ಬ್ರೇಕಿಂಗ್ ನ್ಯೂಸ್
14-05-21 02:36 pm Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಲಸಿಕೆ ಬಂದಾಗ ಲಸಿಕೆ ಹಾಕಿಕೊಳ್ಳಿ ಎಂದು ಸರ್ಕಾರ ಹೇಳಿದಾಗ ಹಿಂದೇಟು ಹಾಕಿದ್ದ ಜನರು ಇದೀಗ ಕೊರೊನಾ 2ನೇ ಅಲೆಯಲ್ಲಿ ಲಸಿಕೆಯ ಮಹತ್ವ ಅರಿತು ಲಸಿಕೆ ಪಡೆಯಲು ಮುಗಿ ಬೀಳುತ್ತಿದ್ದಾರೆ.
ಕೊರೊನಾ ಲಸಿಕೆ ಪಡೆದವರಿಗೆ ಕೊರೊನಾ ಸೋಂಕು ತಗುಲಿದರೂ ರೋಗ ಲಕ್ಷಣಗಳು ಗಂಭೀರವಾಗದೆ ಬೇಗನೆ ಚೇತರಿಸಿಕೊಳ್ಳುತ್ತಿರುವುದರಿಂದ ಜನರಿಗೆ ಲಸಿಕೆ ಮೇಲೆ ವಿಶ್ವಾಸ ಮೂಡಿ ಲಸಿಕೆ ಪಡೆಯಲು ಉತ್ಸಾಹ ತೋರಿಸುತ್ತಿದ್ದಾರೆ.

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದರೆ 6 ತಿಂಗಳ ಬಳಿಕ ಲಸಿಕೆ ಪಡೆಯಬೇಕು, ಏಕೆ?
ಕೊರೊನಾ ಪಾಸಿಟಿವ್ ಬಂದ ಚೇರಿಸಿಕೊಂಡವರು 6 ತಿಂಗಳವರೆಗೆ ಲಸಿಕೆ ಪಡೆಯಬಾರದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಒಮ್ಮೆ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಸಿದ ಬಳಿಕ 6 ತಿಂಗಳ ಒಳಗೆ ಲಸಿಕೆ ಪಡೆದರೆ ಆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿರುವುದಿಲ್ಲ. ಅದೇ ಆರು ತಿಂಗಳ ಬಳಿಕ ಲಸಿಕೆ ಪಡೆದರೆ ಆ ಲಸಿಕೆ ತುಂಬಾ ಉತ್ತಮ ಪ್ರಭಾವ ಬೀರುವುದಾಗಿ ಸಂಶೋಧನೆಯಿಂದ ದೃಢಪಟ್ಟಿದೆ.
ಮೊದಲ ಡೋಸ್ ಪಡೆದ ಬಳಿಕ ಕೋವಿಡ್ 19 ಬಂದಿದ್ದರೆ ಕೊರೊನಾ ಲಸಿಕೆ ಮೊದಲ ಡೋಸ್ ಪಡೆದ ಬಳಿಕ ಕೊರೊನಾ ಬಂದಿದ್ದರೆ ಅಂಥವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ 8 ವಾರಗಳ ಬಳಿಕ ಎರಡನೇ ಡೋಸ್ ಪಡೆಯಬಹುದಾಗಿದೆ.

ಕೋವಿಶೀಲ್ಡ್ ಮೊದಲನೇ ಹಾಗೂ 2ನೇ ಡೋಸ್ ನಡುವೆ ಅಂತರ ಹೆಚ್ಚಾಗಿದೆ
ಕೋವಿಶೀಲ್ಡ್ ಮೊದಲ ಡೋಸ್ ಪಡೆದ ಬಳಿಕ ಎರಡನೇ ಡೋಸ್ ಅಂತರವನ್ನು 12-16 ವಾರಕ್ಕೆ ಏರಿಸಬೇಕೆಂದೂ ಕೂಡ ಹೇಳಿದ್ದಾರೆ. ಈಗ ಕೋವಿಶೀಲ್ಡ್ ಲಸಿಕೆಯನ್ನು 4-8 ವಾರಗಳ ಅಂತರದಲ್ಲಿ ನೀಡಲಾಗುತ್ತಿತ್ತು. ಕೊವಾಕ್ಸಿನ್ ಡೋಸ್ ತೆಗೆದುಕೊಳ್ಳುವ ಅಂತರದಲ್ಲಿ ಯಾವುದೇ ವ್ಯತ್ಯಾಸವಿಲ್ಲ.

ಕಡಿಮೆ ಅಂತರಕ್ಕಿಂತ ಅದಕ್ಕೆ ಅಂತರವಿದ್ದರೆ ಲಸಿಕೆ ಹೆಚ್ಚು ಪರಿಣಾಮಕಾರಿಯಾಗುವುದು
ಕೋವಿಡ್ 19 ಲಸಿಕೆ ಮೊದಲ ಡೋಸ್ ಪಡೆದು 3 ತಿಂಗಳ ಬಳಿಕ ಎರಡನೇ ಡೋಸ್ ಪಡೆಯುವುದರಿಂದ ಕೊರೊನಾ ಲಸಿಕೆ ಹೆಚ್ಚು ಪ್ರಯೋಜಕಾರಿಯಾಗುವುದು ಎಂದು ಅಧ್ಯಯನದಿಂದ ತಿಳಿದು ಬಂದಿದೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚು ಸಮಯ ಉಳಿಯುತ್ತದೆ.

ಗರ್ಭೀಣಿಯರು ಲಸಿಕೆ ಪಡೆಯಬಹುದೇ?
NTAGI (The National Technical Advisory Group on Immunisation) ಗರ್ಭಿಣಿಯರು ಕೂಡ ಕೊರೊನಾ ಲಸಿಕೆ ಪಡೆಯಬಹುದೆಂದು ಸಲಹೆ ನೀಡಿದೆ. ಕೋವಿಶೀಲ್ಡ್ ಹಾಗೂ ಕೋವಾಕ್ಸಿನ್ನಲ್ಲಿ ಯಾವ ಲಸಿಕೆಯನ್ನಾದರೂ ಎರಡು ಡೋಸ್ನಂತೆ ತೆಗೆದುಕೊಳ್ಳಬಹುದಾಗಿದೆ. ಅಲ್ಲದೆ ಎದೆಹಾಲುಣಿಸುವ ತಾಯಂದಿರು ಕೂಡ ಲಸಿಕೆ ಪಡೆಯಬಹುದು ಎಂದು ಸೂಚಿಸಿದೆ.
(Kannada Copy of Boldsky Kannada)
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm