ಬ್ರೇಕಿಂಗ್ ನ್ಯೂಸ್
18-05-21 11:44 am Reena TK, BoldSky Kannada ಡಾಕ್ಟರ್ಸ್ ನೋಟ್
ಕೋವಿಡ್ 19 ನಿಯಂತ್ರಣಕ್ಕೆ ಯಾವ ಔಷಧ ಒಳ್ಳೆಯದು ಎಂಬುವುದರ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ಈಗಾಗಲೇ ಭಾರತದಲ್ಲಿ ಕೊರೊನಾ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೊವಾಕ್ಸಿನ್ ಹಾಗೂ ಕೊವಿಶೀಲ್ಡ್ ಎಂಬ ಎರಡು ಲಸಿಕೆಗಳನ್ನು ನೀಡಲಾಗುತ್ತಿದೆ.
ಇದರ ಜೊತೆಗೆ DRDO (Drugs Controller General of India) ಕೂಡ ಕೊರೊನಾಗೆ 2-DG( 2-deoxy-D-glucose) ಎಂಬ ಔಷಧವನ್ನು ಕಂಡು ಹಿಡಿದಿದೆ. ಮೇ. 15ಕ್ಕೆ ಈ ಔಷಧಿಯನ್ನು ಕೊರೊನಾ ಸೋಂಕಿತರಿಗೆ ನೀಡಲು ಅನುಮತಿ ಸಿಕ್ಕಿದೆ. ಇದೀಗ ಈ ಔಷಧಿ ತುಂಬಾನೇ ಸದ್ದು ಮಾಡುತ್ತಿದೆ.
2 ಡಿಯೋಕ್ಸಿ ಡಿ ಗ್ಲುಕೋಸ್ (2-DG) ಔಷಧ ಬಳಸುವುದು ಹೇಗೆ?
ಇದು ಪೌಡರ್ ರೂಪದ ಔಷಧವಾಗಿದ್ದು ಸ್ಯಾಚೆಟ್ನಲ್ಲಿ ದೊರೆಯುತ್ತದೆ. ಇದನ್ನು ನೀರಿನಲ್ಲಿ ಕಲೆಸಿ ಕುಡಿಯಬೇಕು. ಇದು ಸೋಂಕಾಣುಗಳು ಜೀವ ಕಣಗಳಿಗೆ ಹಾನಿ ಮಾಡುವುದನ್ನು ತಡೆಗಟ್ಟುತ್ತದೆ, ವೈರಸ್ ಬೆಳವಣಿಗೆ ತಡೆಗಟ್ಟಿ, ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಈ ಔಷಧ ಬಳಸುವುದರಿಂದ ಸೋಂಕಿತರಲ್ಲಿ ಆಕ್ಸಿಜನ್ ಕೊರತೆ ಉಂಟಾಗುವುದನ್ನು ತಡೆಗಟ್ಟಬಹುದು ಎಂಬ ಸರ್ಕಾರದ ಭರವಸೆಯಾಗಿದೆ. ಇದು ಆಸ್ಪತ್ರೆಯಲ್ಲಿರುವ ಸೋಂಕಿತರು ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತೆ.

ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
2-DGಯನ್ನು ಸೋಂಕಿತರಿಗೆ ನೀಡಿದಾಗ ಅವರು ಬೇಗನೆ ಚೇತರಿಸಿಕೊಂಡು ವರದಿ ನೆಗೆಟಿವ್ ಬರುತ್ತಿರುವುದು ಸಾಬೀತಾಗಿದೆ. ಈ ಔಷಧ ದೇಹದಲ್ಲಿ ಶಕ್ತಿ ಕಣಗಳನ್ನು ಉತ್ಪಾದಿಸಿ, ವೈರಸ್ ಬೆಳವಣಿಗೆಯನ್ನು ತಡೆಗಟ್ಟುತ್ತದೆ.

ಈ ಔಷಧ ಎಷ್ಟು ಪರಿಣಾಮಕಾರಿ
ಕೊರೊನಾ 2ನೇ ಅಲೆಯಲ್ಲಿ ಸಾಕಷ್ಟು ಸೋಂಕಿತರಲ್ಲಿ ಆಕ್ಸಿಜನ್ ಕೊರತೆ ಉಂಟಾಗಿತ್ತು. ಈ ಔಷಧ ಆಕ್ಸಿಜನ್ ಕೊರತೆ ಉಂಟಾಗುವುದನ್ನು ತಡೆಗಟ್ಟಿ ಅಮೂಲ್ಯ ಜೀವಗಳನ್ನು ಉಳಿಸಲು ಸಹಾಯ ಮಾಡುತ್ತೆ. ಅಲ್ಲದೆ ಆಸ್ಪತ್ರೆಯಲ್ಲಿರುವ ಸೋಂಕಿತರು ಬೇಗನೆ ಚೇತರಿಸಿಕೊಳ್ಳಲು ಕೂಡ ಸಹಾಯ ಮಾಡುತ್ತೆ. ಆಕ್ಸಿಜನ್ ಸಿಲೆಂಡರ್ನಿಂದ ಉಸಿರಾಡುತ್ತಿರುವವರು ಸ್ವಾಭಾವಿಕವಾಗಿ ಉಸಿರಾಡುವಂತಾಗಲು ಈ ಔಷಧ ಸಹಕಾರಿ ಎಂಬುವುದು ಅಧ್ಯಯನದಿಂದ ಸಾಬೀತಾಗಿದೆ.

ಇದರ ಬೆಲೆ ಎಷ್ಟು
ನ್ಯೂಸ್ 18 ವರದಿ ಪ್ರಕಾರ ಇದರ ಬೆಲೆಯನ್ನು ಇನ್ನೂ ನಿಗದಿ ಪಡಿಸಿಲ್ಲ, ಅಂದಾಜು ರೂ 500-600 ಇರಬಹುದು ಎಂದು ಹೇಳಲಾಗುತ್ತಿದೆ. ಡಾ, ರೆಡ್ಡಿ ಲ್ಯಾಬ್ ಹಾಗೂ DRDO ಜೊತೆಯಾಗಿ ಈ ಔಷಧ ತಯಾರಿಸಿದ್ದು ದೇಶದಲ್ಲಿ ಎಲ್ಲಾ ಕಡೆ ಇದು ಸುಲಭವಾಗಿ ಸಿಗುವಂತಾಗುವುದು.
(Kannada Copy of Boldsky Kannada)
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm