ಬ್ರೇಕಿಂಗ್ ನ್ಯೂಸ್
14-05-21 02:36 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಲಸಿಕೆ ಬಂದಾಗ ಲಸಿಕೆ ಹಾಕಿಕೊಳ್ಳಿ ಎಂದು ಸರ್ಕಾರ ಹೇಳಿದಾಗ ಹಿಂದೇಟು ಹಾಕಿದ್ದ ಜನರು ಇದೀಗ ಕೊರೊನಾ 2ನೇ ಅಲೆಯಲ್ಲಿ ಲಸಿಕೆಯ ಮಹತ್ವ ಅರಿತು ಲಸಿಕೆ ಪಡೆಯಲು ಮುಗಿ ಬೀಳುತ್ತಿದ್ದಾರೆ.
ಕೊರೊನಾ ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲಿದರೂ ರೋಗ ಲಕ್ಷಣಗಳು ಗಂಭೀರವಾಗದೆ ಬೇಗನೆ ಚೇತರಿಸಿಕೊಳ್ಳುತ್ತಿರುವುದರಿಂದ ಜನರಿಗೆ ಲಸಿಕೆ ಮೇಲೆ ವಿಶ್ವಾಸ ಮೂಡಿ ಲಸಿಕೆ ಪಡೆಯಲು ಉತ್ಸಾಹ ತೋರಿಸುತ್ತಿದ್ದಾರೆ.

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದರೆ 6 ತಿಂಗಳ ಬಳಿಕ ಲಸಿಕೆ ಪಡೆಯಬೇಕು, ಏಕೆ?
ಕೊರೊನಾ ಪಾಸಿಟಿವ್ ಬಂದ ಚೇರಿಸಿಕೊಂಡವರು 6 ತಿಂಗಳವರೆಗೆ ಲಸಿಕೆ ಪಡೆಯಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಒಮ್ಮೆ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಸಿದ ಬಳಿಕ 6 ತಿಂಗಳ ಒಳಗೆ ಲಸಿಕೆ ಪಡೆದರೆ ಆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿರುವುದಿಲ್ಲ. ಅದೇ ಆರು ತಿಂಗಳ ಬಳಿಕ ಲಸಿಕೆ ಪಡೆದರೆ ಆ ಲಸಿಕೆ ತುಂಬಾ ಉತ್ತಮ ಪ್ರಭಾವ ಬೀರುವುದಾಗಿ ಸಂಶೋಧನೆಯಿಂದ ದೃಢಪಟ್ಟಿದೆ.
ಮೊದಲ ಡೋಸ್ ಪಡೆದ ಬಳಿಕ ಕೋವಿಡ್ 19 ಬಂದಿದ್ದರೆ ಕೊರೊನಾ ಲಸಿಕೆ ಮೊದಲ ಡೋಸ್ ಪಡೆದ ಬಳಿಕ ಕೊರೊನಾ ಬಂದಿದ್ದರೆ ಅಂಥವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ 8 ವಾರಗಳ ಬಳಿಕ ಎರಡನೇ ಡೋಸ್ ಪಡೆಯಬಹುದಾಗಿದೆ.

ಕೋವಿಶೀಲ್ಡ್ ಮೊದಲನೇ ಹಾಗೂ 2ನೇ ಡೋಸ್ ನಡುವೆ ಅಂತರ ಹೆಚ್ಚಾಗಿದೆ
ಕೋವಿಶೀಲ್ಡ್ ಮೊದಲ ಡೋಸ್ ಪಡೆದ ಬಳಿಕ ಎರಡನೇ ಡೋಸ್ ಅಂತರವನ್ನು 12-16 ವಾರಕ್ಕೆ ಏರಿಸಬೇಕೆಂದೂ ಕೂಡ ಹೇಳಿದ್ದಾರೆ. ಈಗ ಕೋವಿಶೀಲ್ಡ್ ಲಸಿಕೆಯನ್ನು 4-8 ವಾರಗಳ ಅಂತರದಲ್ಲಿ ನೀಡಲಾಗುತ್ತಿತ್ತು. ಕೊವಾಕ್ಸಿನ್ ಡೋಸ್ ತೆಗೆದುಕೊಳ್ಳುವ ಅಂತರದಲ್ಲಿ ಯಾವುದೇ ವ್ಯತ್ಯಾಸವಿಲ್ಲ.

ಕಡಿಮೆ ಅಂತರಕ್ಕಿಂತ ಅದಕ್ಕೆ ಅಂತರವಿದ್ದರೆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗುವುದು
ಕೋವಿಡ್ 19 ಲಸಿಕೆ ಮೊದಲ ಡೋಸ್ ಪಡೆದು 3 ತಿಂಗಳ ಬಳಿಕ ಎರಡನೇ ಡೋಸ್ ಪಡೆಯುವುದರಿಂದ ಕೊರೊನಾ ಲಸಿಕೆ ಹೆಚ್ಚು ಪ್ರಯೋಜಕಾರಿಯಾಗುವುದು ಎಂದು ಅಧ್ಯಯನದಿಂದ ತಿಳಿದು ಬಂದಿದೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚು ಸಮಯ ಉಳಿಯುತ್ತದೆ.

ಗರ್ಭೀಣಿಯರು ಲಸಿಕೆ ಪಡೆಯಬಹುದೇ?
NTAGI (The National Technical Advisory Group on Immunisation) ಗರ್ಭಿಣಿಯರು ಕೂಡ ಕೊರೊನಾ ಲಸಿಕೆ ಪಡೆಯಬಹುದೆಂದು ಸಲಹೆ ನೀಡಿದೆ. ಕೋವಿಶೀಲ್ಡ್ ಹಾಗೂ ಕೋವಾಕ್ಸಿನ್ನಲ್ಲಿ ಯಾವ ಲಸಿಕೆಯನ್ನಾದರೂ ಎರಡು ಡೋಸ್ನಂತೆ ತೆಗೆದುಕೊಳ್ಳಬಹುದಾಗಿದೆ. ಅಲ್ಲದೆ ಎದೆಹಾಲುಣಿಸುವ ತಾಯಂದಿರು ಕೂಡ ಲಸಿಕೆ ಪಡೆಯಬಹುದು ಎಂದು ಸೂಚಿಸಿದೆ.
(Kannada Copy of Boldsky Kannada)
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm