ಬ್ರೇಕಿಂಗ್ ನ್ಯೂಸ್
14-05-21 02:36 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಲಸಿಕೆ ಬಂದಾಗ ಲಸಿಕೆ ಹಾಕಿಕೊಳ್ಳಿ ಎಂದು ಸರ್ಕಾರ ಹೇಳಿದಾಗ ಹಿಂದೇಟು ಹಾಕಿದ್ದ ಜನರು ಇದೀಗ ಕೊರೊನಾ 2ನೇ ಅಲೆಯಲ್ಲಿ ಲಸಿಕೆಯ ಮಹತ್ವ ಅರಿತು ಲಸಿಕೆ ಪಡೆಯಲು ಮುಗಿ ಬೀಳುತ್ತಿದ್ದಾರೆ.
ಕೊರೊನಾ ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲಿದರೂ ರೋಗ ಲಕ್ಷಣಗಳು ಗಂಭೀರವಾಗದೆ ಬೇಗನೆ ಚೇತರಿಸಿಕೊಳ್ಳುತ್ತಿರುವುದರಿಂದ ಜನರಿಗೆ ಲಸಿಕೆ ಮೇಲೆ ವಿಶ್ವಾಸ ಮೂಡಿ ಲಸಿಕೆ ಪಡೆಯಲು ಉತ್ಸಾಹ ತೋರಿಸುತ್ತಿದ್ದಾರೆ.

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದರೆ 6 ತಿಂಗಳ ಬಳಿಕ ಲಸಿಕೆ ಪಡೆಯಬೇಕು, ಏಕೆ?
ಕೊರೊನಾ ಪಾಸಿಟಿವ್ ಬಂದ ಚೇರಿಸಿಕೊಂಡವರು 6 ತಿಂಗಳವರೆಗೆ ಲಸಿಕೆ ಪಡೆಯಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಒಮ್ಮೆ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಸಿದ ಬಳಿಕ 6 ತಿಂಗಳ ಒಳಗೆ ಲಸಿಕೆ ಪಡೆದರೆ ಆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿರುವುದಿಲ್ಲ. ಅದೇ ಆರು ತಿಂಗಳ ಬಳಿಕ ಲಸಿಕೆ ಪಡೆದರೆ ಆ ಲಸಿಕೆ ತುಂಬಾ ಉತ್ತಮ ಪ್ರಭಾವ ಬೀರುವುದಾಗಿ ಸಂಶೋಧನೆಯಿಂದ ದೃಢಪಟ್ಟಿದೆ.
ಮೊದಲ ಡೋಸ್ ಪಡೆದ ಬಳಿಕ ಕೋವಿಡ್ 19 ಬಂದಿದ್ದರೆ ಕೊರೊನಾ ಲಸಿಕೆ ಮೊದಲ ಡೋಸ್ ಪಡೆದ ಬಳಿಕ ಕೊರೊನಾ ಬಂದಿದ್ದರೆ ಅಂಥವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ 8 ವಾರಗಳ ಬಳಿಕ ಎರಡನೇ ಡೋಸ್ ಪಡೆಯಬಹುದಾಗಿದೆ.

ಕೋವಿಶೀಲ್ಡ್ ಮೊದಲನೇ ಹಾಗೂ 2ನೇ ಡೋಸ್ ನಡುವೆ ಅಂತರ ಹೆಚ್ಚಾಗಿದೆ
ಕೋವಿಶೀಲ್ಡ್ ಮೊದಲ ಡೋಸ್ ಪಡೆದ ಬಳಿಕ ಎರಡನೇ ಡೋಸ್ ಅಂತರವನ್ನು 12-16 ವಾರಕ್ಕೆ ಏರಿಸಬೇಕೆಂದೂ ಕೂಡ ಹೇಳಿದ್ದಾರೆ. ಈಗ ಕೋವಿಶೀಲ್ಡ್ ಲಸಿಕೆಯನ್ನು 4-8 ವಾರಗಳ ಅಂತರದಲ್ಲಿ ನೀಡಲಾಗುತ್ತಿತ್ತು. ಕೊವಾಕ್ಸಿನ್ ಡೋಸ್ ತೆಗೆದುಕೊಳ್ಳುವ ಅಂತರದಲ್ಲಿ ಯಾವುದೇ ವ್ಯತ್ಯಾಸವಿಲ್ಲ.

ಕಡಿಮೆ ಅಂತರಕ್ಕಿಂತ ಅದಕ್ಕೆ ಅಂತರವಿದ್ದರೆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗುವುದು
ಕೋವಿಡ್ 19 ಲಸಿಕೆ ಮೊದಲ ಡೋಸ್ ಪಡೆದು 3 ತಿಂಗಳ ಬಳಿಕ ಎರಡನೇ ಡೋಸ್ ಪಡೆಯುವುದರಿಂದ ಕೊರೊನಾ ಲಸಿಕೆ ಹೆಚ್ಚು ಪ್ರಯೋಜಕಾರಿಯಾಗುವುದು ಎಂದು ಅಧ್ಯಯನದಿಂದ ತಿಳಿದು ಬಂದಿದೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚು ಸಮಯ ಉಳಿಯುತ್ತದೆ.

ಗರ್ಭೀಣಿಯರು ಲಸಿಕೆ ಪಡೆಯಬಹುದೇ?
NTAGI (The National Technical Advisory Group on Immunisation) ಗರ್ಭಿಣಿಯರು ಕೂಡ ಕೊರೊನಾ ಲಸಿಕೆ ಪಡೆಯಬಹುದೆಂದು ಸಲಹೆ ನೀಡಿದೆ. ಕೋವಿಶೀಲ್ಡ್ ಹಾಗೂ ಕೋವಾಕ್ಸಿನ್ನಲ್ಲಿ ಯಾವ ಲಸಿಕೆಯನ್ನಾದರೂ ಎರಡು ಡೋಸ್ನಂತೆ ತೆಗೆದುಕೊಳ್ಳಬಹುದಾಗಿದೆ. ಅಲ್ಲದೆ ಎದೆಹಾಲುಣಿಸುವ ತಾಯಂದಿರು ಕೂಡ ಲಸಿಕೆ ಪಡೆಯಬಹುದು ಎಂದು ಸೂಚಿಸಿದೆ.
(Kannada Copy of Boldsky Kannada)
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm