ಬ್ರೇಕಿಂಗ್ ನ್ಯೂಸ್
25-05-21 11:49 am Reena TK, BoldSky Kannada ಡಾಕ್ಟರ್ಸ್ ನೋಟ್
ದೇಶದಲ್ಲಿ ಒಂದು ಕಡೆ ಕೊರೊನಾ 2ನೇ ಅಲೆಯ ಆರ್ಭಟ ಅದರ ಜೊತೆಗೆ ಬ್ಲ್ಯಾಕ್, ವೈಟ್, ಯೆಲ್ಲೋ ಎಂಬ ಫಂಗಸ್ ಕಾಟ ಇವೆಲ್ಲಾ ವೈದ್ಯಕೀಯ ಕ್ಷೇತ್ರಕ್ಕೆ ದೊಡ್ಡ ಸವಲಾಗಿ ಪರಿಣಮಿಸಿದೆ.

ಕೆಲವು ರಾಜ್ಯಗಳಲ್ಲಿ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ಎಂದು ಘೋಷಿಸಲಾಗಿದೆ. ಭಾರತದಲ್ಲಿ 9000ಕ್ಕೂ ಅಧಿಕ ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು 270ಕ್ಕೂ ಅಧಿಕ ಜನ ಇದರಿಂದಾಗಿ ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್ ನಂತರ ಹಲವರಲ್ಲಿ ವೈಟ್ ಫಂಗಸ್ ಕಂಡು ಬರುತ್ತಿದೆ, ಇದೀಗ ಯೆಲ್ಲೋ ಫಂಗಸ್ ಬಗ್ಗೆಯೂ ತಜ್ಞರು ಎಚ್ಚರಿಸಿದ್ದಾರೆ.

ಈ ಎಲ್ಲಾ ಫಂಗಸ್ ನಿಯಂತ್ರಿಸಲು ಮಾರ್ಗ ಒಂದೇ
ಬ್ಲ್ಯಾಕ್, ವೈಟ್, ಯೆಲ್ಲೋ ಹೀಗೆ ಫಂಗಸ್ ಯಾವುದೇ ಆಗಿರಲಿ, ಇದನ್ನು ಗೆಲ್ಲಬೇಕಾದರೆ ಮಾರ್ಗ ಒಂದೇ , ಅದುವೇ ದೇಹದಲ್ಲಿರುವ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿ ಇಡುವುದಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮಧುಮೇಹಿಗಳಿಗೇ ಹೆಚ್ಚು ಅಪಾಯಕಾರಿಯಾಗಿರುವ ಫಂಗಸ್
ಮಧುಮೇಹಿಗಳಲ್ಲಿ ರೋಗ ನಿರೋಧಕ ಶಕ್ತಿ ಸ್ವಲ್ಪ ಕಡಿಮೆ ಇರುತ್ತದೆ, ಇದರಿಂದಾಗಿ ಫಂಗಸ್ ಅಪಾಯ ಇವರಿಗೆ ಅಧಿಕ. ಮಧುಮೇಹಿಗಳಿಗೆ ಕೋವಿಡ್ 19 ತಾಗಿದರೆ ಕೊರೊನಾದಿಂದ ಚೇತರಿಸಲು ಸ್ಟಿರಾಯ್ಡ್ ನೀಡಲಾಗುವುದು, ಈ ಸ್ಟಿರಾಯ್ಡ್ಗಳು ದೇಹದಲ್ಲಿ ಸಕ್ಕರೆಯಂಶವನ್ಉ ಅಧಿಕ ಮಾಡಿದಾಗ ಸಕ್ಕರೆ ಕಾಯಿಲೆ ಇರುವವರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಆಗ ಅವರ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ತುಂಬಾನೇ ಕಡಿಮೆಯಾಗುವುದು. ಬ್ಯಾಕ್, ವೈಟ್, ಯೆಲ್ಲೋ ಫಂಗಸ್ ಮ್ಯೂಕೋರ್ಮೈಕೋಸಿಸ್ ಎಂಬ ಫಂಗಿಯಿಂದ ಉಂಟಾಗುವುದು.ಇದು ನೀರು, ಮಣ್ಣು, ಗಾಳಿಯಲ್ಲಿರುತ್ತದೆ. ಫಂಗಸ್ ಉಂಟಾದಾಗ ಏನಾಗುತ್ತದೆ? ಫಂಗಸ್ ದಾಳಿಯಾದಾಗ ಕೋವಿಡ್ 19 ಲಕ್ಷಣಗಳಂತೆ ಕಂಡು ಬಂದರೂ RT-PCR ಟೆಸ್ಟ್ ರಿಸಲ್ಟ್ ನೆಗೆಟಿವ್ ಇರುತ್ತದೆ. ಆದರೆ ಸಿಟಿ ಸ್ಕ್ಯಾನ್ ಮಾಡಿದಾಗ ಶ್ವಾಸಕೋಶಕ್ಕೆ ಹಾನಿಯುಂಟಾಗಿರುತ್ತದೆ. ಇದು ಅಂಗಾಂಗಗಳಿಗೂ ಹಾನಿಯುಂಟು ಮಾಡುವುದು.
(Kannada Copy of Boldsky Kannada)
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm