ಬ್ರೇಕಿಂಗ್ ನ್ಯೂಸ್
26-05-21 11:29 am Shreeraksha , BoldSky Kannada ಡಾಕ್ಟರ್ಸ್ ನೋಟ್
ಗ್ಯಾಸ್ಟ್ರಿಕ್ ಸಮಸ್ಯೆ ಯಾರಿಗಿಲ್ಲ ಹೇಳಿ? ಇಂದಿನ ಕಾಲದಲ್ಲಿ ಪ್ರತಿಯೊಬ್ಬರನ್ನೂ ಕಾಡುತ್ತಿರುವ ಸಮಸ್ಯೆ. ಇದಕ್ಕೆ ಕಾರಣ ನಾವೇ. ಸರಿಯಾದ ಸಮಯಕ್ಕೆ ತಿನ್ನದೇ ಇರುವುದರಿಂದ ಈ ಗ್ಯಾಸ್ಟ್ರಿಕ್ ಅಜೀರ್ಣದಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದಕ್ಕೆ ಉತ್ತಮ ಮನೆಮದ್ದು ಅಂದ್ರೆ ಹುರಿದ ಜೀರಿಗೆ ಮತ್ತು ಕಪ್ಪು ಉಪ್ಪು ಅಥವಾ ಬ್ಲಾಕ್ ಸಾಲ್ಟ್. ಇದನ್ನು ತಿನ್ನುವುದರಿಂದ ನಿಮಗೆ ತಕ್ಷಣ ಗ್ಯಾಸ್ಟ್ರಿಕ್ ನಿಂದ ಮುಕ್ತಿ ದೊರೆಯುತ್ತದೆ ಮತ್ತು ನಿಮ್ಮ ಚಯಾಪಚಯವನ್ನು ಬಲಪಡಿಸುತ್ತದೆ. ಇದಷ್ಟೇ ಅಲ್ಲದೆ ಹುರಿದ ಜೀರಿಗೆ ಮತ್ತು ಕಪ್ಪು ಉಪ್ಪಿನಿಂದ ಇನ್ನೂ ಅನೇಕ ಪ್ರಯೋಜನಗಳಿವೆ, ಅವುಗಳೆಲ್ಲದರ ಬಗ್ಗೆ ತಿಳಿದುಕೊಳ್ಳೋಣ.
ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿ:
ಎನ್ಸಿಬಿಐ ವೆಬ್ಸೈಟ್ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, ಜೀರ್ಣಕಾರಿ ಸಮಸ್ಯೆಗಳಾದ ಅತಿಸಾರ, ಅಜೀರ್ಣ, ಗ್ಯಾಸ್ಟ್ರಿಕ್ ಮತ್ತು ವಾಯುಭಾರವನ್ನು ಕಡಿಮೆ ಮಾಡಲು ಜೀರಿಗೆಯನ್ನು ದೀರ್ಘಕಾಲದಿಂದ ಬಳಸಲಾಗುತ್ತದೆ.
ಅಲ್ಲದೆ, ಕಪ್ಪು ಉಪ್ಪು ವಿರೇಚಕ ಗುಣಗಳನ್ನು ಹೊಂದಿದ್ದು, ಜೀರ್ಣಾಂಗ ವ್ಯವಸ್ಥೆಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಹುರಿದ ಜೀರಿಗೆ ಮತ್ತು ಕಪ್ಪು ಉಪ್ಪನ್ನು ಒಟ್ಟಿಗೆ ಸೇವಿಸುವುದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಬಹುದು.

ತೂಕ ನಷ್ಟಕ್ಕೆ ಸಹಾಯ:
ಜೀರಿಗೆ ಜೀವಾಣು ಮತ್ತು ದೇಹದಲ್ಲಿನ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಇದು ದೇಹದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ಆದ್ದರಿಂದ ಇದರ ಬಳಕೆಯು ತೂಕವನ್ನು ಕಡಿಮೆ ಮಾಡಲು ಪ್ರಯೋಜನಕಾರಿಯಾಗಿದೆ. ಇದಲ್ಲದೆ, ಜೈವಿಕ ತಂತ್ರಜ್ಞಾನ ಮಾಹಿತಿ ರಾಷ್ಟ್ರೀಯ ಕೇಂದ್ರದ ಪ್ರಕಾರ, ಕಪ್ಪು ಉಪ್ಪು ಬೊಜ್ಜು ವಿರೋಧಿ ಗುಣಗಳನ್ನು ಹೊಂದಿದ್ದು, ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರಕ್ತದೊತ್ತಡ ನಿಯಂತ್ರಣ :
ರಕ್ತದೊತ್ತಡವನ್ನು ನಿಯಂತ್ರಿಸಲು ಕಪ್ಪು ಉಪ್ಪು ಮತ್ತು ಜೀರಿಗೆ ಎರಡೂ ಬಹಳ ಪರಿಣಾಮಕಾರಿ. ಕಪ್ಪು ಉಪ್ಪಿನಲ್ಲಿ ಸೋಡಿಯಂ ಪ್ರಮಾಣವು ತುಂಬಾ ಕಡಿಮೆ ಮತ್ತು ಸಾಮಾನ್ಯ ಉಪ್ಪಿನ ಬದಲಿಗೆ ಬಳಸಿದರೆ ಅದು ರಕ್ತದೊತ್ತಡವನ್ನು ಸುಧಾರಿಸುತ್ತದೆ. ಇದಲ್ಲದೆ, ಜೀರಿಗೆ ಆಂಟಿ-ಡಯಾಬಿಟಿಕ್ ಪರಿಣಾಮಗಳನ್ನು ಹೊಂದಿದ್ದು, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಮೂಲಕ ಮಧುಮೇಹವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಹೊಟ್ಟೆ ನೋವಿನಿಂದ ಪರಿಹಾರ:
ಹುರಿದ ಜೀರಿಗೆ ಮತ್ತು ಕಪ್ಪು ಉಪ್ಪು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಒಂದು ರಾಮಬಾಣವಾಗಿದ್ದು, ಸಾಮಾನ್ಯ ಹೊಟ್ಟೆನೋವಿನ ಜೊತೆಗೆ ಮುಟ್ಟಿನ ಸೆಳೆತವನ್ನು ಕಡಿಮೆ ಮಾಡಲು ಸಹ ತುಂಬಾ ಪರಿಣಾಮಕಾರಿಯಾಗಿದೆ. ಹೊಟ್ಟೆನೋವಿನ ಸಂದರ್ಭದಲ್ಲಿ ಅರ್ಧ ಟೀ ಚಮಚ ಹುರಿದ ಜೀರಿಗೆ ಮತ್ತು ಕಪ್ಪು ಉಪ್ಪನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ತೆಗೆದುಕೊಳ್ಳಿ.

ರೋಗನಿರೋಧಕ ಶಕ್ತಿಯ ಹೆಚ್ಚಳ :
ಈ ಪಾಕವಿಧಾನವು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎಲ್ಲಾ ಸಮಸ್ಯೆಗಳು ಹೊಟ್ಟೆಯ ಮೂಲಕ ಹಾದುಹೋಗುವುದೇ ಇದಕ್ಕೆ ಕಾರಣ. ಕಪ್ಪು ಉಪ್ಪು ಮತ್ತು ಜೀರಿಗೆ ನಿಮ್ಮ ಕರುಳಿನ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದ್ದು, ಎರಡೂ ಕಬ್ಬಿಣದಿಂದ ಸಮೃದ್ಧವಾಗಿದ್ದು ರೋಗನಿರೋಧಕ ವ್ಯವಸ್ಥೆಗೆ ಸಹಕಾರಿ.
(Kannada Copy of Boldsky Kannada)
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm