ಬ್ರೇಕಿಂಗ್ ನ್ಯೂಸ್
18-05-21 11:54 am Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾ ಲಸಿಕೆ ಕೊರೊನಾದಿಂದ ನಮ್ಮನ್ನು ರಕ್ಷಿಸುವುದಾದರೂ ಇದನ್ನು ತೆಗೆದುಕೊಂಡಾಗ ಕೆಲವರಲ್ಲಿ ಕೆಲವೊಂದು ಬಗೆಯ ಅಡ್ಡಪರಿಣಾಮ ಉಂಟಾಗುವುದುಂಟು. ಕೆಲವರಲ್ಲಿ ಲಸಿಕೆ ಚುಚ್ಚಿದ ಜಾಗದಲ್ಲಿ ಊತ, ಇನ್ನು ಕೆಲವರಲ್ಲಿ ಜ್ವರ ಈ ರೀತಿಯ ಅಡ್ಡಪರಿಣಾಮಗಳು ಕಂಡು ಬಂದಿದ್ದೆವು.
ಆದರೆ ಕೊವಿಶೀಲ್ಡ್ ಲಸಿಕೆ ಪಡೆದ ಕೆಲವರಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಉಂಟಾಗಿರುವುದಾಗಿ AEFI ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೀಡಿರುವ ವರದಿಯಲ್ಲಿ ತಿಳಿಸಿದೆ

ಭಾರತದಲ್ಲಿ ಲಸಿಕೆ ಪಡೆದ ಎಷ್ಟು ಜನರಿಗೆ ರಕ್ತ ಹೆಪ್ಪುಗಟ್ಟಿದೆ
ಭಾರತದಲ್ಲಿ ಕೊವಿಶೀಲ್ಡ್ ಹಾಗೂ ಕೋವಾಕ್ಸಿನ್ ಲಸಿಕೆ ನೀಡುತ್ತಿದ್ದು ಅದರಲ್ಲಿ ಕೊವಿಶೀಲ್ಡ್ ಪಡೆದವರಲ್ಲಿ ಶೇ. 0.61 ಜನರಲ್ಲಿ ಈ ರೀತಿ ಕಂಡು ಬಂದಿದೆ. ಇತರ ದೇಶಗಳಿಗೆ ಹೋಲಿಸಿದರೆ ಕೊರೊನಾ ಲಸಿಕೆಯಿಂದ ಈ ರೀತಿಯಾಗಿರುವುದು ಭಾರತದಲ್ಲಿ ತುಂಬಾ ಕಡಿಮೆ. ಯುಕೆ ಮತ್ತು ಜರ್ಮನ್ ದೇಶಗಳಲ್ಲಿ 1ಮಿಲಿಯನ್ನಲ್ಲಿ 10 ಜನರಿಗೆ ಹೀಗೆ ಅಡ್ಡ ಪರಿಣಾಮ ಬೀರಿವೆ. ಭಾರತದಲ್ಲಿ ಇದುವರೆಗೆ 7.5 ಕೋಟಿ ಕೊವಿಶೀಲ್ಡ್ ಲಸಿಕೆ ನೀಡಲಾಗಿದೆ. ಅದರಲ್ಲಿ 700 ಜನರಲ್ಲಿ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಉಂಟಾಗಿದೆ ಎಂದು AEFI ತನ್ನ ವರದಿಯಲ್ಲಿ ತಿಳಿಸಿದೆ.

ಕೊವಾಕ್ಸಿನ್ನಿಂದ ಈ ರೀತಿಯ ಅಡ್ಡಪರಿಣಾಮವಾಗಿಲ್ಲ
ನಮ್ಮಲ್ಲಿ ಕೊವಿಶೀಲ್ಡ್ ಹಾಗೂ ಕೊವಾಕ್ಸಿನ್ ಎಂಬ ಎರಡು ಬಗೆಯ ಲಸಿಕೆ ನೀಡಲಾಗುತ್ತಿದೆ, ಎರಡೂ ಲಸಿಕೆಗಳು ಕೊರೊನಾ ವಿರುದ್ಧ ಹೋರಾಡುವಲ್ಲಿ ಸಮರ್ಥವಾಗಿವೆ. ಎರಡೂ ಲಸಿಕೆಗಳೂ ಕೆಲವರಲ್ಲಿ ಅಡ್ಡ ಪರಿಣಾಮ ಉಂಟು ಮಾಡಿವೆ. ಆದರೆ ಕೊವಾಕ್ಸಿನ್ ಪಡೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟಿರುವುದು ವರದಿಯಾಗಿಲ್ಲ.

ಈ ರೀತಿ ಲಸಿಕೆ ಪಡೆದ ಬಳಿಕ ಯಾವಾಗ ಕಂಡು ಬರುತ್ತದೆ?
ಈ ರೀತಿ ರಕ್ತ ಹೆಪ್ಪು ಗಟ್ಟುವ ಸಮಸ್ಯೆ ಕೆಲವರಲ್ಲಿ ಕೊವಿಶೀಲ್ಡ್ ಮೊದಲ ಡೋಸ್ ಪಡೆದ ವಾರದ ಬಳಿಕ ಕಂಡು ಬರುತ್ತದೆ. ರಕ್ತಸ್ರಾವ, ರಕ್ತ ಹೆಪ್ಪುಗಟ್ಟುವುದು ಕಂಡು ಬರುವುದು.

ರಕ್ತ ಹೆಪ್ಪುಗಟ್ಟಿದಾಗ ಕಂಡು ಬರುವ ಲಕ್ಷಣಗಳೇನು?
ಕೊವಿಶೀಲ್ಡ್ ಲಸಿಕೆ ಪಡೆದ ಬಳಿಕ ತುಂಬಾ ತಲೆನೋವು, ತಲೆಸುತ್ತು, ವಾಂತಿ, ಹೊಟ್ಟೆ ನೋವು, ಉಸಿರಾಟಕ್ಕೆ ತೊಂದರೆ ಈ ರೀತಿಯ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರಿಗೆ ತಿಳಿಸಿ. ಭಾರತದಲ್ಲಿ ಮಾರ್ಚ್ 31ರವರೆಗಿನ ಅಂಕಿ ಅಂಶದ ಪ್ರಕಾರ 700 ಜನರಲ್ಲಿ ಈ ರೀತಿಯ ಅಡ್ಡಪರಿಣಾಮ ಕಂಡು ಬಂದಿದೆ. ಅದರಲ್ಲಿ 617 ಜನರ ಸ್ಥಿತಿ ಗಂಭೀರವಾಗಿತ್ತು. 130 ಸಾವು ಸಂಭವಿಸಿದೆ. ಭಾರತದಲ್ಲಿ ಮೇ 14ರವರೆಗೆ 18.4 ಕೋಟಿ ಜನರು ಲಸಿಕೆ ಪಡೆದಿದ್ದಾರೆ.
(Kannada Copy of Boldsky Kannada)
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm