಸನಗಳ ಬಗ್ಗೆ ಯೋಗ ತರಬೇತುದಾರರ ಸಲಹೆಯನ್ನು ತೆಗೆದುಕೊಳ್ಳಿ.

ಈ ವಿಷಯಗಳನ್ನು ನೆನಪಿನಲ್ಲಿಡಿ:
ಗರ್ಭಧಾರಣೆಯ ಮೊದಲ ಮೂರು ತಿಂಗಳಲ್ಲಿ ನಿಲ್ಲುವ ಆಸನಗಳನ್ನು ಮಾಡಬೇಕು. ಇದನ್ನು ಮಾಡುವುದರಿಂದ, ಪಾದಗಳ ಸ್ನಾಯುಗಳು ಬಲಗೊಳ್ಳುತ್ತವೆ, ದೇಹದಲ್ಲಿ ರಕ್ತ ಪರಿಚಲನೆಗೊಳ್ಳುತ್ತದೆ, ದೇಹವು ಶಕ್ತಿಯನ್ನು ಪಡೆಯುತ್ತದೆ. ಜೊತೆಗೆ ಪಾದಗಳಲ್ಲಿನ ಊತ ಮತ್ತು ಬಿಗಿತವನ್ನು ಸಹ ತೆಗೆದುಹಾಕುತ್ತದೆ. ಜೊತೆಗೆ ಗರ್ಭಧಾರಣೆಯ ಆರಂಭದಲ್ಲಿ ನಿಮ್ಮ ಭುಜಗಳು ಮತ್ತು ಮೇಲಿನ ಬೆನ್ನನ್ನು ಬಲಪಡಿಸುವ ಯೋಗವನ್ನು ಮಾಡಿ.

ಪ್ರಾಣಾಯಾಮದತ್ತ ಗಮನಹರಿಸಿ:
ಗರ್ಭಧಾರಣೆಯ ನಡುವಿನ ಮೂರು ತಿಂಗಳಲ್ಲಿ ನೀವು ಹೆಚ್ಚು ಚುರುಕಾಗಿರುವ ಭಂಗಿಗಳನ್ನು ಮಾಡಬಾರದು. ಆ ಮಧ್ಯದ ಮೂರು ತಿಂಗಳಲ್ಲಿ ಆಸನಗಳಿಗೆ ಗಮನ ಕೊಡುವ ಬದಲು, ಪ್ರಾಣಾಯಾಮ ಮತ್ತು ಧ್ಯಾನ ಮಾಡಿ, ನೀವು ಇದರಿಂದ ಹೆಚ್ಚಿನ ಲಾಭ ಪಡೆಯುತ್ತೀರಿ. ಧ್ಯಾನ ಮತ್ತು ಪ್ರಾಣಾಯಾಮ ನಿಮ್ಮ ಮನಸ್ಸನ್ನು ಶಾಂತಗೊಳಿಸಿ, ಎಲ್ಲಾ ಒತ್ತಡದಿಂದ ದೂರಮಾಡುತ್ತದೆ.

ಈ ಸಮಯದಲ್ಲಿ ಯೋಗ ಮಾಡಬೇಡಿ:
ಗರ್ಭಧಾರಣೆಯ ನಾಲ್ಕನೇ ಮತ್ತು ಐದನೇ ತಿಂಗಳಲ್ಲಿ, ಯಾವುದೇ ಯೋಗವನ್ನು ಮಾಡಬಾರದು ಏಕೆಂದರೆ ಈ ಸಮಯವು ಗರ್ಭಧಾರಣೆಯ ಪ್ರಮುಖ ಸಮಯವಾಗಿದೆ, ಆದ್ದರಿಂದ ನಿಮ್ಮ ಬಗ್ಗೆ ವಿಶೇಷ ಕಾಳಜಿ ವಹಿಸಿ.

ಪ್ರತಿ ಭಂಗಿಯನ್ನು ಮಾಡಬೇಡಿ:
ಈ ಸಮಯದಲ್ಲಿ, ನೀವು ಮಾಡಲು ಸಮರ್ಥವಾಗಿರುವ ಆಸನವನ್ನು ಮಾತ್ರ ಮಾಡಿ. ದೇಹದ ಸಾಮರ್ಥ್ಯಕ್ಕೆ ಅನುಗುಣವಾಗಿ ಆಸನ ಮಾಡಿ. ನಿಮ್ಮ ದೇಹಕ್ಕೆ ಹೆಚ್ಚು ಒತ್ತಡ ನೀಡಬೇಡಿ. ನಿಮಗೆ ಯಾವುದೋ ಸಾಧ್ಯವೋ, ಆ ಭಂಗಿಯನ್ನು ಮಾಡಿದರೆ ಸಾಕು. ನೀವು ಪ್ರತಿ ಆಸನವನ್ನು ಮಾಡುವುದು ಅನಿವಾರ್ಯವಲ್ಲ ಎಂಬುದನ್ನು ನೆನಪಿನಲ್ಲಿಡಿ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm